ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಗೇಮ್ ಚೇಂಜರ್ : ದಿಗ್ವಿಜಯ್ ಸಿಂಗ್
Team Udayavani, Sep 1, 2022, 3:25 PM IST
ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ”ಭಾರತ್ ಜೋಡೋ” ಯಾತ್ರೆ ರಾಷ್ಟ್ರ ರಾಜಕಾರಣದಲ್ಲಿ ಗೇಮ್ ಚೇಂಜರ್ ಆಗಲಿದೆ ಎಂದು ಭಾರತ್ ಜೋಡೋ ಯಾತ್ರೆ ಅಧ್ಯಕ್ಷ ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದರು.
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುವ ಭಾರತ ಐಕ್ಯತಾ ಯಾತ್ರೆ ಹಿನ್ನೆಲೆಯಲ್ಲಿ ಕಾಂಗ್ರಸ್ ಗುರುವಾರ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿ, ದೇಶದ ಜನರನ್ನು ಒಗ್ಗೂಡಿಸುವ ಹಿನ್ನೆಲೆಯಲ್ಲಿ ದೇಶದಲ್ಲೆ ಅತಿದೊಡ್ಡ ಯಾತ್ರೆಯನ್ನು ರಾಹುಲ್ ಗಾಂಧಿ ಹಮ್ಮಿಕೊಂಡಿದ್ದಾರೆ. ಭ್ರಷ್ಟಾಚಾರ, ಜಿಎಸ್ ಟಿ,ನಿರುದ್ಯೋಗ, ಬಡತನ ಇವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತೇವೆ. ಬಿಜೆಪಿ ದೇಶದ ಜನರನ್ನ ವಿಭಜಿಸುತ್ತಿದೆ, ಕಾಂಗ್ರೆಸ್ ಪಕ್ಷದ ಮೂಲಕ ಒಂದು ಗೂಡಿಸುವ ಪ್ರಯತ್ನ ಮಾಡುತ್ತೇವೆ ಎಂದರು.
ಬಿಜೆಪಿ ಕೋಮುಭಾವನೆಗಳ ಆಧಾರದ ಮೇಲೆ ಧರ್ಮರಾಜಕಾರಣ ಮಾಡುತ್ತಿದೆ. ನಮ್ಮದು ಸರ್ವರನ್ನೊಳಗೊಂಡ ಅಭಿವೃದ್ಧಿ ಸಿದ್ಧಾಂತ. ಈ ಮೂರು ಸ್ಥರಗಳಲ್ಲಿ ಯಾತ್ರೆ ನಡೆಯಲಿದೆ. ಕರ್ನಾಟಕದಲ್ಲಿ 21 ದಿನ ಕಾಲ ಪಾದಯಾತ್ರೆ ನಡೆಯಲಿದೆ. ರಾಹುಲ್ ಗಾಂಧಿ ಜೊತೆ ಎಲ್ಲರೂ ಹೆಜ್ಜೆ ಹಾಕಲಿದ್ದಾರೆ. ಸಾವಿರಾರು ಜನ ಇದರಲ್ಲಿ ಪಾಲ್ಗೊಳ್ಳಬಹುದು. ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದೆ, ಈ ಯಾತ್ರೆ ಎಲ್ಲರನ್ನೂ ತಲುಪಲಿದೆ. ಹಳ್ಳಿ,ಗ್ರಾಮ,ತಾಂಡ,ಕೇರಿ ಎಲ್ಲವನ್ನೂ ಸುತ್ತಲಿದೆ ಎಂದರು.
ಪ್ರತಿದಿನ 7 ಗಂಟೆಗೆ ಪಾದಯಾತ್ರೆ ನಡೆಯಲಿದ್ದು, ಮಧ್ಯಾಹ್ನ ಬಿಡುವಿನ ವೇಳೆಯಲ್ಲಿ 2 ಗಂಟೆ ವೇಳೆಗೆ ರಾಹುಲ್ ವಿಭಿನ್ನ ಕ್ಷೇತ್ರಗಳ ಜನರ ಜೊತೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ 3.30 ಗೆ ಪಾದಯಾತ್ರೆ ಮುಂದುವರಿಯಲಿದೆ. ಮತ್ತೆ ಜನರ ಜೊತೆ ರಾಹುಲ್ ಮಾತುಕತೆ ನಡೆಯಲಿದೆ. ಅದರಲ್ಲಿ ಹಿಂದೂ,ಮುಸ್ಲಿಂ ಸೇರಿದಂತೆ ಇನ್ನಿತರ ಸಮುದಾಯದವರು ಭಾಗಿಯಾಗಲಿದ್ದಾರೆ. ರೈತರ ಜೊತೆಯೂ ಚರ್ಚೆ ನಡೆಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ