U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…
ಕ್ಷಣದಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ಹೇಗೆ ಪ್ರತಿಕ್ರಿಯಿಸಿದ್ದಾರೆ ನೋಡಿ...
Team Udayavani, Apr 24, 2024, 2:55 PM IST
ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಿಂದೆ ನೀಡಿದ್ದ “ಸಂಪತ್ತು ಸಮೀಕ್ಷೆ” ಹೇಳಿಕೆ ವಿಚಾರದಲ್ಲಿ ಯು-ಟರ್ನ್ ತೆಗೆದುಕೊಂಡಿದ್ದು, ದೇಶ ಎದುರಿಸುತ್ತಿರುವ ಅನ್ಯಾಯದ ಪ್ರಮಾಣವನ್ನು ಕಂಡುಹಿಡಿಯಲು ಮಾತ್ರ ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.
ಬುಧವಾರ ದೆಹಲಿಯ ಜವಾಹರ್ ಭವನದಲ್ಲಿ ಪಕ್ಷದ ಸಾಮಾಜಿಕ ನ್ಯಾಯ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ನಾವು ಇನ್ನೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿಲ್ಲ, ಎಷ್ಟು ಅನ್ಯಾಯವಾಗಿದೆ ಎಂಬುದನ್ನು ಕಂಡುಹಿಡಿಯೋಣ ಎಂದು ನಾನು ಹೇಳಿದ್ದೇನೆ” ಎಂದು ಹೇಳಿದರು.
ಎಷ್ಟು ಅನ್ಯಾಯವಾಗಿದೆ ಎಂದು ಪರೀಕ್ಷಿಸೋಣ ಎಂದು ಹೇಳಿದ ಕ್ಷಣದಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ಹೇಗೆ ಪ್ರತಿಕ್ರಿಯಿಸಿದ್ದಾರೆ ನೋಡಿ. ಇದು ದೇಶವನ್ನು ಒಡೆಯುವ ಪ್ರಯತ್ನ ಎಂದು ಹೇಳುತ್ತಿದ್ದಾರೆ. ಎಕ್ಸ್-ರೇ (ಸಂಪತ್ತು ಸಮೀಕ್ಷೆ) ಮೂಲಕ ನಾವು ಸಮಸ್ಯೆಯನ್ನು ತಿಳಿದುಕೊಳ್ಳುತ್ತೇವೆ” ಎಂದು ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರು ತೀವ್ರ ಮಟ್ಟದ ಟೀಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
90 ರಷ್ಟು ಭಾರತೀಯರಿಗೆ ಅನ್ಯಾಯವಾಗುತ್ತಿದೆ, ಈ ಅನ್ಯಾಯವನ್ನು ಪರಿಶೀಲಿಸುವಂತೆ ನಾನು ಕರೆ ನೀಡಿದ ಕ್ಷಣವೇ ಪ್ರಧಾನಿ ಮತ್ತು ಬಿಜೆಪಿ ನನ್ನ ಮೇಲೆ ದಾಳಿ ಮಾಡಲು ಆರಂಭಿಸಿದರು ಎಂದು ರಾಹುಲ್ ಗಾಂಧಿ ಆರೋಪಿಸಿದರು.
ರಾಹುಲ್ ಹೇಳಿದ್ದೇನು?
ರಾಹುಲ್ ಗಾಂಧಿ ಅವರು ಏಪ್ರಿಲ್ 7 ರಂದು ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ, ದೇಶದಲ್ಲಿ ಜನರ ನಡುವೆ ಸಂಪತ್ತಿನ ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲು ಹಣಕಾಸು ಮತ್ತು ಸಾಂಸ್ಥಿಕ ಸಮೀಕ್ಷೆಯನ್ನು ನಡೆಸಲಿದೆ ಎಂದಿದ್ದರು.
ಕಾಂಗ್ರೆಸ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ನಂತರ ಹೈದರಾಬಾದ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ವೇಳೆ ರಾಷ್ಟ್ರವ್ಯಾಪಿ ಜಾತಿ ಗಣತಿಯನ್ನು ಹೊರತುಪಡಿಸಿ ಸಮೀಕ್ಷೆಯನ್ನು ನಡೆಸಲಾಗುವುದು ಎಂದು ಭರವಸೆ ನೀಡಿದ್ದರು.
ಪ್ರಧಾನಿ ನರೇಂದ್ರ ಮೋದಿ ರಾಹುಲ್ ಹೇಳಿಕೆಯನ್ನೇ ಟೀಕಾಸ್ತ್ರವಾಗಿ ಬಳಸಿಕೊಂಡು ತೀವ್ರ ಆಕ್ರೋಶ ಹೊರ ಹಾಕಿದ್ದರು. “ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ದೇಶದ ಹಿಂದೂಗಳ ಸಂಪತ್ತನ್ನು ಮುಸ್ಲಿಮರಿಗೆ ಹಸ್ತಾಂತರ ಮಾಡಲಿದೆ’ ಎಂದು ಕಿಡಿ ಕಾರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
Karkare ಯನ್ನು ಕೊಂದಿದ್ದು ಕಸಬ್ ಅಲ್ಲ,RSS ನಂಟಿದ್ದ ಪೊಲೀಸ್: ಕಾಂಗ್ರೆಸ್ ನಾಯಕ
MUST WATCH
ಹೊಸ ಸೇರ್ಪಡೆ
Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್ʼ
Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ
Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು