ಸಿಸಿ ಕ್ಯಾಮರಾ, ಸಾಮಾಜಿಕ ಜಾಲತಾಣಗಳಿಂದ ನಾಯಿಮರಿ ಪತ್ತೆ!
Team Udayavani, Oct 16, 2021, 6:50 PM IST
ಸಾಗರ: ಕಾಣೆಯಾದ ಮುದ್ದಾದ ನಾಯಿಮರಿಯೊಂದು ಸಿಸಿ ಕ್ಯಾಮರಾ, ಸಾಮಾಜಿಕ ಜಾಲತಾಣಗಳ ನೆರವಿನಿಂದ ಮರಳಿ ಮನೆಗೆ ಸೇರಿದ ಘಟನೆ ನಡೆದಿದೆ.
ಜೆಸಿ ರಸ್ತೆಯಲ್ಲಿನ ಐಸ್ಕ್ರೀಂ ಮಾರಾಟಗಾರ ಪ್ರಶಾಂತ್ ಬಾಬು ಸಾಕಿದ್ದ ನಾಲ್ಕು ತಿಂಗಳ ಪುಟ್ಟ ನಾಯಿ ಮರಿ ಶುಕ್ರವಾರ ಮಧ್ಯಾಹ್ನದ ವೇಳೆ ಕಾಣೆಯಾಗಿ ಮನೆಯವರನ್ನು ಕಂಗಾಲು ಮಾಡಿತ್ತು.
ಅಂಗಡಿಗಳಿಗೆ ಐಸ್ಕ್ರೀಂ ವಿತರಿಸಲು ಪ್ರಶಾಂತ್ಬಾಬು ಶುಕ್ರವಾರ ಮಧ್ಯಾಹ್ನ ಮನೆಯಿಂದ ಹೊರಟಾಗ, ನಾಲ್ಕು ತಿಂಗಳ ಪೊಮೋರಿಯನ್ ನಾಯಿ ’ಕ್ಯೂಟಿ’ ಸಹ ಮನೆಯಿಂದ ಹೊರಗೆ ಬಂದಿದೆ. ಜೆಸಿ ರಸ್ತೆಯಲ್ಲಿ ವ್ಯಕ್ತಿಯೋರ್ವನ ಕಾಲ ಬುಡದಲ್ಲಿ ಪುಟ್ಟ ಮರಿ ಕಾಣಿಸಿಕೊಂಡಿದೆ. ಅದನ್ನು ಅವರು ಎತ್ತಿಕೊಂಡು ತಮ್ಮ ದ್ವಿಚಕ್ರವಾಹನದಲ್ಲಿ ತೆರಳಿದ್ದಾರೆ.
ನಾಯಿಮರಿ ಕಾಣೆಯಾದ ಹಿನ್ನೆಲೆಯಲ್ಲಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಪುಟ್ಟ ಮರಿಯನ್ನು ದ್ವಿಚಕ್ರವಾಹನದಲ್ಲಿ ಕೂರಿಸಿಕೊಂಡ ವ್ಯಕ್ತಿ ವಿಠ್ಠಲ ದೇವಸ್ಥಾನ ರಸ್ತೆ, ಅಶೋಕ ರಸ್ತೆಗಳಲ್ಲಿ ಸಂಚರಿಸಿದ ದೃಶ್ಯ ಕಂಡುಬಂದಿದೆ. ಅವುಗಳ ವಿಡಿಯೋ ಮತ್ತು ಫೋಟೋಗಳನ್ನು ವಿವಿಧ ವಾಟ್ಸ್ಆಪ್ ಗುಂಪುಗಳಲ್ಲಿ ಶೇರ್ ಮಾಡಲಾಗಿತ್ತು.
ಶನಿವಾರ ಬೆಳಗ್ಗೆ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ವ್ಯಕ್ತಿ ದೂರವಾಣಿ ಮೂಲಕ ಸಂಪರ್ಕಿಸಿ, ನಾಯಿಮರಿ ತನ್ನ ಮನೆಯಲ್ಲಿ ಇರುವುದಾಗಿ ತಿಳಿಸಿದ್ದಾನೆ. ತಕ್ಷಣ ಪ್ರಶಾಂತ್ಬಾಬು ವಾಹನದಲ್ಲಿ ಧಾವಿಸಿ, ನಾಯಿ ಮರಿಯನ್ನು ಮನೆಗೆ ಕರೆತಂದಿದ್ದಾರೆ. ಕಾಣೆಯಾಗಿದ್ದ ನಾಯಿ ಮರಿ ಪತ್ತೆಗೆ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರ ಸಿಸಿ ಕ್ಯಾಮರಾದ ದೃಶ್ಯ ಸಹಕಾರಿಯಾಗಿದೆ.
ಶುಕ್ರವಾರ ಮಧ್ಯಾಹ್ನ ನಾಯಿ ಮರಿ ಕಾಣೆಯಾಗಿತ್ತು. ಸಿಸಿ ಕ್ಯಾಮರಾದ ದೃಶ್ಯಗಳನ್ನು ಪರಿಶೀಲಿಸಿ ವಾಟ್ಸ್ಆಪ್ ಗ್ರೂಪ್ಗಳಲ್ಲಿ ಶೇರ್ ಮಾಡಿದ್ದರಿಂದ, ನಾಯಿಯನ್ನು ಕರೆದುಕೊಂಡು ಹೋಗಿದ್ದ ವ್ಯಕ್ತಿಯೇ ದೂರವಾಣಿ ಮೂಲಕ ಸಂಪರ್ಕಿಸಲು ಸಾಧ್ಯವಾಗಿದೆ.
ಶೇರ್ ಮಾಡಲಾಗಿದ್ದ ದೃಶ್ಯಾವಳಿಗಳನ್ನು ಡಿಲಿಟ್ ಮಾಡಬೇಕೆಂದು ಆ ವ್ಯಕ್ತಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ