ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಹೊಸ ತಿರುವು : ಯುವತಿಯ ಅಪಹರಣವಾಗಿದೆ ಎಂದು ಪೋಷಕರ ದೂರು


Team Udayavani, Mar 16, 2021, 9:48 PM IST

ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಹೊಸ ತಿರುವು : ಯುವತಿಯ ಅಪಹರಣವಾಗಿದೆ ಎಂದು ಪೋಷಕರ ದೂರು

ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೂಂದು ಮಹತ್ವದ ತಿರುವು ಸಿಕ್ಕಿದ್ದು, ಸಿಡಿಯಲ್ಲಿರುವ ತಮ್ಮ ಮಗಳನ್ನು ಅಪಹರಿಸಲಾಗಿದೆ ಎಂದು ಯುವತಿಯ ಪಾಲಕರು ಬೆಳಗಾವಿಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ ದ್ದಾರೆ. ಇದರೊಂದಿಗೆ ಪ್ರಕರಣ ಮತ್ತೂಂದು ಮಜಲು ಪಡೆದುಕೊಂಡಿದೆ.

ಬೆಳಗಾವಿಯ ಹನುಮಾನ ನಗರದ ನಿವಾಸಿಯಾದ ಯುವತಿಯ ಪಾಲಕರು ತಮ್ಮ ಮಗಳನ್ನು ಮಾ.2ರಂದು ಬೆಂಗಳೂರಿನಲ್ಲಿ ಅಪಹರಣ ಮಾಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದು, ಎಪಿಎಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ತಮ್ಮ ಮಗಳನ್ನು ಅಪಹರಿಸಿ ನಂತರ ಅಕ್ರಮ ಬಂಧನದಲ್ಲಿಟ್ಟು ನಕಲಿ ಸಿಡಿ ಮಾಡಿ ಅದನ್ನು ಮಾಧ್ಯಮಗಳಿಗೆ ನೀಡಿ ಅವಮಾನ ಮಾಡಿದ್ದಲ್ಲದೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದಾರೆ. ಅದರಂತೆ ಐಪಿಸಿ ಸೆಕ್ಷನ್‌ 363, 368, 343, 346, 354 354ಎ ಹಾಗೂ 506ರ ಅಡಿಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರಿನಲ್ಲಿ ಯಾರೋ ಅಪಹರಣ ಮಾಡಿ ಕಿರುಕುಳ ನೀಡುತ್ತಿದ್ದಾರೆಂದು ಯುವತಿಯ ಪಾಲಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ಸಂಖ್ಯೆ 29/2021ರಲ್ಲಿ ಅಪಹರಣ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ದೂರಿನಲ್ಲೇನಿದೆ?: ತಮ್ಮ ಪುತ್ರಿಯು ಬೆಂಗಳೂರಿನಲ್ಲಿ ಸಾಫ್ಟ್ವೇರ್‌ ಕಂಪನಿಯಲ್ಲಿ ಕೆಲಸ ಮಾಡಿಕೊಂಡು ಪಿಜಿಯಲ್ಲಿ ಇರುತ್ತಿದ್ದಳು. ರಜೆ ಇದ್ದಾಗ ಮನೆಗೆ ಬರುತ್ತಿದ್ದಳು. ಆದರೆ ಕಳೆದ ಕೆಲ ದಿನಗಳ ಹಿಂದೆ ಟಿವಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದು ಅದರಲ್ಲಿ ತಮ್ಮ ಮಗಳಂತೆ ಕಾಣುವ ಯುವತಿ ವ್ಯಕ್ತಿಯೊಂದಿಗೆ ಅಶ್ಲೀಲವಾಗಿ ವರ್ತಿಸುತ್ತಿರುವುದನ್ನು ನೋಡಿ ಹೆದರಿಕೆಯಾಯಿತು. ಇದರ ಬಗ್ಗೆ ಮಗಳನ್ನು ವಿಚಾರಿಸಿದಾಗ ವಿಡಿಯೋದಲ್ಲಿರುವುದು ನಾನಲ್ಲ.

ನನ್ನಂತೆ ಕಾಣುವ ವಿಡಿಯೋ ಎಡಿಟ್‌ ಮಾಡಿ ಅದಕ್ಕೆ ನಕಲಿ ಧ್ವನಿ ಸೇರಿಸಿ ಅದನ್ನು ಹರಿಬಿಟ್ಟಿದ್ದಾರೆ ಎಂದು ತಿಳಿಸಿದ್ದಳು. ಸಿಡಿ ನಕಲಿ ಎಂದು ಸಾಬೀತಾದ ನಂತರ ಮನೆಗೆ ಬರುತ್ತೇನೆಂದು ಮೂರು ದಿನ ಸಂಪರ್ಕದಲ್ಲಿದ್ದಳು. ಕರೆ ಮಾಡಿದಾಗ ಭಯದಲ್ಲಿ ಮಾತನಾಡುತ್ತಿದ್ದಳು. ಎಲ್ಲಿದ್ದೇನೆ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಳು. ಇದನ್ನು ನೋಡಿದರೆ ಯಾರೋ ಅವಳನ್ನು ಅಪಹರಿಸಿ ಒತ್ತಾಯಪೂರ್ವಕವಾಗಿ ಅವಳ ವಿಡಿಯೋ ಮಾಡಿ ಬಿಡುತ್ತಿದ್ದಾರೆಂಬ ಅನುಮಾನ ಇದೆ. ಅಕೆಯ ಜೀವಕ್ಕೆ ಅಪಾಯ ಇದೆ. ನಮಗೆ ರಕ್ಷಣೆ ನೀಡಬೇಕು ಹಾಗೂ ಮಗಳನ್ನು ಹುಡುಕಿ ಕೊಡಬೇಕೆಂದು ಯುವತಿಯ ತಂದೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.