ರೆಬೆಲ್ ಸ್ಟಾರ್ 3 ನೇ ವರ್ಷದ ಪುಣ್ಯಸ್ಮರಣೆ : ಮತ್ತೆ ಮತ್ತೆ ನೆನಪಾಗುವ ಅಂಬರೀಶ್
Team Udayavani, Nov 24, 2021, 1:02 PM IST
ಬೆಂಗಳೂರು: ಕನ್ನಡದ ಖ್ಯಾತ ನಟ, ರಾಜಕಾರಣಿ, ಮಂಡ್ಯದ ಗಂಡು ಖ್ಯಾತಿಯ ರೆಬೆಲ್ ಸ್ಟಾರ್ ಅಂಬರೀಶ್ ಅವರು ನಮ್ಮನ್ನಗಲಿ ಇಂದಿಗೆ ಮೂರು ವರ್ಷ. ಅವರ ಅಭಿಮಾನಿಗಳು ನೆಚ್ಚಿನ ನಟನನ್ನು ಸ್ಮರಿಸಿಕೊಳ್ಳುತ್ತಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿ ಇಂದು ಬುಧವಾರ ನಡೆದ ಅಂಬರೀಶ್ ಅವರ 3 ನೇ ವರ್ಷದ ಪುಣ್ಯಸ್ಮರಣಾ ಕಾರ್ಯಕ್ರಮದಲ್ಲಿ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಅಂಬರೀಶ್ ಅವರ ಪತ್ನಿ ಸಂಸದೆ ಸುಮಲತಾ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಅಭಿಮಾನಿಗಳು ಉಪಸ್ಥಿತರಿದ್ದರು.
ಅಪ್ಪಾಜಿ ನೆನಪಿಸಿಕೊಂಡ ದರ್ಶನ್
ಅಪ್ಪಾಜಿಯವರ ಆ ಕಾಳಜಿಯುಳ್ಳ ಹೃದಯ ಮತ್ತು ಆಕರ್ಷಕ ನಗುವನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ವಿಶೇಷ ಮಾರ್ಗದರ್ಶಕರಾಗಿ, ಅವರು ಯಾವಾಗಲೂ ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ಇದ್ದರು. ಈ ಪುಣ್ಯತಿಥಿಯಂದು ನಾವೆಲ್ಲರೂ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ಅಪ್ಪಾಜಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಎಂದು ಚಾಲೇಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್ ಮಾಡಿದ್ದಾರೆ.