ವೈಮಾನಿಕ ತರಬೇತಿ ಶಾಲೆಯನ್ನು ಶೀಘ್ರ ಪುನರಾರಂಭಿಸಿ : ನಾರಾಯಣ ಗೌಡ
Team Udayavani, Feb 25, 2021, 8:10 PM IST
ಬೆಂಗಳೂರು: ಮೂರು ವರ್ಷಗಳಿಂದ ಸ್ಥಗಿತಗೊಂಡಿರುವ ಜಕ್ಕೂರಿನಲ್ಲಿರುವ ಸರಕಾರಿ ವೈಮಾನಿಕ ತರಬೇತಿ ಶಾಲೆಯ ಪುನರಾರಂಭಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಾ| ನಾರಾಯಣ ಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಚಿವರು ಜಕ್ಕೂರಿನಲ್ಲಿರುವ ವೈಮಾನಿಕ ತರಬೇತಿ ಶಾಲೆಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ್ದು, ಅಲ್ಲಿನ ಅವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ವೈಮಾನಿಕ ತರಬೇತಿ ಶಾಲೆ ಪುನರಾರಂಭವಾದರೆ ನೂರಾರು ಯುವಕರಿಗೆ ಉದ್ಯೋಗ ಲಭಿಸುತ್ತದೆ. ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಮಾನಯಾನ ಸೌಲಭ್ಯ ಹೆಚ್ಚುತ್ತಿದ್ದು, ಪೈಲಟ್ಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಆದ್ದರಿಂದ ಅಧಿಕಾರಿಗಳು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ಇದನ್ನೂ ಓದಿ:ಮಾ.1ರಿಂದ 10 ದಿನಗಳ ಕಾಲ ಮಹಾರಾಷ್ಟ್ರ ವಿಧಾನಸಭೆ ಬಜೆಟ್ ಅಧಿವೇಶನ