ಪುತ್ತೂರು ಜಿಲ್ಲೆಯಾದರೆ ಬೆಳ್ತಂಗಡಿಗೂ ಅನುಕೂಲ: ಪ್ರದೇಶವಾರು ಮೂಲ ಸೌಕರ್ಯ ಅಭಿವೃದ್ಧಿ ಸಾಧ್ಯ


Team Udayavani, Feb 28, 2021, 5:20 AM IST

ಪುತ್ತೂರು ಜಿಲ್ಲೆಯಾದರೆ ಬೆಳ್ತಂಗಡಿಗೂ ಅನುಕೂಲ: ಪ್ರದೇಶವಾರು ಮೂಲ ಸೌಕರ್ಯ ಅಭಿವೃದ್ಧಿ ಸಾಧ್ಯ

ಪುತ್ತೂರು ಜಿಲ್ಲೆಯಾಗಬೇಕೆಂಬ ಬೇಡಿಕೆ ಈಡೇರಿದರೆ ತಾಲೂಕುಗಳಿಗೂ ಸಾಕಷ್ಟು ಲಾಭವಾಗಲಿದೆ. ಬೆಳ್ತಂಗಡಿ ಬಹಳ ಪ್ರಮುಖವಾದ ತಾಲೂಕು. ಆದರೆ ಅಭಿವೃದ್ಧಿಯ ಲೆಕ್ಕಾಚಾರದಲ್ಲಿ ಇನ್ನಷ್ಟು ವೇಗದಲ್ಲಿ ಸಾಗಬೇಕಿದೆ. ಪುತ್ತೂರು ಜಿಲ್ಲೆಯಾದರೆ ಬೆಳ್ತಂಗಡಿಗೆ ಒಂದಿಷ್ಟು ಅವಕಾಶ ಹೆಚ್ಚುವ ಸಾಧ್ಯತೆ ಇದೆ.

ಬೆಳ್ತಂಗಡಿ: ದ.ಕ. ಜಿಲ್ಲೆಯ ಅತೀ ದೊಡ್ಡ ವಿಧಾನ ಸಭಾ ಕ್ಷೇತ್ರವನ್ನು ಹೊಂದಿರುವ ಬೆಳ್ತಂಗಡಿ ತಾಲೂಕು ಪ್ರಾದೇಶಿಕವಾಗಿ ಅತ್ತ ಚಿಕ್ಕಮಗಳೂರು-ಇತ್ತ ಮಂಗಳೂರು ಸಂಪರ್ಕ ಕೇಂದ್ರದ ಮಧ್ಯ ಹರಡಿ ಕೊಂಡಿದೆ. ಜಿಲ್ಲಾವಾರು ಸಿಗುವ ಅನುದಾನದಲ್ಲಿ ಅಭಿವೃದ್ಧಿಗಾಗಿ ಹಂಬಲಿಸುತ್ತಿರುವ ತಾಲೂಕಿಗೆ ಸಿಗುತ್ತಿರುವ ಪ್ರಮಾಣ ಸಾಲದಾಗುತ್ತಿದೆ.

ಈ ಮಧ್ಯೆ ಪುತ್ತೂರು ಜಿಲ್ಲೆಯಾಗ ಬೇಕೆಂಬ ದಶಕಗಳ ಕೂಗಿಗೆ ಗ್ರಾಮೀಣ ಭಾಗವಾದ ಬೆಳ್ತಂಗಡಿ ತಾಲೂಕಿನ ಜನತೆಯೂ ಕಿವಿಯಾಗಿದ್ದಾರೆ. ಮಂಗಳೂರು- ವಿಲ್ಲುಪುರಂ, ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋದರೂ ಕೈಗಾರಿಕೆ, ಉದ್ಯಮ ವಿಷಯದಲ್ಲಿ ಇನ್ನೂ ಸಾಕಷ್ಟು ಅಭಿವೃದ್ಧಿಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಪುತ್ತೂರು ಜಿಲ್ಲೆಯಾದರೆ ಗ್ರಾಮೀಣ ಭಾಗಕ್ಕೆ ಆದ್ಯತೆ ಹೆಚ್ಚು ಸಿಗಬಹುದು. ಅದು ಸಾಧ್ಯವಾದರೆ ಬೆಳ್ತಂಗಡಿಗೂ ಅನುಕೂಲವಾಗಲಿದೆ ಎಂಬುದು ಸದ್ಯದ ಲೆಕ್ಕಾಚಾರ.

ಪ್ರವಾಸೋದ್ಯಮ ಅಭಿವೃದ್ಧಿ
ಪುತ್ತೂರು ಜಿಲ್ಲೆಯಾದರೆ ಜಿಲ್ಲಾಧಿಕಾರಿಗಳು ಕಚೇರಿ ಪುತ್ತೂರು ಬಂದಲ್ಲಿ, ಸಹಾಯಕ ಆಯುಕ್ತರ ಕಚೇರಿ ಬೆಳ್ತಂಗಡಿ ಬರುವ ಸಾಧ್ಯತೆ ಇದೆ. ಹಾಗಾದಲ್ಲಿ ಅಧಿಕಾರಿಗಳ ಮೇಲಿನ ಒತ್ತಡ ತಗ್ಗಲಿದ್ದು, ಗ್ರಾಮೀಣರ ಸಂಕಷ್ಟಗಳನ್ನು ಹತ್ತಿರದಿಂದ ಆಲಿಸಲು, ಸಮಸ್ಯೆಗೆ ಶೀಘ್ರ ಸ್ಪಂದಿಸಲು ಸಾಧ್ಯ. ಬೆಳ್ತಂಗಡಿ ತಾಲೂಕಿಗೆ ಧಾರ್ಮಿಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಮುಕುಟಪ್ರಾಯ. ಪ್ರವಾಸೋದ್ಯಮವಾಗಿ ಶಿಶಿಲ ಶಿಶಿಲೇಶ್ವರ ಮತ್ಸಕ್ಷೇತ್ರ, ಸುರ್ಯ ಸದಾಶಿವರುದ್ರ ದೇವಸ್ಥಾನ, ಕೊಕ್ಕಡ ಶ್ರೀ ಸೌತಡ್ಕ ಮಹಾಗಣಪತಿ ಕ್ಷೇತ್ರ ಸೇರಿದಂತೆ ಚಾರಣಿಗ ಸ್ವರ್ಗ ಐತಿಹಾಸಿಕ ಗಡಾಯಿಕಲ್ಲು, ಚಾರ್ಮಾಡಿ ಘಾಟ್‌, ಜಲಪಾತ ರಮಣೀಯ ತಾಣಗಳ ಅಭಿವೃದ್ಧಿಗೆ ಪೂರಕ ಅನುದಾನ ಲಭ್ಯವಾಗಬಹುದು. ಇದರಿಂದ ಸ್ಥಳೀಯ ಆರ್ಥಿಕತೆಯೂ ಬೆಳೆಯಬಹುದು.

ಕೈಗಾರಿಕೆ ಹಬ್‌ ಸ್ಥಾಪನೆ
ಗ್ರಾಮೀಣ ಭಾಗದಲ್ಲಿ ಅತೀ ಹೆಚ್ಚು ಮಂದಿ ವಿದ್ಯಾವಂತರಿದ್ದರೂ ಉದ್ಯೋಗ ಅರಸಿ ಬೆಂಗಳೂರು, ಮಂಗಳೂರಿನತ್ತ ಮುಖ ಮಾಡುವರೇ ಹೆಚ್ಚು. ಈಗಾಗಲೆ ಕೈಗಾರಿಕೆ ಸ್ಥಾಪನೆಗೆ ಜಿಲ್ಲಾಡಳಿತದಿಂದ ಸ್ಥಳಾವಕಾಶ ಕಲ್ಪಿಸಲಾಗಿದೆ. ಆದರೆ ಕೈಗಾರಿಕೆ ಸ್ಥಾಪನೆಯಾಗಿಲ್ಲ. ಇದರ ಸ್ಥಾಪನೆಗೂ ಹೆಚ್ಚು ಗಮನ ನೀಡಬಹುದು.

ನಿಗಮಗಳ ಮೂಲಕ ಅಭಿವೃದ್ಧಿ
ಅಂಬೇಡ್ಕರ್‌ ನಿಗಮ, ದೇವರಾಜು ಅರಸು ನಿಗಮ ಸೇರಿದಂತೆ ಅನೇಕ ನಿಗಮಗಳಿಗೆ ಜಿಲ್ಲಾಧಿಕಾರಿಗಳೇ ಅಧ್ಯಕ್ಷರಾಗಿರುತ್ತಾರೆ.ಸದ್ಯ ಸಿಗುವ ಅನುದಾನ ಎಲ್ಲ ತಾಲೂಕುಗಳಿಗೆ ಹರಿದು ಹಂಚಿಹೋಗುತ್ತಿದೆ. ಪುತ್ತೂರು ಜಿಲ್ಲೆಯಾದರೆ ಬೆಳ್ತಂಗಡಿ ತಾಲೂಕಿನಲ್ಲಿ ಅತಿ ಹೆಚ್ಚು ಮಲೆಕುಡಿಯ, ಪ.ಜಾತಿ/ಪಂ. ಕುಟುಂಗಳಿದ್ದು, ಅವುಗಳ ಅಭಿವೃದ್ಧಿ ಪೂರಕ ಅನುದಾನ ಜತೆಗೆ ಅವರ ಮಕ್ಕಳ ಶಿಕ್ಷಣ ಪೂರಕವಾಗಲಿದೆ.

ಕಂದಾಯ ಇಲಾಖೆ ಸೇರಿದಂತೆ ಅನೇಕ ಸರಕಾರಿ ಇಲಾಖೆಗಳು ಜಿಲ್ಲಾಕೇಂದ್ರಕ್ಕೆ ಬಂದರೆ ಅದರ ಲಾಭ ತಾಲೂಕಿಗೂ ಆಗುತ್ತದೆ. ಇದರೊಂದಿಗೆ ಇನ್ನಷ್ಟು ಕಾಲೇಜುಗಳು, ವಿದ್ಯಾಸಂಸ್ಥೆಗಳು ಬಂದರೆ ಗ್ರಾಮೀಣ ಭಾಗ ವಿದ್ಯಾರ್ಥಿಗಳಿಗೆ ಕಲಿಕೆಗೆ ಮತ್ತಷ್ಟು ಅವಕಾಶಗಳೂ ತೆರೆಯಬಹುದು.

ಕೃಷಿ ಪಾರ್ಕ್‌ ನಿರ್ಮಾಣ
ಬೆಳ್ತಂಗಡಿ, ಸುಳ್ಯ ಈ ಭಾಗದಲ್ಲಿ ಕೃಷಿ ಆಶ್ರಿತ ಭೂಮಿಗಳು ಅತೀ ಹೆಚ್ಚಿವೆ. ಆದರೆ ಸೂಕ್ತ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಸ್ಥೆಯಿಲ್ಲ. ಕೃಷಿಗೆ ನೇರ ಮಾರುಕಟ್ಟೆ ವ್ಯವಸ್ಥೆ ಒದಗಿಸಲು ಕೃಷಿ ಪಾರ್ಕ್‌ ನಿರ್ಮಾಣಕ್ಕೂ ಉತ್ತೇಜನ ಸಿಗಬಹುದು. ಇದಲ್ಲದೆ ಎಸ್‌ಇಝೆಡ್‌ ಅನುದಾನಗಳು ಬರಬಹುದು.

- ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.