ಇತಿಹಾಸ ಓದಿಕೊಳ್ಳಿ : ಸಚಿವ ಕೋಟ ಟ್ವೀಟ್ ಗೆ ದಿನೇಶ್ ಗುಂಡೂರಾವ್ ತಿರುಗೇಟು
ರಾಷ್ಟ್ರದ ಮೊದಲ ಕೊಡುಗೆಗಳೆಲ್ಲ ಕಾಂಗ್ರೆಸ್ ನದ್ದೇ...!
Team Udayavani, Jun 23, 2022, 4:37 PM IST
ಬೆಂಗಳೂರು: ಆದಿವಾಸಿ ಮಹಿಳೆಯನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ ಕುರಿತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಟ್ವೀಟ್ ಗೆ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.
ವಾಟ್ಸ್ಅಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿಗಳಾದ ಬಿಜೆಪಿಯವರ ಜ್ಞಾನದ ಮಟ್ಟವಿದು.ಕೋಟ ಶ್ರೀನಿವಾಸ್ ಪೂಜಾರಿ ಸಚಿವರಾಗಿದ್ದುಕೊಂಡು ವಾಟ್ಸ್ಅಪ್ನಲ್ಲಿ ಬಂದಿದನ್ನು ಯಥಾವತ್ತಾಗಿ ಪೋಸ್ಟ್ ಮಾಡುತ್ತಾರೆಂದರೆ ಅವರ ಬುದ್ದಿಗೆ ಎಷ್ಟು ಮಂಕು ಕವಿದಿರಬಹುದು? ಪೂಜಾರಿಯವರೆ ವಾಟ್ಸ್ಅಪ್ನಲ್ಲಿ ಬಂದಿರುವುದನ್ನು ಪೋಸ್ಟ್ ಮಾಡುವ ಮುನ್ನ ಇತಿಹಾಸ ಓದಿಕೊಳ್ಳಿ. ಎಂದು ಬರೆದು ರಾಷ್ಟ್ರದ ಮೊದಲ ಮುಸ್ಲಿಂ ರಾಷ್ಟ್ರಪತಿ ಕಾಂಗ್ರೆಸ್ನ ಕೊಡುಗೆ!, ರಾಷ್ಟ್ರದ ಮೊದಲ ಸಿಖ್ ರಾಷ್ಟ್ರಪತಿ ಕಾಂಗ್ರೆಸ್ನ ಕೊಡುಗೆ!, ರಾಷ್ಟ್ರದ ಮೊದಲ ದಲಿತ ರಾಷ್ಟ್ರಪತಿ ಕಾಂಗ್ರೆಸ್ನ ಕೊಡುಗೆ!, ಅಷ್ಟೆ ಏಕೆ, ಮೊದಲ ಮಹಿಳಾ ರಾಷ್ಟ್ರಪತಿಯ ಕೊಡುಗೆಯೂ ಕಾಂಗ್ರೆಸ್ನದ್ದೆ!, ಆದರೆ ಕಾಂಗ್ರೆಸ್ ಯಾವತ್ತೂ ಇದನ್ನು ಪ್ರಚಾರಕ್ಕೆ ಬಳಸಲಿಲ್ಲ. ಇದೇ ವ್ಯತ್ಯಾಸ.ಎಂದು ಇನ್ನೊಂದು ಟ್ವೀಟ್ ನಲ್ಲಿ ಬರೆದಿದ್ದಾರೆ.
ಸಚಿವ ಕೋಟ ಅವರು ಮುಸ್ಲಿಂ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದು ನಾವೇ,ದಲಿತ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದೂ ನಾವೇ, ಇಂದು ಮಹಿಳೆ ಅದೂ ಆದಿವಾಸಿ ಬುಡಕಟ್ಟು ಜನಾಂಗದ ಮಹಿಳೆಯನ್ನು ರಾಷ್ಟ್ರಪತಿ ಮಾಡುವುದು ನಾವೇ…ಏಕೆಂದರೆ ನಾವು ಜಾತಿವಾದಿಗಳಲ್ಲಾ-ರಾಷ್ಟ್ರವಾದಿಗಳು. (ವಾಟ್ಸಪ್ನಲ್ಲಿ ಬಂದಿದ್ದು) ಎಂದು ಟ್ವೀಟ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…