ರಾಜಕೀಯ ಪ್ರವೇಶದ ಕುರಿತು ಅತೀ ಶೀಘ್ರವೇ ನಿರ್ಧಾರ ಪ್ರಕಟ ಎಂದ ಸೂಪರ್ ಸ್ಟಾರ್
Team Udayavani, Nov 30, 2020, 7:29 PM IST
ಚೆನ್ನೈ : ತಾನು ರಾಜಕೀಯಕ್ಕೆ ಪ್ರವೇಶಿಸುವ ಕುರಿತು ಅತೀ ಶೀಘ್ರದಲ್ಲಿ ನಿರ್ಧಾರ ಪ್ರಕಟಿಸಲಿದ್ದೇನೆ ಎಂದು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿಕೆ ನೀಡಿದ್ದಾರೆ.
ಚೆನ್ನೈ ನ ಕಲ್ಯಾಣ ಮಂಟಪದಲ್ಲಿ ನಡೆದ ‘ರಜನಿ ಮಕ್ಕಳ್ ಮಂದಿರಂ’ನ ಜಿಲ್ಲಾ ಪದಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ರಾಜಕೀಯ ಪ್ರವೇಶದ ಕುರಿತು ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಸೂಪರ್ ಸ್ಟಾರ್ ಅಭಿಮಾನಿಗಳು ಕಾತುರದಿಂದ ಕಾದಿದ್ದರು ಆದರೆ ಸಭೆಯಲ್ಲಿ ರಾಜಕೀಯ ಪ್ರವೇಶದ ಕುರಿತು ಯಾವುದೇ ವಿಚಾರ ಪ್ರಕಟಿಸದ ರಜನಿಕಾಂತ್ ಮಾಧ್ಯಮದವರೊಂದಿಗೆ ಮಾತನಾಡಿ ‘ರಜನಿ ಮಕ್ಕಳ್ ಮಂಡ್ರಮ್’ನ ಜಿಲ್ಲಾ ಕಾರ್ಯದರ್ಶಿಗಳು ತಮ್ಮ ಯೋಜನೆಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ನಾನು ತೆಗೆದುಕೊಳ್ಳುವ ಎಲ್ಲ ನಿರ್ಧಾರಗಳಿಗೆ ಬೆಂಬಲ ನೀಡುವುದಾಗಿ ತಿಳಿದಿದ್ದಾರೆ ಎಂದು ಹೇಳಿದ್ದಾರೆ ಅಲ್ಲದೆ ನನ್ನ ರಾಜಕೀಯ ಪ್ರವೇಶದ ಕುರಿತು ಶೀಘ್ರವಾಗಿ ನಿರ್ಧಾರ ಪ್ರಕಟಿಸಲಿದ್ದೇನೆ ಎಂದು ತಿಳಿಸಿದ್ದಾರೆ
ಇದನ್ನೂ ಓದಿ:ಪ್ರತಿಭಟನಾ ನಿರತ ರೈತರ ಮೇಲೆ ಜಲಫಿರಂಗಿ ಪ್ರಯೋಗ ಮಾಡಿರುವುದು ಕ್ರೂರತನ : ಶಿವಸೇನೆ ಆಕ್ರೋಶ
ತಮಿಳುನಾಡಿನಲ್ಲಿ ಮುಂಬರುವ 2021ರ ವಿಧಾನ ಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಜನಿಕಾಂತ್ ರಾಜಕೀಯಕ್ಕೆ ಪ್ರವೇಶಿಸುವುದು ಭಾರಿ ಕುತೂಹಲ ಮೂಡಿದೆ. ಸೂಪರ್ ಸ್ಟಾರ್ ರಾಜಕೀಯ ಸೇರುತ್ತಾರೋ, ಇಲ್ಲವೋ ಎಂಬುದು ಅವರ ನಿರ್ಧಾರದ ಮೇಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು