48ಗಂಟೆಯೊಳಗೆ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಲು ಸಿದ್ಧ: ಸುಪ್ರೀಂಗೆ ಪರಂಬೀರ್
ಶೀಘ್ರವೇ ಹಾಜರಾಗಿ ಸಹಕಾರ ನೀಡುವಂತೆ ಸಿಂಗ್ ಗೆ ನಿರ್ದೇಶನ ನೀಡಿದೆ.
Team Udayavani, Nov 22, 2021, 5:09 PM IST
ನವದೆಹಲಿ: ಭ್ರಷ್ಟಾಚಾರ ಆರೋಪ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮುಂದಿನ 48ಗಂಟೆಗಳೊಳಗೆ ಸಿಬಿಐ ಮುಂದೆ ಹಾಜರಾಗಲು ಸಿದ್ಧ ಎಂದು ಮುಂಬಯಿ ಮಾಜಿ ಪೊಲೀಸ್ ಕಮಿಷನರ್ ಪರಂ ಬೀರ್ ಸಿಂಗ್ ಸೋಮವಾರ (ನವೆಂಬರ್ 22) ಸುಪ್ರೀಂಕೋರ್ಟ್ ಗೆ ತಿಳಿಸಿದ್ದಾರೆ.
ಇದನ್ನೂ ಓದಿ:ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ; ಹೂಡಿಕೆದಾರರಿಗೆ ನಷ್ಟ
ಮುಂಬಯಿ ಪೊಲೀಸ್ ಕಮಿಷನರ್ ಆಗಿದ್ದ ಸಂದರ್ಭದಲ್ಲಿ ಪರಂಬೀರ್ ಸಿಂಗ್ ಕೋಟ್ಯಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ ಮಹಾರಾಷ್ಟ್ರದ ಮಾಜಿ ಗೃಹ ಮಂತ್ರಿ ಅನಿಲ್ ದೇಶ್ ಮುಖ್ ಆರೋಪಿಸಿದ್ದರು.
ವಿಚಾರಣೆ ವೇಳೆ ಪರಂಬೀರ್ ಸಿಂಗ್ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಸುಪ್ರೀಂಕೋರ್ಟ್ ತಕ್ಷಣವೇ ಬಂಧಿಸದಂತೆ ಮಧ್ಯಂತರ ರಕ್ಷಣೆಯನ್ನು ನೀಡಿದೆ. ಅಲ್ಲದೇ ಸಿಬಿಐ ತನಿಖೆಗೆ ಶೀಘ್ರವೇ ಹಾಜರಾಗಿ ಸಹಕಾರ ನೀಡುವಂತೆ ಸಿಂಗ್ ಗೆ ನಿರ್ದೇಶನ ನೀಡಿದೆ.
ಮುಂಬಯಿ ಪೊಲೀಸರಿಂದ ತನ್ನ ಕಕ್ಷಿದಾರನ ಜೀವಕ್ಕೆ ಗಂಭೀರವಾದ ಬೆದರಿಕೆ ಇದೆ ಎಂದು ಸಿಂಗ್ ಪರ ವಕೀಲರು ಸುಪ್ರೀಂಕೋರ್ಟ್ ಗೆ ತಿಳಿಸಿದ್ದರು. ಪರಂಬೀರ್ ಸಿಂಗ್ ಭಾರತದಲ್ಲಿಯೇ ಇದ್ದು, ಅವರು ನಾಪತ್ತೆಯಾಗಿಲ್ಲ ಎಂದು ಮಾಹಿತಿ ನೀಡಿದ್ದರು.
ಪರಂಬೀರ್ ಸಿಂಗ್ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಮಹಾರಾಷ್ಟ್ರ ಸರಕಾರ. ಡಿಜಿಪಿ ಹಾಗೂ ಸಿಬಿಐಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ