ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್
Team Udayavani, Mar 24, 2023, 5:54 PM IST
ಮಂಗಳೂರು: ರಾಹುಲ್ ಗಾಂಧಿಯನ್ನು ಸಂಸದರಾಗಿ ಅನರ್ಹಗೊಳಿಸಿ ಆದೇಶ ನೀಡಿರುವುದು ಸಂಸದೀಯ ನಿಯಮ ಹಾಗೂ ಪ್ರಜಾಪ್ರಭುತ್ವ ಕಗ್ಗೊಲೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.
ನಗರದ ಸರ್ಕ್ಯೂಟ್ ಹೌಸ್ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೋದಿ ಸರ್ ನೇಮ್’ ಹೇಳಿಕೆ ಪ್ರಕರಣದಲ್ಲಿ ೨ ವರ್ಷ ಜೈಲು ಶಿಕ್ಷೆ ಘೋಷಿಸಿರುನ ಕೋರ್ಟ್ ಮೇಲ್ಮನವಿ ಸಲ್ಲಿಸಲು ೩೦ ದಿನಗಳ ಅವಕಾಶ ನೀಡಿದೆ. ನ್ಯಾಯಾಲಯದ ತೀರ್ಪಿನ ಬಗ್ಗೆ ನಾನೇನೂ ಹೇಳಲಾರೆ. ಆದರೆ, ನ್ಯಾಯಾಲಯವೇ ಆದೇಶವನ್ನು ಅಮಾನತ್ತಿನಲ್ಲಿರಿಸಿ ಮೇಲ್ಮನವಿಗೆ ಅವಕಾಶ ನೀಡಿರುವಾಗ ಸಂಸದ ಸ್ಥಾನದಿಂದ ಅರ್ಹಗೊಳಿಸಿರುವ ಪ್ರಕ್ರಿಯೆ ಮುಂದೆ ದೇಶದ ಪ್ರತಿಯೊಂದು ಸಂಸದರಿಗೂ ಅನ್ವಯವಾಗಲಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದರು.
ಇದನ್ನೂ ಓದಿ: ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ
ರಾಹುಲ್ ಗಾಂಧಿ ಸತ್ಯ ಮಾತನಾಡಿದರೆ ಬಿಡದವರು ಇನ್ನು ಜನಸಾಮಾನ್ಯರಿಗೆ ಬಿಡಬಹುದೇ ಎಂದು ಪ್ರಶ್ನಿಸಿದ ಅವರು, ದೇಶದ ಜನತೆ ರಾಹುಲ್ ಗಾಂಧಿಯನ್ನು ಭವಿಷ್ಯದ ನಾಯಕ ಎಂದು ಬಿಂಬಿಸುತ್ತಿರುವಾಗ ಭಯದಿಂದ ಈ ರೀತಿಯ ಕೃತ್ಯ ಎಸಗಲಾಗುತ್ತಿದೆ.
ಇದಕ್ಕೆಲ್ಲಾ ಕಾಂಗ್ರೆಸ್ ಹೆದರುವುದಿಲ್ಲ. ಸತ್ಯ ಮಾತನಾಡುವ ರಾಹುಲ್ ಜತೆಗೆ ಕಾಂಗ್ರೆಸ್ನ ಪ್ರತಿಯೊಬ್ಬರೂ ಇದ್ದಾರೆ ಎಂದವರು ಹೇಳಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಸದಾಶಿವ ಉಳ್ಳಾಲ್, ಸಂತೋಷ್ ಕುಮಾರ್, ರಫೀಕ್ ಅಂಬ್ಲಮೊಗರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ
Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ
Arecanut Market ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ
Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು
ಜೆಡಿಎಸ್ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್ ಬಾವಾ