ರಾಜಸ್ಥಾನ್:ಹಾಡಹಗಲೇ ಗುಂಡಿಟ್ಟು ವೈದ್ಯ ದಂಪತಿ ಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ಶೀಘ್ರವಾಗಿ ಆರೋಪಿಗಳನ್ನು ಸೆರೆಹಿಡಿಯುವ ಪ್ರಯತ್ನ ನಡೆಸಲಾಗಿದೆ ಎಂದು ಐಜಿಪಿ ಪ್ರಶನ್ ಕುಮಾರ್ ಖಮೇಸ್ರಾ ತಿಳಿಸಿದ್ದಾರೆ.
Team Udayavani, May 29, 2021, 10:58 AM IST
ನವದೆಹಲಿ: ಹಾಡಹಗಲೇ ವೈದ್ಯ ದಂಪತಿಯ ಕಾರನ್ನು ತಡೆದು ಗುಂಡಿಟ್ಟು ಹತ್ಯೆಗೈದಿರುವ ಘಟನೆ ರಾಜಸ್ಥಾನದಲ್ಲಿ ಶುಕ್ರವಾರ(ಮೇ 28) ನಡೆದಿದ್ದು, ಈ ಆಘಾತಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಹಸೆಮಣೆಯಲ್ಲೇ ಕುಸಿದು ಬಿದ್ದು ವಧು ಸಾವು, ಬಳಿಕ ವಧುವಿನ ಸಹೋದರಿ ಜತೆ ವರನ ವಿವಾಹ!
ಹಾಡಹಗಲೇ ನಡೆದಿರುವ ಈ ಘಟನೆಯ ವಿಡಿಯೋವನ್ನು ಟ್ವೀಟರ್ ನಲ್ಲಿ ಶೇರ್ ಮಾಡಿರುವ ಬಿಜೆಪಿ ಮುಖಂಡ ರಾಜ್ಯವರ್ಧನ್ ರಾಥೋಡ್, ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ.
A doctor couple shot dead in broad daylight in Rajasthan. Such an absolute state of lawlessness in Rajasthan is due to a spineless state govt. that has done nothing to stop criminals who run amok in our cities & villages. pic.twitter.com/Ru0zKYgf2C
— Col Rajyavardhan Rathore (@Ra_THORe) May 28, 2021
“ಬೆಳ್ಳಂಬೆಳಗ್ಗೆ ಇಬ್ಬರು ದುಷ್ಕರ್ಮಿಗಳು ವೈದ್ಯ ದಂಪತಿಯನ್ನು ಗುಂಡಿಟ್ಟು ಹತ್ಯೆಗೈದಿದ್ದಾರೆ. ರಾಜಸ್ಥಾನದಲ್ಲಿ ಇಂತಹ ಕಾನೂನು ಬಾಹಿರ ಘಟನೆ ನಡೆಯಲು ಬೆನ್ನುಮೂಳೆ ರಹಿತ ರಾಜ್ಯ ಸರ್ಕಾರವೇ ಕಾರಣ. ನಮ್ಮ ನಗರ ಮತ್ತು ಗ್ರಾಮಗಳಲ್ಲಿ ರಾಜಾರೋಷವಾಗಿ ಓಡಾಡುವ ಅಪರಾಧಿಗಳನ್ನು ನಿಗ್ರಹಿಸಲು ಏನನ್ನೂ ಮಾಡುತ್ತಿಲ್ಲ” ಎಂದು ರಾಜ್ಯವರ್ಧನ್ ಆರೋಪಿಸಿದ್ದಾರೆ.
ಪಿಟಿಐ ವರದಿ ಪ್ರಕಾರ, ಈ ಘಟನೆ ರಾಜಸ್ಥಾನದ ಭಾರತ್ ಪುರ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಗಳನ್ನು ಅಂಜು ಮತ್ತು ಮಹೇಶ್ ಎಂದು ಗುರುತಿಸಲಾಗಿದೆ ಎಂಬುದಾಗಿ ತಿಳಿಸಿದೆ. ಆದಷ್ಟು ಶೀಘ್ರವಾಗಿ ಆರೋಪಿಗಳನ್ನು ಸೆರೆಹಿಡಿಯುವ ಪ್ರಯತ್ನ ನಡೆಸಲಾಗಿದೆ ಎಂದು ಐಜಿಪಿ ಪ್ರಶನ್ ಕುಮಾರ್ ಖಮೇಸ್ರಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ