ಮಾವನಿಗೆ ದಾದಾ ಸಾಹೇಬ್ ಫಾಲ್ಕೆ, ಅಳಿಯನಿಗೆ ಅತ್ಯುತ್ತಮ ನಟ ಪ್ರಶಸ್ತಿ
ಬಸ್ ಚಾಲಕ ಮಿತ್ರನಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಅರ್ಪಿಸಿದ ರಜನಿಕಾಂತ್
Team Udayavani, Oct 25, 2021, 5:51 PM IST
ಹೊಸದಿಲ್ಲಿ : ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಸೋಮವಾರ 67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ನಟ, ನಿರ್ಮಾಪಕ ಮತ್ತು ಚಿತ್ರಕಥೆಗಾರರಾಗಿ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಪ್ರತಿಷ್ಠಿತ ಪ್ರಶಸ್ತಿಯನ್ನು ರಜನಿಕಾಂತ್ ಅವರಿಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರದಾನ ಮಾಡಿದರು.
ಇದನ್ನೂ ಓದಿ ದಾದಾ ಸಾಹೇಬ್ ಫಾಲ್ಕೆ ಜೊತೆ ಸೂಪರ್ ಸ್ಟಾರ್ ರಜನಿಕಾಂತ್ಗೆ ಡಬಲ್ ಸಂಭ್ರಮ
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸೂಪರ್ಸ್ಟಾರ್, ‘ಜನರ ಪ್ರೀತಿ ಮತ್ತು ಬೆಂಬಲದಿಂದಾಗಿ ಭಾರತ ಸರಕಾರ ಈ ಪ್ರಶಸ್ತಿ ನನಗೆ ನೀಡಿದೆ.ಈ ಪ್ರಶಸ್ತಿಯನ್ನು ನನ್ನ ಮಾರ್ಗದರ್ಶಕ ಕೆ. ಬಾಲಚಂದರ್, ಸಹೋದರ ಸತ್ಯನಾರಾಯಣ ರಾವ್ ಗಾಯಕ್ವಾಡ್ ಮತ್ತು ಅವರ ಬಸ್ ಚಾಲಕ-ಸ್ನೇಹಿತ ರಾಜ್ ಬಹದ್ದೂರ್,ನಿರ್ದೇಶಕರು, ನಿರ್ಮಾಪಕರು, ಥಿಯೇಟರ್ ಮಾಲೀಕರು, ತಂತ್ರಜ್ಞರು ಮತ್ತು ಅಭಿಮಾನಿಗಳಿಗೆ ಅರ್ಪಿಸಿದರು.
ಮಾವ, ಅಳಿಯನಿಗೆ ಒಟ್ಟಿಗೆ ಪ್ರಶಸ್ತಿ
ರಜನಿ ಕಾಂತ್ ಅವರ ಅಳಿಯ ಧನುಷ್ ಅವರು ಸಮಾರಂಭದಲ್ಲಿ ಭಾಗವಹಿಸಿ ‘ಅಸುರನ್’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದದ್ದು ವಿಶೇಷವಾಗಿತ್ತು. ಸಮಾರಂಭದ ಬಳಿಕ ಪ್ರಶಸ್ತಿ ಪದಕಗಳನ್ನು ರಜನಿ ಕಾಂತ್ ಅವರ ಪುತ್ರಿ ಸೌಂದರ್ಯ ಅವರು ಹಂಚಿಕೊಂಡು ಸಂಭ್ರಮಿಸಿದ್ದಾರೆ.
ರಜನಿಕಾಂತ್ ಅವರ ಪತ್ನಿ ಲತಾ ಮತ್ತು ಧನುಷ್ ಅವರ ಪತ್ನಿ ಐಶ್ವರ್ಯ ಕೂಡ ಸಮಾರಂಭದಲ್ಲಿ ಭಾಗವಹಿಸಿ ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ