ಸಿಸಿ ಕ್ಯಾಮರಾ, ಸಾಮಾಜಿಕ ಜಾಲತಾಣಗಳಿಂದ ನಾಯಿಮರಿ ಪತ್ತೆ!


Team Udayavani, Oct 16, 2021, 6:50 PM IST

nayi

ಸಾಗರ: ಕಾಣೆಯಾದ ಮುದ್ದಾದ ನಾಯಿಮರಿಯೊಂದು ಸಿಸಿ ಕ್ಯಾಮರಾ, ಸಾಮಾಜಿಕ ಜಾಲತಾಣಗಳ ನೆರವಿನಿಂದ ಮರಳಿ ಮನೆಗೆ ಸೇರಿದ ಘಟನೆ ನಡೆದಿದೆ.

ಜೆಸಿ ರಸ್ತೆಯಲ್ಲಿನ ಐಸ್‌ಕ್ರೀಂ ಮಾರಾಟಗಾರ ಪ್ರಶಾಂತ್ ಬಾಬು ಸಾಕಿದ್ದ ನಾಲ್ಕು ತಿಂಗಳ ಪುಟ್ಟ ನಾಯಿ ಮರಿ ಶುಕ್ರವಾರ ಮಧ್ಯಾಹ್ನದ ವೇಳೆ ಕಾಣೆಯಾಗಿ ಮನೆಯವರನ್ನು ಕಂಗಾಲು ಮಾಡಿತ್ತು.

ಅಂಗಡಿಗಳಿಗೆ ಐಸ್‌ಕ್ರೀಂ ವಿತರಿಸಲು ಪ್ರಶಾಂತ್‌ಬಾಬು ಶುಕ್ರವಾರ ಮಧ್ಯಾಹ್ನ ಮನೆಯಿಂದ ಹೊರಟಾಗ, ನಾಲ್ಕು ತಿಂಗಳ ಪೊಮೋರಿಯನ್ ನಾಯಿ ’ಕ್ಯೂಟಿ’ ಸಹ ಮನೆಯಿಂದ ಹೊರಗೆ ಬಂದಿದೆ. ಜೆಸಿ ರಸ್ತೆಯಲ್ಲಿ ವ್ಯಕ್ತಿಯೋರ್ವನ ಕಾಲ ಬುಡದಲ್ಲಿ ಪುಟ್ಟ ಮರಿ ಕಾಣಿಸಿಕೊಂಡಿದೆ. ಅದನ್ನು ಅವರು ಎತ್ತಿಕೊಂಡು ತಮ್ಮ ದ್ವಿಚಕ್ರವಾಹನದಲ್ಲಿ ತೆರಳಿದ್ದಾರೆ.

ನಾಯಿಮರಿ ಕಾಣೆಯಾದ ಹಿನ್ನೆಲೆಯಲ್ಲಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಪುಟ್ಟ ಮರಿಯನ್ನು ದ್ವಿಚಕ್ರವಾಹನದಲ್ಲಿ ಕೂರಿಸಿಕೊಂಡ ವ್ಯಕ್ತಿ ವಿಠ್ಠಲ ದೇವಸ್ಥಾನ ರಸ್ತೆ, ಅಶೋಕ ರಸ್ತೆಗಳಲ್ಲಿ ಸಂಚರಿಸಿದ ದೃಶ್ಯ ಕಂಡುಬಂದಿದೆ. ಅವುಗಳ ವಿಡಿಯೋ ಮತ್ತು ಫೋಟೋಗಳನ್ನು ವಿವಿಧ ವಾಟ್ಸ್‌ಆಪ್ ಗುಂಪುಗಳಲ್ಲಿ ಶೇರ್ ಮಾಡಲಾಗಿತ್ತು.

ಶನಿವಾರ ಬೆಳಗ್ಗೆ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ವ್ಯಕ್ತಿ ದೂರವಾಣಿ ಮೂಲಕ ಸಂಪರ್ಕಿಸಿ, ನಾಯಿಮರಿ ತನ್ನ ಮನೆಯಲ್ಲಿ ಇರುವುದಾಗಿ ತಿಳಿಸಿದ್ದಾನೆ. ತಕ್ಷಣ ಪ್ರಶಾಂತ್‌ಬಾಬು ವಾಹನದಲ್ಲಿ ಧಾವಿಸಿ, ನಾಯಿ ಮರಿಯನ್ನು ಮನೆಗೆ ಕರೆತಂದಿದ್ದಾರೆ. ಕಾಣೆಯಾಗಿದ್ದ ನಾಯಿ ಮರಿ ಪತ್ತೆಗೆ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರ ಸಿಸಿ ಕ್ಯಾಮರಾದ ದೃಶ್ಯ ಸಹಕಾರಿಯಾಗಿದೆ.

ಶುಕ್ರವಾರ ಮಧ್ಯಾಹ್ನ ನಾಯಿ ಮರಿ ಕಾಣೆಯಾಗಿತ್ತು. ಸಿಸಿ ಕ್ಯಾಮರಾದ ದೃಶ್ಯಗಳನ್ನು ಪರಿಶೀಲಿಸಿ ವಾಟ್ಸ್‌ಆಪ್ ಗ್ರೂಪ್‌ಗಳಲ್ಲಿ ಶೇರ್ ಮಾಡಿದ್ದರಿಂದ, ನಾಯಿಯನ್ನು ಕರೆದುಕೊಂಡು ಹೋಗಿದ್ದ ವ್ಯಕ್ತಿಯೇ ದೂರವಾಣಿ ಮೂಲಕ ಸಂಪರ್ಕಿಸಲು ಸಾಧ್ಯವಾಗಿದೆ.

ಶೇರ್ ಮಾಡಲಾಗಿದ್ದ ದೃಶ್ಯಾವಳಿಗಳನ್ನು ಡಿಲಿಟ್ ಮಾಡಬೇಕೆಂದು ಆ ವ್ಯಕ್ತಿ ಕೋರಿದ್ದಾರೆ.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸಭೆಗೆ ಈಶ್ವರಪ್ಪ ಗೈರು: ಬಿಜೆಪಿ ನಿರ್ಲಕ್ಷ್ಯ

PM ಮೋದಿ ಸಭೆಗೆ ಈಶ್ವರಪ್ಪ ಗೈರು: ಬಿಜೆಪಿ ನಿರ್ಲಕ್ಷ್ಯ

Teachers ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು

Teachers ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು

11-thirthahalli

Thirthahalli: ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ… ಬೆಳೆಸಿದ್ದಾರೋ ಎಂದು ಚುನಾವಣೆ ಬಳಿಕ ಗೊತ್ತಾಗಲಿದೆ

ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ… ಬೆಳೆಸಿದ್ದಾರೋ ಎಂದು ಚುನಾವಣೆ ಬಳಿಕ ಗೊತ್ತಾಗಲಿದೆ

2-shivamogga

Shivamogga: ಲಾಂಗ್ ನಿಂದ ಯುವಕನಿಗೆ ಹಲ್ಲೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.