
ರಾಹುಲ್ ಗಾಂಧಿ ಆಧುನಿಕ ಭಾರತದ ಮಿರ್ ಜಾಫರ್ – ಸಂಬಿತ್ ಪಾತ್ರ
Team Udayavani, Mar 21, 2023, 5:02 PM IST

ನವದೆಹಲಿ: ಇತ್ತೀಚೆಗೆ ಲಂಡನ್ನಲ್ಲಿ ಭಾರತದ ಬಗ್ಗೆ ಭಾಷಣ ಮಾಡಿ ಭಾರೀ ಟೀಕೆಗೆ ಗುರಿಯಾಗಿದ್ದ ರಾಹುಲ್ ಗಾಂಧಿ ಮೇಲೆ ಬಿಜೆಪಿಯ ಕೋಪ ತಣ್ಣಗಾದಂತಿಲ್ಲ. ರಾಹುಲ್ ಗಾಂಧಿಯ ಹೇಳಿಕೆಗಳು ವಿವಾದದ ಕಿಡಿಯನ್ನು ಹೊತ್ತಿಸಿದ ಬಳಿಕ ಬಿಜೆಪಿ, ರಾಹುಲ್ ತಮ್ಮ ಹೇಳಿಕೆಗಳಿಗೆ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದಿವೆ.
ಈ ನಡುವೆ ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ ಅವರು ರಾಹುಲ್ ಅವರನ್ನು ಆಧುನಿಕ ಕಾಲದ ಮಿರ್ ಜಾಫರ್ ಎಂದು ಕರೆದಿದ್ದಾರೆ.
ʻರಾಹುಲ್ ಗಾಂಧಿ ತಮ್ಮ ಹೇಳಿಕೆಗಳಿಗೆ ಕ್ಷಮೆಯಾಚಿಸಲೇಬೇಕು. ಅವರು ಪ್ರತಿ ಬಾರಿಯೂ ಭಾರತದ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ರಾಹುಲ್ ಗಾಂಧಿ ಆಧುನಿಕ ಭಾರತದ ರಾಜಕೀಯದ ಮಿರ್ ಜಾಫರ್ ಎಂದು ಸಂಬೀತ್ ಪಾತ್ರ ವ್ಯಂಗ್ಯವಾಡಿದ್ಧಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಂಬೀತ್ ಪಾತ್ರ, ಭಾರತದ ವಿಚಾರದಲ್ಲಿ ಇತರೆ ದೇಶಗಳು ಮಧ್ಯಸ್ಥಿಕೆ ವಹಿಸಬೇಕು ಎಂಬ ರಾಹುಲ್ ಹೇಳಿಕೆ ವಿರುದ್ಧ ಕಿಡಿ ಕಾರಿದ್ದಾರೆ. ಇದು ಭಾರತದ ವಿರುದ್ಧ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಮಾಡುತ್ತಿರುವ ಪಿತೂರಿ ಎಂದು ಹೇಳಿದರು. ಅಲ್ಲದೇ, ರಾಹುಲ್ ಗಾಂಧಿ ಅವರು ಸದನದಲ್ಲಿ ಭಾಗವಹಿಸುವುದೇ ಕಡಿಮೆ. ಆದರೆ ಪ್ರತಿ ಬಾರಿ ಮಾಧ್ಯಮದವರ ಮುಂದೆ ಬಂದು ನನಗೆ ಮಾತನಾಡಲು ಯಾರೂ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಹೇಳುತ್ತಾರೆ. ಆದೆಲ್ಲಾ ಅವರ ತಪ್ಪುಗಳನ್ನು ಮರೆಮಾಚಲು ಮಾಡಿಕೊಂಡಿರುವ ನೆಪಗಳು ಎಂದು ಸಂಬೀತ್ ಪಾತ್ರ ಕಿಡಿ ಕಾರಿದ್ದಾರೆ.
ಇದನ್ನೂ ಓದಿ: 80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್ ಗಳು; ಆರೋಪಿಗಳಿಗೆ ಶೋಧ

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

Train Tragedy ಜವಾಬ್ದಾರರಿಗೆ ಕಠಿಣ ಶಿಕ್ಷೆಯಾಗುತ್ತದೆ: ಒಡಿಶಾದಲ್ಲಿ ಪ್ರಧಾನಿ ಮೋದಿ

India’s Train Tragedy: 1981-2023ರ ನಡುವೆ ಭಾರತದಲ್ಲಿ ನಡೆದ ಭೀಕರ ರೈಲು ದುರಂತಗಳಿವು…
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
