ರೆಸಾರ್ಟ್ ನಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಅತೃಪ್ತರ ಗೌಪ್ಯಸಭೆ: ಸಚಿವರಿಂದ ಸ್ಪಷ್ಟನೆ
Team Udayavani, Jan 23, 2021, 3:31 PM IST
ಚಿಕ್ಕಮಗಳೂರು : ಚಿಕ್ಕಮಗಳೂರು ಹೊರವಲಯದ ಸರಾಯ್ ರೆಸಾರ್ಟ್ ನಲ್ಲಿ ಅತೃಪ್ತ ಸಚಿವರು ಹಾಗೂ ಶಾಸಕರ ಗೌಪ್ಯ ಸಭೆಯೊಂದು ನಡೆದಿದ್ದು, ಇದರಿಂದ ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಆರಂಭವಾಗುತ್ತಾ ಎಂಬಂತಾಗಿದೆ.
ಶುಕ್ರವಾರ ರಾತ್ರಿ ಚಿಕ್ಕಮಗಳೂರಿನ ಹೊರವಲಯದಲ್ಲಿರುವ ಸರಾಯ್ ರೆಸಾರ್ಟ್ ನಲ್ಲಿ ರಮೇಶ್ ಜಾರಕಿಹೊಳಿ, ಸಿ.ಪಿ ಯೋಗೇಶ್ವರ್, ಗೋಪಾಲಯ್ಯ, ಶಾಸಕರಾದ ಎಂಪಿ ಕುಮಾರಸ್ವಾಮಿ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದು.
ಬಿಜೆಪಿ ಸರ್ಕಾರ ರಚನೆಗೆ ಕಾರಣವಾಗಿದ್ದ ಸಚಿವ ರಮೇಶ್ ಜಾರಕಿಹೊಳಿಯಿಂದಲೇ ನಡೆದಿದೆಯಾ ಸರ್ಕಾರ ಕೆಡವಲು ಪ್ರಯತ್ನ.? ಎಂಬ ಅನುಮಾನವೂ ಹುಟ್ಟಿಕೊಂಡಿದೆ.
ಈ ಕುರಿತು ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿ, ಯಾವುದೇ ರಾಜಕೀಯ ಸಭೆಯಲ್ಲ, ಈ ಹಿಂದೆ ಎತ್ತಿನಹೊಳೆ ಯೋಜನೆ ಕುರಿತು ನಡೆಸಲಾದ ಸಭೆ ಅದರ ಮುಂದುವರಿದ ಭಾಗವಾಗಿ ಖಾಸಗಿ ರೆಸಾರ್ಟ್ ನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಯಿತು ಎಂದ ಅವರು ಸ್ಥಳೀಯ ಮಟ್ಟದ ಅಧಿಕಾರಿಗಳಿಗೆ ಈ ಕುರಿತು ಮಾಹಿತಿ ಕೊಟ್ಟಿಲ್ಲ ನನ್ನ ಇಲಾಖೆಯ ಅಧಿಕಾರಿಗಳೋಂದಿಗೆ ಸಭೆ ನಡೆಸಲಾಯಿತು ಎಂದು ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ:ನೂತನ ವಿಮಾನ ಖರೀದಿಸ್ತೀರಿ, ನೇತಾಜಿ ಸ್ಮಾರಕ ಯಾಕೆ ನಿರ್ಮಿಸಿಲ್ಲ: ಕೇಂದ್ರಕ್ಕೆ ಮಮತಾ
ಮಾಜಿ ಮುಖ್ಯಮಂತ್ರಿ ಎಸ್.ಎಮ್ ಕೃಷ್ಣ ಅವರ ರಾಜಕೀಯ ಗುರುಗಳ ಮಾಲೀಕತ್ವದಲ್ಲಿ ಇರುವ ರೆಸಾರ್ಟ್ ನಲ್ಲಿ ಸಭೆ ನಡೆಸಲಾಯಿತು ಈ ಕುರಿತು ಮಾಧ್ಯಮದವರು ಗೊಂದಲ ಸೃಷ್ಟಿಸಬೇಡಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್