ರಾಜಕೀಯಕ್ಕೆ ಬರುವಂತೆ ಒತ್ತಾಯಿಸಬೇಡಿ, ಪ್ರತಿಭಟನೆ ಕೈಬಿಡಿ: ಅಭಿಮಾನಿಗಳಿಗೆ ರಜನಿಕಾಂತ್
, ತಮ್ಮ ನಿಲುವು ಬದಲಾಯಿಸುವಂತೆ ಒತ್ತಾಯಿಸಿ ರಜನಿಕಾಂತ್ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು.
Team Udayavani, Jan 11, 2021, 1:29 PM IST
ಚೆನ್ನೈ: ರಾಜಕೀಯ ಪ್ರವೇಶಿಸುವುದಾಗಿ ಘೋಷಿಸಿ ನಂತರ ದಿಢೀರನೆ ರಾಜಕೀಯದಿಂದ ಹಿಂದೆ ಸರಿದ ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪ್ರವೇಶಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಅಭಿಮಾನಿಗಳ ವಿರುದ್ಧ ಅಸಮಾಧಾನವ್ಯಕ್ತಪಡಿಸಿದ್ದು, ಪ್ರತಿಭಟನೆಯ ಮೂಲಕ ಒತ್ತಡ ಹೇರಿ ನನಗೆ ಪದೇ, ಪದೇ ನೋವು ಕೊಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ರಾಜಕೀಯ ಪ್ರವೇಶಿಸುವುದಿಲ್ಲ ಎಂಬ ಹೇಳಿಕೆಯನ್ನು ಖಂಡಿಸಿ, ತಮ್ಮ ನಿಲುವು ಬದಲಾಯಿಸುವಂತೆ ಒತ್ತಾಯಿಸಿ ರಜನಿಕಾಂತ್ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು.
ರಾಜಕೀಯ ಪಕ್ಷ ಸ್ಥಾಪನೆಯಿಂದ ಹಿಂದೆ ಸರಿದಿರುವ ಬಗ್ಗೆ ನಾನು ವಿಸ್ತೃತವಾಗಿ ಕಾರಣವನ್ನು ಹೇಳಿದ್ದೇನೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯ ನಡೆಸಿ ರಾಜಕೀಯಕ್ಕೆ ಬರುವಂತೆ ಒತ್ತಡ ಹೇರಿ ಪದೇ, ಪದೇ ನನಗೆ ನೋವು ಕೊಡಬೇಡಿ ಎಂದು ರಜನಿಕಾಂತ್ ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಸಿಡ್ನಿಯಲ್ಲಿ ಗೆದ್ದ ‘ಟೆಸ್ಟ್ ಕ್ರಿಕೆಟ್’: ವಿಹಾರಿ ವೀರೋಚಿತ ಹೋರಾಟ; ಪಂದ್ಯ ಉಳಿಸಿದ ಭಾರತ
ರಜನಿ ಮಕ್ಕಳ್ ಮಂಡ್ರಂನ ಕೆಲವು ಉಚ್ಚಾಟಿತ ಸದಸ್ಯರು ನನ್ನ ಅಭಿಮಾನಿಗಳ ಜತೆ ಸೇರಿ ಚೆನ್ನೈನಲ್ಲಿ ನಾನು ರಾಜಕೀಯ ಪ್ರವೇಶಿಸುವುದಿಲ್ಲ ಎಂಬ ನಿರ್ಧಾರದ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಾನು ನನ್ನ ನಿರ್ಧಾರ ತೆಗೆದುಕೊಂಡಿದ್ದೇನೆ. ಈ ನಿಟ್ಟಿನಲ್ಲಿ ಯಾರೂ ಕೂಡಾ ಪ್ರತಿಭಟನೆ ನಡೆಸಿ ನನ್ನ ಮನಸ್ಸನ್ನು ನೋಯಿಸಬಾರದು ಎಂದು ರಜನಿಕಾಂತ್ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ