ರಾಮನಗರ: ಸಿಎಂ ಬೊಮ್ಮಾಯಿ ಸಮ್ಮುಖದಲ್ಲೇ ಡಿಕೆ ಸುರೇಶ್, ಅಶ್ವತ್ಧ ನಾರಾಯಣ ಜಟಾಪಟಿ
ನಮಗೆ ಹೇಳದೆಯೇ ಬಿಜೆಪಿಯಿಂದ ಕಾರ್ಯಕ್ರಮ ನಡೆಸಿದೆ.
Team Udayavani, Jan 3, 2022, 2:16 PM IST
ಬೆಂಗಳೂರು:ರಾಮನಗರದಲ್ಲಿ ನಾನಾ ಅಭಿವೃದ್ಧಿ ಕಾರ್ಯಕ್ರಮಗಳ ಅನಷ್ಠಾನಕ್ಕಾಗಿ ಸೋಮವಾರ (ಜನವರಿ 03) ಆಯೋಜಿಸಿದ್ದ ಸರಕಾರಿ ಕಾರ್ಯಕ್ರಮದಲ್ಲಿ ಸಚಿವ ಡಾ.ಅಶ್ವತ್ಥನಾರಾಯಣ ಹಾಗೂ ಸಂಸದ ಡಿ.ಕೆ.ಸುರೇಶ್ ಮಧ್ಯೆ ನಡೆದ ವಾಗ್ವಾದ ಕೈ ಕೈ ಮಿಲಾಯಿಸುವ ಹಂತ ತಲುಪಿ ಮುಖ್ಯಮಂತ್ರಿ ಬೊಮ್ಮಾಯಿ ಸಮ್ಮುಖದಲ್ಲೇ ರಾದ್ಧಾಂತ ಸೃಷ್ಟಿಯಾದ ಘಟನೆ ನಡೆದಿದೆ.
ಮೇಕೆದಾಟು ವಿಚಾರವಾಗಿ ಬಿಜೆಪಿ – ಕಾಂಗ್ರೆಸ್ ಮಧ್ಯೆ ನಡೆಯುತ್ತಿದ್ದ ಆರೋಪ ಈಗ ವೇದಿಕೆಯಲ್ಲೇ ಹೊಡೆದಾಟ ಸೃಷ್ಟಿಸುವ ಸ್ಥಿತಿ ನಿರ್ಮಿಸಿದೆ.
ಕಾರ್ಯಕ್ರಮದಲ್ಲಿ ಸ್ಥಳೀಯ ಸಂಸದರಿಗೆ ಸೂಕ್ತ ಗೌರವ ನೀಡಿಲ್ಲ ಎಂದು ಆರೋಪಿಸಿ ವೇದಿಕೆಯಲ್ಲಿ ಪ್ರತಿಭಟಿಸಿದ ಸಂಸದ ಡಿ ಕೆ ಸುರೇಶ್ , ಕಾರ್ಯಕ್ರಮದ ಬಗ್ಗೆ ನಮ್ಮ ಜೊತೆ ಸಭೆ ನಡೆಸಬೇಕಿತ್ತು ವಿಜೃಂಭಣೆಯಿಂದ ನಿಮ್ಮನ್ನು ಸ್ವಾಗತ ಮಾಡುತ್ತಿದ್ದೆವು. ನಮಗೆ ಹೇಳದೆಯೇ ಬಿಜೆಪಿಯಿಂದ ಕಾರ್ಯಕ್ರಮ ನಡೆಸಿದೆ. ನಿಮಗೆ ಈ ಸಂಸ್ಕೃತಿ ಆರೆಸ್ಸೆಸ್ ಹೇಳಿಕೊಡ್ತಾ? ಎಂದು ಪ್ರಶ್ನಿಸಿದರು.
ನಂತರ ಅಶ್ವತ್ ನಾರಾಯಣ್ ಮಾತನಾಡುವಾಗ ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಡಿಕೆ ಎಂದು ಘೋಷಣೆ ಹಾಕಿದಾಗ ಯಾರಪ್ಪಾ ಅಲ್ಲಿ ಗಂಡು ಕೆಲಸದಲ್ಲಿ ತೋರಿಸಿ” ಎಂದು ಅಶ್ವತ್ ನಾರಾಯಣ್ ಹೇಳಿಕೆಗೆ ಡಿಕೆ ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು. ಭಾಷಣ ಮಾಡುತ್ತಿದ್ದ ಅಶ್ವತ್ಥನಾರಾಯಣ ಬಳಿಗೆ ನುಗ್ಗಿ ಬಂದಾಗ ಇಬ್ಬರ ಮಧ್ಯೆ ಕೈ ಕೈ ಮಿಲಾಯಿಸುವ ಸ್ಥಿತಿ ನಿರ್ಮಾಣವಾಯಿತು. ಅಶ್ವತ್ಥ್ ನಾರಾಯಣ ಮೈಕ್ ಕಿತ್ತೆಸೆದ ಎಂಎಲ್ ಸಿ ರವಿ ಭಾಷಣಕ್ಕೆ ಅಡ್ಡಿಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ