ಕಾಂಗ್ರೆಸ್‌-ಜೆಡಿಎಸ್‌ ಜಿದ್ದಾಜಿದ್ದಿ ಕಾಳಗಕ್ಕೆ ರಾಜ್ಯಸಭೆ ಚುನಾವಣೆ ಮುನ್ನುಡಿ

ಗೆದ್ದ ಸಿದ್ದರಾಮಯ್ಯ ದಾಳ

Team Udayavani, Jun 11, 2022, 7:30 AM IST

ಕಾಂಗ್ರೆಸ್‌-ಜೆಡಿಎಸ್‌ ಜಿದ್ದಾಜಿದ್ದಿ ಕಾಳಗಕ್ಕೆ ರಾಜ್ಯಸಭೆ ಚುನಾವಣೆ ಮುನ್ನುಡಿ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ “ಮುಸ್ಲಿಂ’ ಅಸ್ತ್ರ ಬಳಸಿ ಜೆಡಿಎಸ್‌ ಅಭ್ಯರ್ಥಿ ಸೋಲುವಂತೆ ಮಾಡುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಈ ಬಾರಿ ಅವರು ಡಿ.ಕೆ. ಶಿವಕುಮಾರ್‌ ಅವರನ್ನು ಜತೆಗಿರಿಸಿಕೊಂಡೇ ರಾಜಕೀಯ ದಾಳ ಉರುಳಿಸಿದ್ದಾರೆ.

ಸಿ.ಎಂ. ಇಬ್ರಾಹಿಂ ಜೆಡಿಎಸ್‌ ರಾಜ್ಯಾಧ್ಯಕ್ಷ ರಾದರೂ ಕಾಂಗ್ರೆಸ್‌ನ ಮುಸ್ಲಿಂ ಅಭ್ಯರ್ಥಿಗೆ ಬೆಂಬಲ ಕೊಡಿಸಲು ಆಗಲಿಲ್ಲ. ಜೆಡಿಎಸ್‌ ಮುಸ್ಲಿಮರ ಪರ ಇಲ್ಲ ಎಂಬ ಸಂದೇಶ ರವಾನೆಯಾಗಬೇಕು ಎಂಬ ಸಿದ್ದರಾಮಯ್ಯ ಅವರ ಮೂಲ ಉದ್ದೇಶ ಈಡೇರಿದೆ.

ಕಾಂಗ್ರೆಸ್‌ -ಜೆಡಿಎಸ್‌ ಜಿದ್ದಾಜಿದ್ದಿನ ಹೋರಾಟಕ್ಕೆ ಈ ಚುನಾವಣೆ ವೇದಿಕೆ ಕಲ್ಪಿಸಿದ್ದು, ಇನ್ನು ಮುಂದೆ ಜೆಡಿಎಸ್‌ ಬಿಜೆಪಿಗಿಂತ ಕಾಂಗ್ರೆಸ್‌ ವಿರುದ್ಧ ಇನ್ನಷ್ಟು ಆಕ್ರಮಣಕಾರಿಯಾಗುವ ಲಕ್ಷಣಗಳಿವೆ.

“ಇನ್ನುಮುಂದೆ ಕಾಂಗ್ರೆಸ್‌ ಸಹವಾಸ ಮಾಡುವುದಿಲ್ಲ’ ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ ಜೆಡಿಎಸ್‌ ಜತೆಗೆ ಕಾಂಗ್ರೆಸ್‌ನ ಸಂಭವನೀಯ ದೋಸ್ತಿಯ ಬಾಗಿಲು ಮುಚ್ಚಿದಂತಾಗಿದೆ. ಇದರಿಂದ ಕಾಂಗ್ರೆಸ್‌ನ ಕೆಲವು ಮುಖಂಡರ ಕನಸು ಭಗ್ನಗೊಂಡಂತಾಗಿದೆ.

ಲೆಹರ್‌ ಸಿಂಗ್‌ ರಾಜ್ಯಸಭೆ ಪ್ರವೇಶಿಸಿರುವುದರಿಂದ ಬಿ.ಎಸ್‌. ಯಡಿಯೂ ರಪ್ಪರಿಗೆ ವೈಯಕ್ತಿಕವಾಗಿ ಬಲ ಬಂದಿರುವುದು ಗಮನಿಸಬೇಕಾದ ಸಂಗತಿ.

ಬಿಜೆಪಿ ಲಾಭ
ಜೆಡಿಎಸ್‌ ತನ್ನ ಮುಸ್ಲಿಂ ಅಭ್ಯರ್ಥಿಗೆ ಬೆಂಬಲ ನೀಡಲಿಲ್ಲ ಎಂಬ ಅಸ್ತ್ರ ಕಾಂಗ್ರೆಸ್‌ಗೆ ದೊರೆತರೆ ಜಾತ್ಯತೀತ ಶಕ್ತಿಗಳ ಬಗ್ಗೆ ಮಾತನಾಡುವ ಕಾಂಗ್ರೆಸ್‌ ಕರ್ನಾಟಕದ ವಿಚಾರದಲ್ಲಿ ಪರೋಕ್ಷವಾಗಿ ಬಿಜೆಪಿಗೆ ಸಹಕಾರ ನೀಡಿದೆ ಎಂಬ ಪ್ರತ್ಯಸ್ತ್ರ ಜೆಡಿಎಸ್‌ಗೆ ಸಿಕ್ಕಿದಂತಾಗಿದೆ. ಈ ಎರಡೂ ಪಕ್ಷಗಳು ಪರಸ್ಪರ ಜಿದ್ದಾಜಿದ್ದಿಗೆ ಬಿದ್ದಷ್ಟು ಆಡಳಿತಾರೂಢ ಬಿಜೆಪಿಗೆ ರಾಜಕೀಯವಾಗಿ ಲಾಭವೇ ಹೆಚ್ಚು ಎಂಬ ವ್ಯಾಖ್ಯಾನಗಳು ಕೇಳಿಬರುತ್ತಿವೆ.

ಕಾಂಗ್ರೆಸ್‌-ಜೆಡಿಎಸ್‌ ಜಗಳ ಆದಷ್ಟು ಬಿಜೆಪಿ ಶಕ್ತಿ ಹೆಚ್ಚುತ್ತ ಹೋಗುತ್ತದೆ. ಬಿಜೆಪಿ ಯಾರೂ ಊಹಿಸದ ರೀತಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅನಾಯಾಸವಾಗಿ ಗೆದ್ದುಕೊಂಡಿದೆ. ಪ್ರಸಕ್ತ ರಾಜಕೀಯ ಸನ್ನಿವೇಶದಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಒಂದಾಗದಂತೆ ನೋಡಿಕೊಂಡರೆ ರಾಜ್ಯದಲ್ಲಿ ಬಿಜೆಪಿಗೆ ಪ್ಲಸ್‌. ಇದನ್ನು ರಾಜ್ಯಸಭೆ ಚುನಾವಣೆ ಫ‌ಲಿತಾಂಶ ಸಾಬೀತುಮಾಡಿದೆ.

ಈ ಚುನಾವಣೆ ವಿಚಾರದಲ್ಲಿ ಸಿದ್ದು ಮತ್ತು ಡಿ.ಕೆ.ಶಿ. ಒಂದಾಗಿ ಮಲ್ಲಿಕಾ ರ್ಜುನ ಖರ್ಗೆ ಮೂಲೆಗುಂಪಾ ದಂತಾಗಿದ್ದು, ಅವರ ಮಾತು ಹೈಕ ಮಾಂಡ್‌ ಮಟ್ಟದಲ್ಲೂ ನಡೆದಿಲ್ಲ. ಇದನ್ನು ಜೆಡಿಎಸ್‌ ರಾಜಕೀಯ ವಾಗಿ ಬಳಸಿಕೊಳ್ಳದೆ ಬಿಡದು. ದಲಿತ ಸಿಎಂ ವಿಚಾರವನ್ನೆತ್ತಿ ಸಿದ್ದು ಮತ್ತು ಡಿಕೆಶಿಯನ್ನು ಹಣಿಯಬಹುದು.

ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿ ಶಕ್ತಿಶಾಲಿ ಆಗುವುದು ಜೆಡಿಎಸ್‌ಗೂ ಇಷ್ಟವಿಲ್ಲ. ಅವರ ಮಾತು ನಡೆಯ ದಂತೆ ನೋಡಿಕೊಳ್ಳಲು ಖರ್ಗೆ ಮೂಲಕ ಎಚ್‌.ಡಿ. ದೇವೇಗೌಡರು ಶತ ಪ್ರಯತ್ನ ಮಾಡಿದ್ದರು. ಅದು ಫ‌ಲಿಸದ ಅನಂತರ ಎಚ್‌.ಡಿ. ಕುಮಾರಸ್ವಾಮಿ ರಂಗಪ್ರವೇಶ ಮಾಡಿ ತಮ್ಮ ನೆಟ್‌ವರ್ಕ್‌ ಬಳಸಿದರು. ಒಂದು ಹಂತದಲ್ಲಿ ಡಿ.ಕೆ. ಶಿವಕುಮಾರ್‌ ಜತೆಗೂ ಮಾತನಾಡಿದರು. ಆದರೂ ಪ್ರಯೋಜನವಾಗಲಿಲ್ಲ.

ಈಗ ಕುಮಾರಸ್ವಾಮಿ ಸುಮ್ಮನೆ ಇರುವವರಲ್ಲ. ತಮ್ಮ ಮೊದಲ ಶತ್ರು ಸಿದ್ದರಾಮಯ್ಯ ಎಂಬಂತೆ ಮುಗಿಬೀಳಬಹುದು. ರಾಜಕೀಯವಾಗಿ ಅವರ ಪ್ರಭಾವ ಕುಗ್ಗಿಸುವ ಕಾರ್ಯತಂತ್ರಗಳು ಇನ್ನುಮುಂದೆ ಹೆಚ್ಚಾಗಿ ನಡೆಯಲಿವೆ. ಬಿಜೆಪಿಗೂ ಇದೇ ಬೇಕಾಗಿದೆ.

ಡಿಕೆಶಿ ರಿವರ್ಸ್‌ ಆಗುವರೇ?
ಸಿದ್ದರಾಮಯ್ಯ ಹಠ ಸದ್ಯಕ್ಕೆ ಡಿ.ಕೆ.ಶಿ. ಅವರನ್ನೂ ಮಣಿಸಿದೆ. ಆದರೆ ಪಕ್ಷದಲ್ಲಿ ಸಿದ್ದರಾಮಯ್ಯ ಮಾತೇ ಅಂತಿಮ ಎಂಬ ವಾತಾವರಣ ಉಂಟಾದರೆ ಡಿ.ಕೆ.ಶಿ. “ರಿವರ್ಸ್‌’ ಆಗದೆ ಇರುವುದಿಲ್ಲ. ಮೇಕೆದಾಟು ಪಾದಯಾತ್ರೆ ವಿಚಾರದಲ್ಲಿ ಕುಮಾರಸ್ವಾಮಿಯವರು ಕಾಂಗ್ರೆಸ್‌ ಅದರಲ್ಲೂ ಡಿ.ಕೆ.ಶಿ. ಮೇಲೆ ಮುಗಿಬಿದ್ದು ಆ ಬಳಿಕ ಪರ್ಯಾಯವಾಗಿ ಜನತಾ ಜಲಧಾರೆ ನಡೆಸಿ ಶಕ್ತಿ ಪ್ರದರ್ಶನ ಮಾಡಿದ್ದರು. ಇದರಿಂದ ತಮ್ಮ ಒಕ್ಕಲಿಗ ನಾಯಕತ್ವಕ್ಕೆ ಸಂಚಕಾರ ಬರಬಹುದು ಎಂಬ ಆತಂಕದಿಂದ ಸದ್ಯ ಡಿ.ಕೆ.ಶಿ.ಯವರು ಸಿದ್ದರಾಮಯ್ಯ ಜತೆ ಕೈ ಜೋಡಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.