ಚೀನಾ ರಕ್ಷಣಾ ಸಚಿವರ ಕೈಲುಕಲಿಲ್ಲ ರಾಜನಾಥ್‌

ಭಾರತ-ಚೀನಾ ಬಾಂಧವ್ಯವೃದ್ಧಿಗೆ ಗಡಿಯಲ್ಲಿ ಶಾಂತಿ ನೆಲೆಸುವುದು ಅಗತ್ಯ -ಚೀನಾಕ್ಕೆ ಖಡಕ್‌ ಸಂದೇಶ

Team Udayavani, Apr 29, 2023, 7:53 AM IST

RAJNATH CHINA

ನವದೆಹಲಿ: ಶಾಂಘೈ ಸಹಕಾರ ಸಂಘ(ಎಸ್‌ಸಿಒ)ದ ರಕ್ಷಣಾ ಸಚಿವರ ಸಮಾವೇಶವು ಶುಕ್ರವಾರ ನವದೆಹಲಿಯಲ್ಲಿ ನಡೆದಿದ್ದು, ಗಡಿಯಲ್ಲಿ ಪದೇಪದೆ ಕಿರಿಕ್‌ ಮಾಡುತ್ತಿರುವ ಚೀನಾ ಮತ್ತು ಪಾಕಿಸ್ತಾನಕ್ಕೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಖಡಕ್‌ ಸಂದೇಶ ರವಾನಿಸಿದ್ದಾರೆ.

ಮತ್ತೂಂದು ವಿಶೇಷವೆಂದರೆ, ಚೀನಾ ರಕ್ಷಣಾ ಸಚಿವ ಜನರಲ್‌ ಲಿ ಶಾಂಗ್ಫು ಅವರೊಂದಿಗೆ 45 ನಿಮಿಷಗಳ ಕಾಲ ಮಾತುಕತೆ ನಡೆಸಿದರೂ, ಅವರೊಂದಿಗೆ ರಾಜನಾಥ್‌ ಹಸ್ತಲಾಘವ ಮಾಡಲಿಲ್ಲ. ತಜಕಿಸ್ತಾನ, ಇರಾನ್‌ ಮತ್ತು ಕಜಕ್‌ ರಕ್ಷಣಾ ಸಚಿವರಿಗೆ ಹಸ್ತಲಾಘವ ಮಾಡಿ ಕುಶಲೋಪರಿ ವಿಚಾರಿಸಿದ ರಾಜನಾಥ್‌, ಚೀನಾ ರಕ್ಷಣಾ ಸಚಿವರೊಂದಿಗೆ ಮಾತ್ರ ಈ ಆತ್ಮೀಯತೆ ಪ್ರದರ್ಶಿಸದೇ ಅಚ್ಚರಿ ಮೂಡಿಸಿದರು.

ಒಂದುಕಡೆ ಗಡಿ ವಿಚಾರವಾಗಿ ಚೀನಾಗೆ, ಭಯೋತ್ಪಾದನೆ ವಿಚಾರವಾಗಿ ಪಾಕಿಸ್ತಾನಕ್ಕೆ ರಾಜನಾಥ್‌ ಪಾಠ ಮಾಡಿದರು. ಭಾರತ ಮತ್ತು ಚೀನಾದ ಸಂಬಂಧವೃದ್ಧಿಯು ಗಡಿಪ್ರದೇಶದಲ್ಲಿನ ಶಾಂತಿ-ನೆಮ್ಮದಿಯನ್ನು ಅವಲಂಬಿಸಿದೆ ಎಂದ ಸಿಂಗ್‌, ಎಲ್‌ಎಸಿಯಲ್ಲಿನ ಎಲ್ಲ ವಿವಾದಗಳಿಗೂ ದ್ವಿಪಕ್ಷೀಯ ಒಪ್ಪಂದಗಳು ಹಾಗೂ ಬದ್ಧತೆಗಳ ಅನುಸಾರವೇ ಪರಿಹಾರ ಕಂಡುಕೊಳ್ಳಬೇಕಿದೆ ಎಂದರು. ಅಲ್ಲದೇ, ಒಪ್ಪಂದಗಳ ಉಲ್ಲಂಘನೆಯು ದ್ವಿಪಕ್ಷೀಯ ಬಾಂಧವ್ಯ ಮತ್ತು ಗಡಿಯಲ್ಲಿನ ಸೇನೆ ವಾಪಸಾತಿಯ ಅಡಿಪಾಯವನ್ನೇ ಅಲುಗಾಡಿಸಿದೆ ಎಂದೂ ಹೇಳಿದರು.

ಇದಾದ ಬೆನ್ನಲ್ಲೇ ಮಾತನಾಡಿದ ಚೀನಾ ರಕ್ಷಣಾ ಸಚಿವ ಜ. ಲಿ ಶಾಂಗ್ಫು, “ಗಡಿಯಲ್ಲಿನ ಪರಿಸ್ಥಿತಿಯು ಸದ್ಯಕ್ಕೆ ಸ್ಥಿರವಾಗಿದ್ದು, ಉಭಯ ದೇಶಗಳು ಸೂಕ್ತ ನಿರ್ಧಾರ ಕೈಗೊಂಡು, ಅದನ್ನು ಸಹಜ ಸ್ಥಿತಿಗೆ ಮರಳಿಸಬೇಕು” ಎಂದಿದ್ದಾರೆ. ಭಾರತ ಮತ್ತು ಚೀನಾ ಒಂದಾಗಿ ಎರಡೂ ದೇಶಗಳ ಸೇನೆಯ ನಡುವೆ ಪರಸ್ಪರ ವಿಶ್ವಾಸ ಬಲಗೊಳ್ಳುವಂತೆ ಮಾಡಬೇಕು. ದ್ವಿಪಕ್ಷೀಯ ಸಂಬಂಧವೃದ್ಧಿಗೆ ಸೂಕ್ತ ಕೊಡುಗೆಗಳನ್ನು ನೀಡಬೇಕು ಎಂದೂ ಅವರು ಸಲಹೆ ನೀಡಿದರು.

ಈ ನಡುವೆ, ಸಚಿವ ರಾಜನಾಥ್‌ ಅವರು ರಷ್ಯಾ ರಕ್ಷಣಾ ಸಚಿವ ಜನರಲ್‌ ಸೆರ್ಗೆ ಶೊಯಿಗು ಹಾಗೂ ಉಜ್ಬೆಕ್‌ ರಕ್ಷಣಾ ಸಚಿವರೊಂದಿಗೂ ಪ್ರತ್ಯೇಕ ಮಾತುಕತೆ ನಡೆಸಿದ್ದು ಕಂಡುಬಂತು.

ಭಯೋತ್ಪಾದನೆಯನ್ನು ಬೇರುಸಮೇತ ಕಿತ್ತು ಹಾಕೋಣ

ಎಲ್ಲ ರೀತಿಯ ಭಯೋತ್ಪಾದನೆಗಳನ್ನೂ ನಿರ್ಮೂಲನೆ ಮಾಡಲು ಮತ್ತು ಉಗ್ರರಿಗೆ ಬೆಂಬಲ ನೀಡುವವರನ್ನೇ ಉಗ್ರಕೃತ್ಯಗಳಿಗೆ ಹೊಣೆಗಾರರನ್ನಾಗಿಸಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಶಾಂಘೈ ಸಹಕಾರ ಸಂಘದ ಸದಸ್ಯ ರಾಷ್ಟ್ರಗಳಿಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಕರೆ ನೀಡಿದರು. ಎಸ್‌ಸಿಒ ದೇಶಗಳ ರಕ್ಷಣಾ ಸಚಿವರ ಸಮಾವೇಶದಲ್ಲಿ ಮಾತನಾಡಿದ ಅವರು, ಯಾವುದೇ ರೀತಿಯ ಭಯೋತ್ಪಾದನಾ ಕೃತ್ಯ ಮತ್ತು ಅದಕ್ಕೆ ನೀಡುವ ಬೆಂಬಲವು ಇಡೀ ಮಾನವತೆಯ ವಿರುದ್ಧ ನಡೆಸುವ ಅಪರಾಧವಾಗಿದೆ. ಒಂದು ದೇಶವು ಉಗ್ರರಿಗೆ ಆಶ್ರಯ ನೀಡುತ್ತಿದ್ದರೆ, ಅದು ಕೇವಲ ಇತರರಿಗೆ ಮಾತ್ರವಲ್ಲ, ಆ ದೇಶಕ್ಕೂ ಅಪಾಯವನ್ನು ಉಂಟುಮಾಡಲಿದೆ. ಯುವಕರನ್ನು ತೀವ್ರಗಾಮಿಗಳಾಗಿ ರೂಪಿಸುವುದರಿಂದ ಭದ್ರತೆಗಷ್ಟೇ ಸಮಸ್ಯೆಯಲ್ಲ, ಬದಲಿಗೆ ಸಮಾಜದ ಸಾಮಾಜಿಕ-ಆರ್ಥಿಕ ಪ್ರಗತಿಗೂ ಅದು ಅಡ್ಡಿ ಉಂಟುಮಾಡಲಿದೆ ಎಂದೂ ಹೇಳಿದರು. ಪಾಕಿಸ್ತಾನ ಹೊರತುಪಡಿಸಿ ಉಳಿದ ಎಲ್ಲ ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರು ಈ ಸಮಾವೇಶದಲ್ಲಿ ಖುದ್ದು ಭಾಗಿಯಾಗಿದ್ದರು. ಪಾಕ್‌ ರಕ್ಷಣಾ ಸಚಿವರು ವರ್ಚುವಲ್‌ ಆಗಿ ಪಾಲ್ಗೊಂಡರು ಎಂದು ಮೂಲಗಳು ತಿಳಿಸಿವೆ.

ಎಸ್‌ಸಿಒ ರಾಷ್ಟ್ರಗಳೊಂದಿಗೆ ಸಂಪರ್ಕ ಸಾಧಿಸುವುದೇ ಭಾರತದ ಆದ್ಯತೆಯಾಗಿದೆ. ದೇಶಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗಳು° ಗೌರವಿಸಿಕೊಂಡು, ಸುಸ್ಥಿರ ಅಭಿವೃದ್ಧಿ ಸಾಧಿಸುವತ್ತ ಎಲ್ಲರೂ ಗಮನಹರಿಸಬೇಕು.

– ನಿತಿನ್‌ ಗಡ್ಕರಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.