ಸಮತೋಲನ ಕಾಯ್ದುಕೊಳ್ಳಲು ಆರ್‌ಬಿಐ ಪ್ರಯತ್ನ


Team Udayavani, Feb 8, 2021, 6:45 AM IST

Udayavani Kannada Newspaper

ಸಂಕಷ್ಟದಿಂದ ಹೊರಬರುತ್ತಿರುವ ಆರ್ಥಿಕತೆಗೆ ವೇಗ ನೀಡುವ ನಿಟ್ಟಿನಲ್ಲಿ ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ ರೆಪೋ ದರ ಮತ್ತು ರಿವರ್ಸ್‌ ರೆಪೋ ದರಗಳಲ್ಲಿ ಯಾವುದೇ ಬದಲಾವಣೆ ಮಾಡದಿ ರುವ ತೀರ್ಮಾನವನ್ನು ಕೈಗೊಂಡಿದೆ. ಇದರಿಂದಾಗಿ ಭಿನ್ನ ರೀತಿಯ ಸಾಲಗಳ ಮೇಲಿನ ಬಡ್ಡಿದರ ಕಡಿಮೆಯಾಗುವ ಸಾಧ್ಯತೆ ಸದ್ಯಕ್ಕಂತೂ ಕಾಣಿಸುತ್ತಿಲ್ಲ. ಅಲ್ಲದೆ ಇದರಿಂದಾಗಿ ನಿಶ್ಚಿತ ಠೇವಣಿಗಳ ಮೇಲೆ ಬ್ಯಾಂಕ್‌ಗಳು ನೀಡುತ್ತಿರುವ ಬಡ್ಡಿದರವೂ ಇಳಿಕೆಯಾಗುವ ಸಾಧ್ಯತೆ ತಗ್ಗಿದೆ. ಆರ್‌ಬಿಐ ರೆಪೋ ದರವನ್ನು 4 ಪ್ರತಿಶತ ಹಾಗೂ ರಿವರ್ಸ್‌ ರೆಪೋ ದರವನ್ನು 3.35 ಪ್ರತಿಶತದವರೆಗೆ ನಿಗದಿ ಗೊಳಿಸಿದೆ. ಇದರಿಂದ ಸ್ಪಷ್ಟವಾಗುವ ಅಂಶವೆಂದರೆ, ಕೇಂದ್ರೀಯ ಬ್ಯಾಂಕ್‌ ಸದ್ಯಕ್ಕೆ ಯಾವ ಅಪಾಯವನ್ನೂ ಮೈಮೇಲೆ ಎಳೆದು ಕೊಳ್ಳುವಂಥ ಹೆಜ್ಜೆಗಳನ್ನು ಇಡುತ್ತಿಲ್ಲ ಎನ್ನುವುದು. ಪಾಲಿಸಿ ದರಗಳಲ್ಲಿ ಯಾವುದೇ ರೀತಿಯ ಬದಲಾವಣೆ ಆಗದಿರುವ ಕಾರಣ ವಾಣಿಜ್ಯ ಬ್ಯಾಂಕ್‌ಗಳು ಸಹ ಸದ್ಯಕ್ಕೆ ಸಾಲದ ಮೇಲಿನ ಬಡ್ಡಿದರವನ್ನು ತಗ್ಗಿಸುವುದಿಲ್ಲ. ಇದರ ಹೊರತಾಗಿಯೂ ರಿಸರ್ವ್‌ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯು, ಒಂದು ವೇಳೆ ಅಗತ್ಯ ಎದುರಾದರೆ ರೆಪೋ ಮತ್ತು ರಿವರ್ಸ್‌ ರೆಪೋ ದರಗಳನ್ನು ಕೆಳಕ್ಕೆ ಇಳಿಸಲೂಬಹುದು ಎನ್ನುವ ಸಂಕೇತವನ್ನಂತೂ ನೀಡಿದೆ.

ಅರ್ಥವ್ಯವಸ್ಥೆಯಲ್ಲಿ ವೇಗ ತರುವುದಕ್ಕಾಗಿ ಸರಕಾರ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳು, ಅನುದಾನಗಳನ್ನು ಈಡೇರಿಸಲು ಬಹಳ ಹಣದ ಅಗತ್ಯ ಎದುರಾಗಲಿದೆ. ಸರಕಾರಕ್ಕೆ ಸಾಲ ಪಡೆಯದೆ ಇವುಗಳನ್ನು ಈಡೇರಿಸುವುದು ಕಷ್ಟವಾಗಲಿದೆ. ಈ ಕಾರಣಕ್ಕಾಗಿಯೇ ಮಾರುಕಟ್ಟೆಯಲ್ಲಿ ಲಿಕ್ವಿಡಿಟಿಯನ್ನು ತರುವುದು ಆರ್‌ಬಿಐಗೆ ಅತ್ಯಗತ್ಯವಾಗಿದೆ. ಮುಂದಿನ ವಿತ್ತ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆಯು 10.5 ಪ್ರತಿಶತದವರೆಗೂ ಏರಬಹುದು ಎಂಬ ಭರವಸೆಯಲ್ಲಿದೆ ಆರ್‌ಬಿಐ. ಇದರಿಂದ ಸ್ಪಷ್ಟವಾಗುವುದೇನೆಂದರೆ ಈಗ ಮಾರುಕಟ್ಟೆಯಲ್ಲಿ ಮತ್ತೆ ಬೇಡಿಕೆ ಅಧಿಕವಾಗಿದೆ. ಆದರೆ ಬೇಡಿಕೆ, ಬಳಕೆ ಮತ್ತು ಉತ್ಪಾದನೆಯ ಚಕ್ರ ಸರಿಯಾಗಿ ತಿರುಗಲು ಇನ್ನೂ ಬಹಳ ಸಮಯವೇ ಹಿಡಿಯಲಿದೆ ಎನ್ನುವುದೂ ಸ್ಪಷ್ಟ.

ಇನ್ನು ಆರ್‌ಬಿಐ ಮುಂದಿರುವ ಅನೇಕ ಸವಾಲುಗಳಲ್ಲಿ ಬ್ಯಾಂಕಿಂಗ್‌ ಕ್ಷೇತ್ರವನ್ನು ಬಲಿಷ್ಠಗೊಳಿಸುವುದೂ ಒಂದು. ಈಗಲೂ ದೇಶದ ಅನೇಕ ಬ್ಯಾಂಕ್‌ಗಳು ಅನುತ್ಪಾದಕ ಆಸ್ತಿಯ ಸಮಸ್ಯೆ ಯಿಂದ ಬಳಲುತ್ತಿವೆ. ಈ ಸಮಸ್ಯೆಯನ್ನು ನಿಭಾಯಿಸುವು ದಕ್ಕಾಗಿಯೇ ಸರಕಾರ ಬಜೆಟ್‌ನಲ್ಲಿ ಬ್ಯಾಡ್‌ ಬ್ಯಾಂಕ್‌ ಸ್ಥಾಪನೆಯ ಪ್ರಸ್ತಾವನೆಯನ್ನೂ ಇಟ್ಟಿದೆ. ಒಂದು ವೇಳೆ ಈ ಪ್ರಯತ್ನದಿಂದಾಗಿ ಬ್ಯಾಂಕ್‌ಗಳು ಎನ್‌ಪಿಎ ಸಮಸ್ಯೆಯಿಂದ ಹೊರಬರಲು ಯಶಸ್ವಿ ಯಾದರೆ ಅದರಿಂದ ಬಹಳ ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ಹಣದುಬ್ಬರದಲ್ಲೂ ಇಳಿಕೆ ಆಗುವ ಸಾಧ್ಯತೆಯ ಬಗ್ಗೆಯೂ ಆರ್‌ಬಿಐ ಹೇಳುತ್ತಿದೆ. ಆದರೆ ಇವೆಲ್ಲವೂ ಉತ್ಪಾದನೆ ಮತ್ತು ಪೂರೈಕೆಯ ಸ್ಥಿತಿ ಹೇಗಿರುತ್ತದೆ ಎನ್ನುವುದರ ಮೇಲೆ ಅವಲಂಬಿತವಾಗಿದೆ. ಅರ್ಥವ್ಯವಸ್ಥೆಯು ಎಲ್ಲಾ ಕೋನಗಳಿಂದಲೂ ಸವಾಲುಗಳನ್ನು ಎದುರಿಸುತ್ತಾ ಸಾಗುತ್ತಿದೆ ಎನ್ನುವುದರಲ್ಲಿ ಸಂದೇಹವಿಲ್ಲ. ಹೀಗಾಗಿಯೇ ಕೇಂದ್ರೀಯ ಬ್ಯಾಂಕ್‌ನ ಈಗಿನ ಸಂತುಲಿತ ನಡೆ ನಿರೀಕ್ಷಿತವೇ ಆಗಿತ್ತು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.