ದೇಶದಲ್ಲಿ ನಾಗರಿಕರಾಗಲಿ,ಭದ್ರತಾ ಸಿಬ್ಬಂದಿಗಳಾಗಲಿ ಸುರಕ್ಷಿತವಾಗಿಲ್ಲ : ರಾಹುಲ್ ಕಿಡಿ
Team Udayavani, Dec 5, 2021, 3:05 PM IST
ನವದೆಹಲಿ: ನಾಗಾಲ್ಯಾಂಡ್ನ ಮೋನ್ ಜಿಲ್ಲೆಯಲ್ಲಿ ಬಂಡುಕೋರರ ವಿರೋಧಿ ಕಾರ್ಯಾಚರಣೆಯಲ್ಲಿ ನಡೆದ ನಾಗರಿಕರ ಹತ್ಯೆಯ ಕುರಿತಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಕೇಂದ್ರ ಸರಕಾರದ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
‘ಇದು ಹೃದಯ ವಿದ್ರಾವಕವಾಗಿದೆ.ನಮ್ಮ ದೇಶದಲ್ಲಿ ನಾಗರಿಕರಾಗಲಿ ಅಥವಾ ಭದ್ರತಾ ಸಿಬ್ಬಂದಿಗಳಾಗಲಿ ಸುರಕ್ಷಿತವಾಗಿಲ್ಲ.ಗೃಹ ಸಚಿವಾಲಯ ಏನು ಮಾಡುತ್ತಿದೆ ಎಂಬುದಕ್ಕೆ ಸರ್ಕಾರ “ನಿಜವಾದ ಉತ್ತರ” ನೀಡಬೇಕು’ ಎಂದು ಟ್ವೀಟ್ ಮಾಡಿದ್ದಾರೆ.
This is heart wrenching. GOI must give a real reply.
What exactly is the home ministry doing when neither civilians nor security personnel are safe in our own land?#Nagaland pic.twitter.com/h7uS1LegzJ
— Rahul Gandhi (@RahulGandhi) December 5, 2021
ಭದ್ರತಾ ಪಡೆಗಳಿಂದ ಕನಿಷ್ಠ 11 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ಘಟನೆಯು “ತಪ್ಪಾದ ಗುರುತಿಸುವಿಕೆಯಿಂದ ” ನಡೆದಿದೆ, ತನಿಖೆ ನಡೆಸುತ್ತಿದ್ದೇವೆ ಎಂದು ನಾಗಾಲ್ಯಾಂಡ್ನ ರಾಜಧಾನಿ ಕೊಹಿಮಾದ ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ :ನಾಗಾಲ್ಯಾಂಡ್ :’ತಪ್ಪಾದ ಗುರುತಿಸುವಿಕೆ’ಯಿಂದ ನಾಗರಿಕರ ಹತ್ಯೆ ನಡೆಯಿತೇ?
ಉನ್ನತ ಮಟ್ಟದ ಎಸ್ಐಟಿ ತಂಡ ಘಟನೆಯ ಕೂಲಂಕಷವಾಗಿ ತನಿಖೆ ನಡೆಸಿ, ದುಃಖತಪ್ತ ಕುಟುಂಬಗಳಿಗೆ ನ್ಯಾಯ ಒದಗಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ