ರೈಲ್ವೆ ಇಲಾಖೆಯಲ್ಲಿ 5000 ಹುದ್ದೆ ಖಾಲಿ ಇದೆ ಎಂದು ನಕಲಿ ಜಾಹೀರಾತು ಕೊಟ್ಟ ಖಾಸಗಿ ಏಜೆನ್ಸಿ!
ರೈಲ್ವೆ ಇಲಾಖೆಯ 8 ವಿಭಾಗಗಳಲ್ಲಿ 5,285 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿತ್ತು!
Team Udayavani, Aug 10, 2020, 6:57 PM IST
ನವದೆಹಲಿ: ರೈಲ್ವೆಯ ವಿವಿಧ ಇಲಾಖೆಗಳಲ್ಲಿ 5000 ಸಾವಿರಕ್ಕೂ ಅಧಿಕ ಹುದ್ದೆಗಳು ಖಾಲಿ ಇದೆ ಎಂದು ಖಾಸಗಿ ಏಜೆನ್ಸಿಯೊಂದು ನೀಡಿರುವ ನಕಲಿ ಜಾಹೀರಾತು ವಿರುದ್ಧ ಭಾರತೀಯ ರೈಲ್ವೆ ಇಲಾಖೆ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದೆ.
ಪ್ರಮುಖ ಮಾಧ್ಯಮವೊಂದರಲ್ಲಿ ಈ ಜಾಹೀರಾತು ಪ್ರಕಟಗೊಂಡಿದ್ದು, ರೈಲ್ವೆ ಇಲಾಖೆಯ 8 ವಿಭಾಗಗಳಲ್ಲಿ 5,285 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿತ್ತು!
ಅವೆಸ್ತ್ರಾನ್ ಇನ್ಫೋ ಟೆಕ್ ಹೆಸರಿನ ಸಂಸ್ಥೆಯೊಂದು ಈ ನಕಲಿ ಜಾಹೀರಾತು ನೀಡಿರುವುದು ರೈಲ್ವೆ ಸಚಿವಾಲಯದ ಗಮನಕ್ಕೆ ಬಂದಿತ್ತು. ಈ ಸಂಸ್ಥೆ 2020ರ ಆಗಸ್ಟ್ 8ರಂದು ಪ್ರಮುಖ ಪತ್ರಿಕೆಯೊಂದರಲ್ಲಿ ಜಾಹೀರಾತು ನೀಡಿತ್ತು.
ಭಾರತೀಯ ರೈಲ್ವೆ ಇಲಾಖೆ 11 ವರ್ಷಗಳ ಹೊರಗುತ್ತಿಗೆ ಮೂಲಕ ಎಂಟು ವಿಭಾಗಗಳಲ್ಲಿ 5000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವವರು 750 ರೂಪಾಯಿ ಶುಲ್ಕ ಪಾವತಿಸಬೇಕು. ಅರ್ಜಿ ಸಲ್ಲಿಸುವ ಕೊನೆ ದಿನಾಂಕ 2020ರ ಸೆಪ್ಟೆಂಬರ್ 10 ಎಂಬುದಾಗಿ ಜಾಹೀರಾತಿನಲ್ಲಿ ಉಲ್ಲೇಖಿಸಿತ್ತು.
ರೈಲ್ವೆ ಇಲಾಖೆಯಲ್ಲಿ ಭಾರತೀಯ ರೈಲ್ವೆ ಮಾತ್ರವೇ ನೇಮಕಾತಿ ಮಾಡಿಕೊಳ್ಳುತ್ತದೆ ವಿನಃ ಯಾವುದೇ ಕಾರಣಕ್ಕೂ ಖಾಸಗಿ ಏಜೆನ್ಸಿಯವರಿಗೆ ನೇಮಕಾತಿ ಮಾಡುವ ಯಾವುದೇ ಅಧಿಕಾರ ಇರುವುದಿಲ್ಲ. ಈ ನಿಟ್ಟಿನಲ್ಲಿ ಜಾಹೀರಾತು ಕಾನೂನು ಬಾಹಿರವಾದದ್ದು ಎಂದು ರೈಲ್ವೆ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಖಾಸಗಿ ಸಂಸ್ಥೆ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿರುವುದಾಗಿ ರೈಲ್ವೆ ಸಚಿವಾಲಯ ತಿಳಿಸಿದೆ. ರೈಲ್ವೆ ಇಲಾಖೆಯ ವಿವಿಧ ಕೆಟಗರಿಯಲ್ಲಿನ (ಸಿ ಮತ್ತು ಡಿ ಗ್ರೂಪ್) ಹುದ್ದೆಗಳ ನೇಮಕಾತಿಯನ್ನು 21ನೇ ರೈಲ್ವೆ ನೇಮಕಾತಿ ಮಂಡಳಿ(ಆರ್ ಆರ್ ಬಿಎಸ್ ) ಮತ್ತು 16ನೇ ರೈಲ್ವೆ ನೇಮಕಾತಿ ಸೆಲ್ (ಆರ್ ಆರ್ ಸಿ) ನಡೆಸಲಿದೆ ವಿನಃ ಯಾವುದೇ ಖಾಸಗಿ ಏಜೆನ್ಸಿಗಳು ನೇಮಕಾತಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?