ನನ್ನ ಜೀವನದಲ್ಲಿ ಬಂದಿದ್ದಕ್ಕಾಗಿ ಧನ್ಯವಾದಗಳು.. ದೇವರಕೊಂಡಗೆ ರಶ್ಮಿಕಾ ಸ್ವೀಟ್ ಮೆಸೇಜ್?
Team Udayavani, Dec 19, 2023, 3:35 PM IST
ಹೈದರಾಬಾದ್: ರಶ್ಮಿಕಾ ಮಂದಣ್ಣ – ವಿಜಯಯ್ ದೇವರಕೊಂಡ ನಡುವೆ ಏನೋ ನಡೆಯುತ್ತಿದೆ ಎನ್ನುವ ಸುದ್ದಿ ಅಂದರೆ ಇಬ್ಬರು ರಿಲೇಷನ್ ನಲ್ಲಿದ್ದಾರೆ ಎನ್ನುವುದು ಕಳೆದ ಕೆಲ ವರ್ಷಗಳಿಂದ ಸಿನಿವಲಯದಲ್ಲಿ ಹರಿದಾಡುತ್ತಿರುವ ಟಾಪಿಕ್.
ʼಗೀತಾ ಗೋವಿಂದಂʼ ʼಡಿಯರ್ ಕಾಮ್ರೇಡ್ʼ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ ಬಳಿಕ ರಶ್ಮಿಕಾ – ದೇವರಕೊಂಡ ಬೆಸ್ಟ್ ಫ್ರೆಂಡ್ಸ್ ಆಗಿದ್ದಾರೆ. ಜೊತೆಯಾಗಿ ಸುತ್ತಾಟ, ಪಾರ್ಟಿಗಳಲ್ಲಿ ಹಲವು ಬಾರಿ ಇಬ್ಬರು ಕಾಣಿಸಿಕೊಂಡಿದ್ದಾರೆ. ಇಬ್ಬರ ನಡುವಿನ ಡೇಟಿಂಗ್ ವಿಚಾರ ಸದ್ದು ಮಾಡಿದ್ದರೂ, ತಾವಿಬ್ಬರು ಜಸ್ಟ್ ಫ್ರೆಂಡ್ಸ್ ಎಂದು ಹೇಳಿ ವದಂತಿಗಳಿಗೆ ತೆರೆ ಎಳೆದಿದ್ದಾರೆ.
ಇದಲ್ಲದೇ ಇತ್ತೀಚೆಗೆ ʼಅನಿಮಲ್ʼ ಸಿನಿಮಾದ ಪ್ರಚಾರದ ವೇಳೆ ಬಾಲಯ್ಯ ಅವರ ಕಾರ್ಯಕ್ರಮದಲ್ಲಿ ವಿಜಯ್ ದೇವರಕೊಂಡ ಅವರಿಗೆ ಕರೆ ಮಾಡಿದಾಗ ರಶ್ಮಿಕಾ ನಾಚಿ ನೀರಾಗಿದ್ದರು. ಇದೀಗ ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡ ಅವರಿಗೆ ಮಾಡಲಾದ ಮೆಸೇಜ್ ಎಂದು ಹೇಳಲಾಗುತ್ತಿರುವ ವಿಚಾರವೊಂದು ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.
ಇತ್ತೀಚೆಗೆ ರಶ್ಮಿಕಾ ಅವರು ಇಂಗ್ಲೀಷ್ ನಲ್ಲಿ ಬರೆಯಲಾದ ಫೋಟೋ ಸ್ಟೋರಿಯೊಂದು ಹಾಕಿದ್ದರು. “ನಾನು ನಿಮಗೆ ಒಂದು ವಿಷಯ ಹೇಳಲು ಬಯಸುತ್ತೇನೆ, ನನ್ನ ಜೀವನದಲ್ಲಿ ಬಂದಿದ್ದಕ್ಕಾಗಿ ಧನ್ಯವಾದಗಳು.” ಎಂದು ಹೃದಯದ ಇಮೋಜಿ ಹಾಕಿದ್ದರು.
ಇದು ರಶ್ಮಿಕಾ ಅವರು ದೇವರಕೊಂಡ ಅವರಿಗಾಗಿ ಮಾಡಿದ ಮೆಸೇಜ್ ಎಂದು ಹೇಳಲಾಗುತ್ತಿದೆ. ರಶ್ಮಿಕಾ ಅವರು ತನ್ನನ್ನು ಅರ್ಥ ಮಾಡಿಕೊಂಡ ದೇವರಕೊಂಡ ಅವರಿಗೆ ಥ್ಯಾಂಕ್ಯೂ ಹೇಳಿದ್ದಾರೆ. ಅದಕ್ಕಾಗಿ ಈ ರೀತಿ ಸ್ಟೋರಿಯ ಮೂಲಕ ಪೋಸ್ಟ್ ಮಾಡಿದ್ದಾರೆ ಎಂದು ಫ್ಯಾನ್ಸ್ ಗಳು ಮಾತನಾಡಿಕೊಳ್ಳುತ್ತಿದ್ದಾರೆ.
ಸದ್ಯ ʼಅನಿಮಲ್ʼ ಗೆಲುವಿನ ಖುಷಿಯಲ್ಲಿರುವ ರಶ್ಮಿಕಾ ʼರೈನ್ ಬೋ ʼಹಾಗೂ ʼದಿ ಗರ್ಲ್ ಫ್ರೆಂಡ್ʼ ಎನ್ನುವ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದೇವರಕೊಂಡ ಇತ್ತೀಚೆಗೆ ʼಖುಷಿʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ‘ಫ್ಯಾಮಿಲಿ ಸ್ಟಾರ್ʼ ಸಿನಿಮಾದಲ್ಲಿ ಮುಂದೆ ಕಾಣಿಸಿಕೊಳ್ಳಲಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ