![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ಉದ್ದಿಮೆಗಳ ಖಾತಾ ಬದಲಾವಣೆ ಸಮಸ್ಯೆಗೆ ತ್ವರಿತ ಪರಿಹಾರ: ಅತಿಕ್
Team Udayavani, Jan 31, 2023, 8:20 AM IST
![1-sadsad](https://www.udayavani.com/wp-content/uploads/2023/01/1-sadsad-14-620x376.jpg)
ಬೆಂಗಳೂರು: ಸಣ್ಣ ಉದ್ದಿಮೆಗಳಿಗೆ ಅಗತ್ಯವಾಗಿರುವ ಖಾತಾ ಬದಲಾವಣೆ, ಪರಿವರ್ತನೆಯ ಸಮಸ್ಯೆ ವ್ಯಾಪಕವಾಗಿದ್ದು ಇದನ್ನು ಪರಿಹರಿಸಲು ಖಾತಾ ಅದಾಲತ್ಗಳನ್ನು ನಡೆಸಲು ಪಂಚಾಯತ್ರಾಜ್ ಇಲಾಖೆ ಸಿದ್ಧವಿದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಭರವಸೆ ನೀಡಿದ್ದಾರೆ.
ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಆಯೋಜಿಸಿದ್ದ ಸಂವಾದ ಸಭೆಯಲ್ಲಿ ಪಾಲ್ಗೊಂಡ ಅವರಲ್ಲಿ ಹಲವು ಉದ್ದಿಮೆದಾರರು ಖಾತಾ ವಿಷಯದ ಸಮಸ್ಯೆಯ ಬಗ್ಗೆ ಅಳಲು ತೋಡಿಕೊಂಡ ಸಂದರ್ಭದಲ್ಲಿ ಈ ಭರವಸೆ ನೀಡಿದರು.
ಖಾತಾ ಬದಲಾವಣೆಯನ್ನು ಕಾಲಮಿತಿಯಲ್ಲಿ ಮಾಡಬೇಕು ಎಂಬ ನಿಯಮವಿದೆ. ಅದರಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳು ಕಾರ್ಯನಿರ್ವಹಿಸಬೇಕು. ಅದಾಗ್ಯೂ ಖಾತಾ ಬದಲಾವಣೆ ಸಮಸ್ಯೆಗಳಿದ್ದಲ್ಲಿ ಅದರ ತ್ವರಿತ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲು ಇಲಾಖೆ ಪ್ರಯತ್ನ ನಡೆಸಲಿದೆ ಎಂದು ಹೇಳಿದರು.
ಉದ್ದಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ಪಂಚಾಯತ್ನ ಚುನಾಯಿತ ಪ್ರತಿನಿಧಿಗಳಿಗೆ, ಪಂಚಾಯತ್ ಅಧಿಕಾರಿಗಳಿಗೆ ಕೆಲವು ಅಧಿಕಾರಗಳಿವೆ. ಆದರೆ ಗ್ರಾಮೀಣ ಭಾಗದಲ್ಲಿ ಉದ್ದಿಮೆಗಳನ್ನು ಸ್ಥಾಪಿಸುವ ಉದ್ದೇಶದಿಂದ ಎಲ್ಲರೂ ಪರಸ್ಪರ ಸಹಕಾರ ನೀಡಬೇಕು. ಇದಕ್ಕಾಗಿ ವ್ಯವಸ್ಥೆಯೊಂದನ್ನು ರೂಪಿಸುವ ಚಿಂತನೆ ಇದೆ ಎಂದು ಹೇಳಿದರು.
ತೆರಿಗೆ ನಿಗದಿ ಮತ್ತು ತೆರಿಗೆ ಕಟ್ಟುವ ಬಗೆಗಿನ ಅನುಮಾನಗಳನ್ನು ಅತಿಕ್ ಗಮನಕ್ಕೆ ತಂದಾಗ, ತೆರಿಗೆಯ ಮಾಹಿತಿಯನ್ನು ಒಳಗೊಂಡ ಪ್ರಶ್ನೋತ್ತರ ಮಾದರಿಯ ಸಣ್ಣ ಸಣ್ಣ ವಿಡಿಯೋ ತುಣುಕುಗಳನ್ನು ಮಾಡಿ ಎಲ್ಲ ಪಿಡಿಒಗಳಿಗೆ ಕಳುಹಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಸಿಯಾದ ಅಧ್ಯಕ್ಷ ಕೆ. ಎನ್. ನರಸಿಂಹಮೂರ್ತಿ, ಗೌರವ ಕಾರ್ಯದರ್ಶಿ ಪ್ರವೀಣ್ ಬಿ., ಉಪಾಧ್ಯಕ್ಷ ಶಶಿಧರ ಶೆಟ್ಟಿ, ಪಂಚಾಯತ್ ತೆರಿಗೆ ನಿರ್ದೇಶಕ ರುದ್ರಪ್ಪ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಉಪ ನಿರ್ದೇಶಕ ಜಗದೀಶ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
MUST WATCH
ಹೊಸ ಸೇರ್ಪಡೆ
![3-hunsur](https://www.udayavani.com/wp-content/uploads/2024/07/3-hunsur-150x90.jpg)
Hunsur: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.