ರೈಲ್ವೆ ಇಲಾಖೆಯ ವೆಬ್‌ಸೈಟ್‌ ಹ್ಯಾಕ್ ‌ಮಾಡಿ ವಂಚನೆ ಪ್ರಕರಣ: ಸಿಬಿಐ ತನಿಖೆ ಆರಂಭ


Team Udayavani, Nov 25, 2020, 9:07 PM IST

ರೈಲ್ವೆ ಇಲಾಖೆಯ ವೆಬ್‌ಸೈಟ್‌ ಹ್ಯಾಕ್ ‌ಮಾಡಿ ವಂಚನೆ ಪ್ರಕರಣ: ಸಿಬಿಐ ತನಿಖೆ ಆರಂಭ

ಬೆಂಗಳೂರು: ರೈಲ್ವೆ ಇಲಾಖೆಯ ವೆಬ್‌ಸೈಟ್‌ ಹ್ಯಾಕ್‌ ಮಾಡಿ ಇ-ಟಿಕೆಟ್‌ ಮಾರಾಟ ಮಾಡುವ ಮೂಲಕ ರೈಲ್ವೆ ಇಲಾಖೆಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣವನ್ನು ಸಿಬಿಐ ಕೈಗೆತ್ತಿಕೊಂಡಿದೆ.

ಪ್ರಕರಣ ಸಂಬಂಧ ಸೌತ್‌ ವೆಸ್ಟರ್ನ್ ರೈಲ್ವೆ ಯಶವಂತಪುರ ವಿಭಾಗದ ಆರ್‌ಪಿಎಫ್‌ನ ಪೋಸ್ಟ್‌ ಕಮಾಂಡರ್‌ ಅಖೀಲೇಶ್‌ ಕುಮಾರ್‌ ತಿವಾರಿ ನೀಡಿದ ದೂರಿನ ಮೇರೆಗೆ ಝಾರ್ಖಂಡ್‌ ಮೂಲದ ಗುಲಾಮ್‌ ಮುಸ್ತಾಫ್‌ ಹಾಗೂ ಪೀಣ್ಯದ ಹನುಮಂತರಾಜು ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿಕೊಂಡಿದೆ.

ಪಾಕ್‌ ಜತೆ ನಂಟು?
ಗುಲಾಮ್‌ ಮುಸ್ತಾಫ್‌ ಪಾಕಿಸ್ಥಾನದ ಸಂಘಟನೆಗಳ ಜತೆ ನಂಟು ಹೊಂದಿರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಅಲ್ಲಿನ “ಡಾರ್ಕ್‌ನೆಟ್‌’ ಸಾಫ್ಟ್‌ವೇರ್‌ ಅನ್ನು ಬಳಸಿಕೊಂಡಿದ್ದ. ಜತೆಗೆ ಸಾಫ್ಟ್‌ವೇರ್‌ಗಳನ್ನು ಹ್ಯಾಕ್‌ ಮಾಡಲು “ಲಿನಕ್ಸ್‌’ ಸಾಫ್ಟ್‌ವೇರ್‌ ಬಳಸಿದ್ದ. ಕೇಂದ್ರ ಸರಕಾರ ಸ್ವಾಮ್ಯದ ಹಲವು ಕಚೇರಿಗಳ ಬ್ಯಾಂಕ್‌ ಖಾತೆ ವಿವರ ಹಾಗೂ ಸಾಫ್ಟ್‌ವೇರ್‌ಗಳ ಡೇಟಾವನ್ನೂ ಈತ ಸಂಗ್ರಹಿಸಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಪ.ಬಂಗಾಳ: BJP ಅಧಿಕಾರಕ್ಕೆ ಬಂದರೆ ಪೊಲೀಸರು ಬೂಟು ನೆಕ್ಕುವಂತೆ ಮಾಡುವೆ: ರಾಜು ಬ್ಯಾನರ್ಜಿ

ಗುಲಾಮ್‌ ಮುಸ್ತಾಫ 2017ರ ಅಕ್ಟೋಬರ್‌ನಲ್ಲಿ ರೈಲ್ವೆ ಇಲಾಖೆಯಿಂದ ಆನ್‌ಲೈನ್‌ ಮೂಲಕ ಇ-ಟಿಕೆಟ್‌ ಬುಕಿಂಗ್‌ ಮಾಡಿಕೊಡುವ ಐಆರ್‌ಟಿಸಿ ಏಜೆಂಟ್‌ ಐಡಿ ಪಡೆದುಕೊಂಡಿದ್ದ. ನಂತರ ಇತರ ಆರೋಪಿಗಳ ಜತೆ ಸೇರಿ ಅನಧಿಕೃತವಾಗಿ ರೈಲ್ವೆ ಇಲಾಖೆಗೆ ಸಂಬಂಧಿಸಿದ ಎಎನ್‌ಎಮ್‌ಎಸ್‌ ಸಾಫ್ಟ್ವೇರ್‌’ ಹ್ಯಾಕ್‌ ಮಾಡಿದ್ದ. ನಕಲಿ ಹೆಸರು ಮತ್ತು ವಿಳಾಸಗಳಿಂದ 563ಕ್ಕೂ ಹೆಚ್ಚು ನಕಲಿ ಪರ್ಸನಲ್‌ ಐಡಿ ಸೃಷ್ಟಿಸಿಕೊಂಡಿದ್ದ. ನಕಲಿ ಐಡಿಗಳ ಮುಖಾಂತರ ಆನ್‌ಲೈನ್‌ನಲ್ಲಿ ರೈಲ್ವೆ ಇ-ಟಿಕೆಟ್‌ ಪಡೆದುಕೊಂಡು ಮಾರಾಟ ಮಾಡುತ್ತಿದ್ದ. ಎಎನ್‌ಎಮ್‌ಎಸ್‌ ಸಾಫ್ಟ್‌ವೇರ್‌ನ್ನು ಬಾಡಿಗೆಗೆ ನೀಡಿ ಅಕ್ರಮ ವ್ಯವಹಾರ ನಡೆಸಿ ರೈಲ್ವೆ ಇಲಾಖೆಗೆ ಕೋಟ್ಯಂತರ ರೂ. ವಂಚಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ.

ಕೃತ್ಯ ಬಯಲಾಗಿದ್ದು ಹೇಗೆ ?
ರೈಲ್ವೆ ನಕಲಿ ಇ-ಟಿಕೆಟ್‌ ಮಾರಾಟ ದಂಧೆಯಲ್ಲಿ 2019 ಅಕ್ಟೋಬರ್‌ನಲ್ಲಿ ಹನುಮಂತರಾಜುನ್ನು ಯಶವಂತಪುರ ರೈಲ್ವೆ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಆತ ನೀಡಿದ ಸುಳಿವಿನ ಮೇರೆಗೆ ಕಾರ್ಯಾಚರಣೆ ಮುಂದುವರಿಸಿದಾಗ ಗುಲಾಮ್‌ ಮುಸ್ತಾಫ್‌ನ ಸುಳಿವು ಸಿಕ್ಕಿತ್ತು. ಕಳೆದ ಜ.8ರಂದು ಈತನನ್ನು ಬಂಧಿಸಿದಾಗ ಅಸಲಿ ಕೃತ್ಯ ಬಯಲಾಗಿದೆ.

ಗುಲಾಮ್‌ ಬಳಿಯಿದ್ದ ಲ್ಯಾಪ್‌ಟಾಪ್‌, ಕಂಪ್ಯೂಟರ್‌, ಹಾರ್ಡ್‌ ಡಿಸ್ಕ್ ಹಾಗೂ ಇತರೆ ಉಪಕರಣಗಳಲ್ಲಿ ಕೇಂದ್ರ ಸರ್ಕಾರಕ್ಕೆ ಸಂಬಂಧಪಟ್ಟ ಹಲವು ಇಲಾಖೆಗಳ ಡೇಟಾ ಪತ್ತೆಯಾಗಿತ್ತು. ಡಾರ್ಕ್‌ನೆಟ್‌ ವೆಬ್‌ಸೈಟ್‌ನಿಂದ ಪಾಕಿಸ್ತಾನದ ಸಂಘಟನೆಗಳನ್ನು ಸಂಪರ್ಕಿಸಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.