ಕೋವಿಡ್ ಹಿನ್ನೆಲೆ ರಾಹುಲ್‌ ಶಸ್ತ್ರ ತ್ಯಾಗ : ಚುನಾವಣಾ ರ‍್ಯಾಲಿ ರದ್ದುಗೊಳಿಸಿದ ಕೈ ನಾಯಕ


Team Udayavani, Apr 18, 2021, 7:54 PM IST

ಕೋವಿಡ್ ಹಿನ್ನೆಲೆ ರಾಹುಲ್‌ ಶಸ್ತ್ರ ತ್ಯಾಗ : ಚುನಾವಣಾ ರ‍್ಯಾಲಿ ರದ್ದುಗೊಳಿಸಿದ ಕೈ ನಾಯಕ

ನವ ದೆಹಲಿ/ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕೊರೊನಾ ತೀವ್ರಗತಿಯಲ್ಲಿ ಹಬ್ಬುತ್ತಿರುವ ಕಾರಣಕ್ಕಾಗಿ ತಮ್ಮ ಎಲ್ಲ ಸಾರ್ವಜನಿಕ ರ‍್ಯಾಲಿಗಳನ್ನು ರದ್ದುಗೊಳಿಸಿರುವುದಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಿಳಿಸಿದ್ದಾರೆ.

“ಪ್ರಸ್ತುತ ಕೊರೊನಾದ ಘೋರ ಸನ್ನಿವೇಶ ಅರಿತು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಇಂಥ ಸನ್ನಿವೇಶದಲ್ಲಿ ಇತರ ಎಲ್ಲ ರಾಜಕೀಯ ಪಕ್ಷಗಳೂ ತಮ್ಮ ಬೃಹತ್‌ ಸಮಾವೇಶಗಳನ್ನು ರದ್ದುಗೊಳಿಸುವ ಬಗ್ಗೆ ಯೋಚಿಸಬೇಕಿದೆ’ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ರಾಹುಲ್‌ ಕ್ರಮವನ್ನು ಸ್ವಾಗತಿಸಿರುವ ಕಾಂಗ್ರೆಸ್‌, “ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಹುಲ್‌ ನಿಲುವು ಮಾದರಿಯಾಗಲಿ. ಅವರೂ ರ‍್ಯಾಲಿ ರದ್ದುಗೊಳಿಸಲಿ’ ಎಂದು ಒತ್ತಾಯಿಸಿದೆ.

ಇತ್ತೀಚೆಗಷ್ಟೇ (5ನೇ ಹಂತಕ್ಕೆ ) ರಾಹುಲ್‌ ಬಂಗಾಳದಲ್ಲಿ ಚೊಚ್ಚಲ ಪ್ರಚಾರ ಕೈಗೊಂಡಿದ್ದರು. ಬಂಗಾಳದಲ್ಲಿ ಇನ್ನು 3 ಹಂತದ ಮತದಾನ ಬಾಕಿ ಇದೆ.

ಇದನ್ನೂ ಓದಿ :ಕೋವಿಡ್ ಪ್ರಕರಣಗಳ ಉಲ್ಬಣ : ತಮಿಳುನಾಡು-ಬಿಹಾರಿನಲ್ಲಿ ರಾತ್ರಿ ಕರ್ಫ್ಯೂ ಜಾರಿ

ಮತ್ತೆ ಹಿಂಸಾಚಾರ: ಜಲ್ಪೆಗುರಿ ಕ್ಷೇತ್ರದಲ್ಲಿ ಶನಿವಾರ ರಾತ್ರಿ ಮತದಾನೋತ್ತರ ಸಂಘರ್ಷ ಏರ್ಪಟ್ಟಿದ್ದು, ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಪೊರಝಾರ್‌ ಹಳ್ಳಿಯಲ್ಲಿ ಈ ದುರ್ಘಟನೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಶಿಖಾ ಚಟರ್ಜಿ, ಟಿಎಂಸಿ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿದ್ದಾರೆ.

ಮೋದಿ ರಾಜೀನಾಮೆ ನೀಡಲಿ: ಕೊರೊನಾ ಏರಿಕೆ ನಿಯಂತ್ರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಪೂರ್ಣ ವಿಫ‌ಲವಾಗಿದ್ದು, ಕೂಡಲೇ ರಾಜೀನಾಮೆ ನೀಡುವಂತೆ ತೃಣಮೂಲ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.
ಏತನ್ಮಧ್ಯೆ, ವಿವಾದಿತ ಹೇಳಿಕೆ ಕಾರಣಕ್ಕಾಗಿ ಬಿಜೆಪಿ ಮುಖಂಡ ಸಯಾಂತನ್‌ ಬಸು, ಟಿಎಂಸಿ ನಾಯಕಿ ಸುಜಾತಾ ಮಂಡಲ್‌ಗೆ ಚುನಾವಣಾ ಆಯೋಗ 24 ಗಂಟೆ ಪ್ರಚಾರದಿಂದ ದೂರ ಉಳಿಯುವಂತೆ ನಿಷೇಧ ವಿಧಿಸಿದೆ.

ದೀದಿಗೆ ಹತಾಶೆ : ಶಾ
5 ಹಂತದ ಮತದಾನದಲ್ಲಿ ಬಿಜೆಪಿ ಬಗ್ಗೆ ಜನರ ಒಲವು ಕಂಡು ದೀದಿ ಹತಾಶರಾಗಿದ್ದಾರೆ. ಈ 180 ಕ್ಷೇತ್ರಗಳ ಪೈಕಿ ಬಿಜೆಪಿ 122ಕ್ಕೂ ಅಧಿಕ ಸ್ಥಾನಗಳನ್ನು ಬಿಜೆಪಿ ಗೆದ್ದಿದೆ ಎಂದು ಗೃಹ ಸಚಿವ ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸ್ವರೂಪ್‌ ನಗರದ ರ‍್ಯಾಲಿಯಲ್ಲಿ ಮಾತನಾಡಿದ ಅವರು, “ಬಂಗಾಳದ ಯಾವುದೇ ದಿಕ್ಕಿಗೆ ಹೋದರೂ, ದೀದಿಯ ನಿರ್ಗಮನ ಸೂಚನೆಗಳೇ ಕಾಣಿಸುತ್ತಿವೆ’ ಎಂದು ಟೀಕಿಸಿದರು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.