ರಂಗೇರಿದ ರಾಜರಾಜೇಶ್ವರಿ ಚುನಾವಣಾ ಕಣ: ಮಾತಿನ ಸಮರದ ನಡುವೆ ಪಕ್ಷಾಂತರ ಪ್ರಹಸನ
Team Udayavani, Oct 18, 2020, 10:23 AM IST
ಬೆಂಗಳೂರು: ರಾಜರಾಜೇಶ್ವರಿ ನಗರ ಉಪ ಚುನಾವಣೆ ಕಣದಲ್ಲಿ ಮಾತಿನ ಸಮರ, ಪಕ್ಷಾಂತರ ಪ್ರಹಸನ ಮುಂದುವರಿದಿದೆ. ಜೆಡಿಎಸ್ನಿಂದ ಕೆಲವು ನಾಯಕರು ಕಾಂಗ್ರೆಸ್ಗೆ ಸೇರ್ಪಡೆಗೊಂಡ ಬೆನ್ನಲ್ಲೇ ಶನಿವಾರ ಕಾಂಗ್ರೆಸ್ನ ಪಾಲಿಕೆಯ ಮಾಜಿ ಸದಸ್ಯ ಗೋವಿಂದ ರಾಜು ಸೇರಿ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಗೊಂಡರು.
ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರಕ್ಕಿಳಿದ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ಈ ಕ್ಷೇತ್ರದಲ್ಲಿ ಡಿ.ಕೆ.ಶಿವಕುಮಾರ್, ಎಚ್.ಡಿ.ಕುಮಾರಸ್ವಾಮಿ ಆಟ ನಡೆಯಲ್ಲ ಎಂದು”ಟಾಂಗ್’ ನೀಡಿದರು.
ಮತ್ತೂಂದಡೆ ಕಂದಾಯ ಸಚಿವ ಆರ್.ಅಶೋಕ್ ಅವರು, ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಬರುವವರ ಪಟ್ಟಿ ದೊಡ್ಡದಿದೆ. ಅಂತಿಮವಾಗಿ ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್ಗೆ ನೇರ ಹೋರಾಟ ನಡೆಯುವ ಸ್ಥಿತಿ ಬರಬಹುದು ಎಂದು ಹೇಳಿದರು. ಈ ಮಧ್ಯೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ತಾವು ಹಿಂದೆ ಚಲಾಯಿಸಿದ ಮತಗಳಿಂದ ಗೆದ್ದ ಅಭ್ಯರ್ಥಿ ತನ್ನನ್ನು ಮಾರಾಟ ಮಾಡಿ ಕೊಂಡಿದ್ದಕ್ಕೆ ರಾಜರಾಜೇಶ್ವರಿ ಕ್ಷೇತ್ರದ ಮತದಾರರು ನ.3 ರಂದು ತಕ್ಕ ಉತ್ತರ ನೀಡಲಿದ್ದಾರೆ ಎಂದರು
ಇದನ್ನೂ ಓದಿ:ನೆರೆ ಹಾವಳಿಯಿಂದ ಕರ್ನಾಟಕ ನಲುಗಿ ಹೋದರೂ ಸರಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದೆ: ಸಿದ್ದು
ಯಾರು ಏನೆಂದರು?: ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರ ಮಾಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಯವರ ಆಟ ನಡೆಯುವುದಿಲ್ಲ. ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಹೇಳಿದರು.
ಎಚ.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ಅವರಿಂದ ಕ್ಷೇತ್ರದ ಜನರ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳಿಗಿಂತ ಬಿಜೆಪಿ ಅಭ್ಯರ್ಥಿ ಹೆಚ್ಚು ಸಮರ್ಥರಿದ್ದಾರೆ. ಆಡಳಿತ ಪಕ್ಷದ ಅಭ್ಯರ್ಥಿಗೆ ಮತ ಹಾಕುವುದರಿಂದ ಕ್ಷೇತ್ರಕ್ಕೆ ಒಳ್ಳೆಯದಾಗುತ್ತದೆ. ಈ ವಿಚಾರ ಕ್ಷೇತ್ರದ ಜನರಿಗೆ ತುಂಬಾ ಚೆನ್ನಾಗಿ ಗೊತ್ತಿದೆ ಎಂದರು.
ಎಚ್.ಡಿ. ಕುಮಾರಸ್ವಾಮಿ ಇರಬಹುದು, ಡಿ.ಕೆ. ಶಿವಕುಮಾರ್, ಡಿ.ಕೆ.ಸುರೇಶ್ ಇರಬಹುದು ಬಂದು ಹೋಗಬಹುದು. ಆದರೆ ಈ ಕ್ಷೇತ್ರದಲ್ಲಿ ಏನು ಮಾಡಲು ಸಾಧ್ಯ ಅವರಿಂದ. ದಿನ ಬೆಳಗಾದರೆ ಜನರ ಜತೆ ನಿಂತು ಕೆಲಸ ಮಾಡುವ ಸಮರ್ಥ ಪ್ರತಿನಿಧಿ ಬೇಕು ಎಂದು ಹೇಳಿದರು.
ಜೆಡಿಎಸ್-ಬಿಜೆಪಿಗೆ ಹೋರಾಟ: ಅಶೋಕ್
ಪಾಲಿಕೆಯ ಮಾಜಿ ಸದಸ್ಯ ಸೇರಿ ಹಲವರನ್ನು ಬಿಜೆಪಿಗೆ ಸೇರ್ಪಡೆಗೊಳಿಸಿಕೊಂಡು ಮುನಿರತ್ನ ಪರ ಪ್ರಚಾರ ನಡೆಸಿದ ಕಂದಾಯ ಸಚಿವ ಆರ್.ಅಶೋಕ್, ಈ ಕ್ಷೇತ್ರದಲ್ಲಿ ನಮಗೂ ಜೆಡಿಎಸ್ಗೆ ನೇರ ಹೋರಾಟದ ಸ್ಥಿತಿ ಬರಬಹುದು. ಏಕೆಂದರೆ ಕಾಂಗ್ರೆಸ್ನಿಂದ ಬಿಜೆಪಿಗೆ ಸೇರುವವರು ಪಟ್ಟಿ ದೊಡ್ಡದಿದೆ. ನಾವು ಚುನಾವಣೆ ಗೆಲ್ಲಲೇಬೇಕು ಎಂದು ಶತ ಪ್ರಯತ್ನ ಮಾಡುತ್ತೇವೆ. ಅಭಿವೃದ್ಧಿಗಾಗಿ ಮñ ಕೇಳುತ್ತೇವೆ ಎಂದು ಹೇಳಿದರು. ಕಾಂಗ್ರೆಸ್ನವರು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿದ್ದಕ್ಕೆ ಎಫ್ಐಆರ್ ದಾಖಲಿಸಿದ್ದಕ್ಕೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ, ಇವರಿಗಾಗಿ ಸಂವಿಧಾನ ಬದಲಾಯಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಜನರಿಂದ ಉತ್ತರ ಸಿಗಲಿದೆ: ಡಿ.ಕೆ.ಶಿವಕುಮಾರ್
ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಕೆಪಿಸಿಸಿ ವಕ್ತಾರರು ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರದ ವೀಕ್ಷಕರ ಸಭೆ ನಡೆಸಿದ ಡಿ.ಕೆ.ಶಿವಕುಮಾರ್,ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾಗಿ ಸಕಾರಾತ್ಮಕ ವಾತಾವರಣ ನಿರ್ಮಾಣವಾಗುತ್ತಿದೆ.ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಹೆಚ್ಚಿದೆ. ನಾವುಕೊಟ್ಟ ಮತವನ್ನು ಮಾರಿಕೊಳ್ಳಲಾಗಿದೆ ಎಂದು ಜನರು ಆಕ್ರೋಶಗೊಂಡಿದ್ದಾರೆ ಎಂದು ಹೇಳಿದರು. ತಾವು ಹಿಂದೆ ಚಲಾಯಿಸಿದ ಮತಗಳಿಂದ ಗೆದ್ದ ಅಭ್ಯರ್ಥಿ ತನ್ನನ್ನು ಮಾರಾಟ ಮಾಡಿಕೊಂಡಿದ್ದಕ್ಕೆ ರಾಜರಾಜೇಶ್ವರಿ ಕ್ಷೇತ್ರದ ಮತದಾರರು ಕೋಪಗೊಂಡಿದ್ದಾರೆ. ಮುಂದಿನ ತಿಂಗಳು 3 ರಂದು ತಕ್ಕ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣ ಭೈರೇಗೌಡ, ಸಂಸದ ಡಿ.ಕೆ ಸುರೇಶ್, ನಸೀರ್ ಅಹ್ಮದ್, ನಾರಾಯಣ ಸ್ವಾಮಿ, ಪುಷ್ಪಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?