ಖಾಸಗಿ ವಲಯದ ತಜ್ಞರ ನೇಮಕ: ಸರಕಾರ ನಿಗಾ ಇರಿಸಲಿ


Team Udayavani, May 17, 2023, 5:50 AM IST

PRIVATE SECTOR

ಕೇಂದ್ರ ಸರಕಾರ ತನ್ನ ವಿವಿಧ ಖಾತೆ/ಇಲಾಖೆಗಳಲ್ಲಿ ಖಾಸಗಿ ಕ್ಷೇತ್ರದಲ್ಲಿನ ತಜ್ಞರನ್ನು ಜಂಟಿ ಕಾರ್ಯದರ್ಶಿ, ನಿರ್ದೇಶಕರು ಮತ್ತು ಉಪ ಕಾರ್ಯದರ್ಶಿ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿ ಕೊಳ್ಳುವ ಮಹತ್ವದ ನಿರ್ಧಾರ ಕೈಗೊಂಡಿದೆ. 5 ವರ್ಷಗಳ ಹಿಂದೆಯೇ ಸರಕಾರ ಇಂತಹ ಉಪಕ್ರಮ ಕೈಗೊಂಡು ಹಂತಹಂತವಾಗಿ ಮುಂದು ವರಿಸುತ್ತ ಬಂದಿದ್ದು ಈ ಬಾರಿ ಅದರ ವ್ಯಾಪ್ತಿಯನ್ನು 12 ಖಾತೆ/ಇಲಾಖೆಗಳಿಗೆ ವಿಸ್ತರಿಸುವ ನಿರ್ಧಾರ ಕೈಗೊಂಡಿದೆ.

ಆಡಳಿತದಲ್ಲಿ ಸುಧಾರಣೆ ತರಲು ಮತ್ತು ಹೊಸಚಿಂತನೆಗಳ ಅನುಷ್ಠಾನದ ದೃಷ್ಟಿಯಿಂದ ಸರಕಾರ ಈ ಹೆಜ್ಜೆ ಇರಿಸಿದೆ. 2018ರ ಜೂನ್‌ನಲ್ಲಿ ಮೊದಲ ಬಾರಿಗೆ ಇದೇ ಮಾದರಿಯಲ್ಲಿ ಜಂಟಿ ಕಾರ್ಯದರ್ಶಿಗಳ ನೇಮಕಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿತ್ತು. ಕೇಂದ್ರ ಲೋಕಸೇವಾ ಆಯೋಗದ ಮೂಲಕ ಈ ನೇಮಕಗಳನ್ನು ಮಾಡಿಕೊಳ್ಳಲಾಗಿತ್ತು. ಕೇಂದ್ರದ ಈ ಪ್ರಯೋಗ ಭಾಗಶಃ ಯಶಸ್ಸು ಕಂಡಿದ್ದರಿಂದಾಗಿ 2021ರ ಅಕ್ಟೋಬರ್‌ನಲ್ಲಿ ಮೂರು ಜಂಟಿ ಕಾರ್ಯದರ್ಶಿಗಳು, 19 ನಿರ್ದೇಶಕರು ಮತ್ತು 9 ಮಂದಿ ಉಪ ಕಾರ್ಯದರ್ಶಿಗಳ ಸಹಿತ ಒಟ್ಟು 31 ಅಭ್ಯರ್ಥಿ ಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡಿತ್ತು. ಈಗ ಮೂರನೇ ಬಾರಿಗೆ ಕೇಂದ್ರ ಸರಕಾರ ಇದೇ ಮಾದರಿಯಲ್ಲಿ ಖಾಸಗಿ ಕ್ಷೇತ್ರದ ತಜ್ಞರನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದ್ದು ಮೇ 20ರಿಂದ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿಕೊಟ್ಟಿದೆ. ಈ ಸಂಬಂಧ ಕೇಂದ್ರದ ಸಿಬಂದಿ ಮತ್ತು ತರಬೇತಿ ಇಲಾಖೆಯು ಯುಪಿಎಸ್‌ಸಿಗೆ ಸೂಚನೆಯನ್ನು ನೀಡಿದೆ. ಯುಪಿಎಸ್‌ಸಿ ತನ್ನ ನಿಯಮಾ ವಳಿಗಳಿಗನುಸಾರವಾಗಿಯೇ ಈ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ.

ಆಡಳಿತಾತ್ಮಕವಾಗಿ ತನ್ನ ಇಲಾಖೆಗಳಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಈ ತೀರ್ಮಾನ ದಿಟ್ಟ ಹೆಜ್ಜೆಯೇ ಸರಿ. ಈ ಹಿಂದಿನಿಂದಲೂ ಸರಕಾರ ಈ ಮಹತ್ವದ ಹುದ್ದೆಗಳಿಗೆ ತನ್ನ ಅಧಿಕಾರಿ ವಲಯದಿಂದಲೇ ನೇಮಕ ಮಾಡಿಕೊಳ್ಳುತ್ತ ಬಂದಿದೆ. ಅಧಿಕಾರಿಗಳು ಸೇವಾ ಹಿರಿತನದ ಆಧಾರದಲ್ಲಿ ಭಡ್ತಿಯ ಮೂಲಕ ಈ ಹುದ್ದೆಗಳಿಗೆ ಏರುವುದು ಈವರೆಗೆ ನಡೆದುಕೊಂಡು ಬಂದಿರುವ ಪದ್ಧತಿ. ಜಡ್ಡುಗಟ್ಟಿದ ಆಡಳಿತ ವ್ಯವಸ್ಥೆಗೆ ಒಂದಿಷ್ಟು ಸಾಣೆ ಹಿಡಿಯುವ ಮತ್ತು ಪರಿಣತರ ಮೂಲಕವೇ ಖಾಸಗಿ ವಲಯಕ್ಕೆ ಸಡ್ಡು ಹೊಡೆಯುವ ಇರಾದೆ ಸರಕಾರದ್ದಾಗಿದೆ. ಆದರೆ ಸರಕಾರ ಕಳೆದ ಐದು ವರ್ಷಗಳ ಹಿಂದೆ ಕೆಲವೊಂದು ಇಲಾಖೆಗಳಿಗೆ ಪ್ರಾಯೋಗಿಕ ನೆಲೆಯಲ್ಲಿ ಖಾಸಗಿ ವಲ ಯದ ವಿಷಯತಜ್ಞರನ್ನು ಜಂಟಿ ಕಾರ್ಯದರ್ಶಿ ದರ್ಜೆಯ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವ ಮೂಲಕ ಅವರ ಅನುಭವ ಮತ್ತು ವಿಷಯ ಜ್ಞಾನವನ್ನು ಬಳಸಿಕೊಳ್ಳುವ ಪ್ರಯತ್ನ ನಡೆಸಿತ್ತು. ಸರಕಾರದ ಈ ತೀರ್ಮಾನ ಯಶಸ್ವಿಯಾಗಿದ್ದರಿಂದ ಈಗ ಅದನ್ನು ವಿವಿಧ ಇಲಾಖೆಗಳ ಮತ್ತಷ್ಟು ಹುದ್ದೆಗಳಿಗೆ ಪರಿಚಯಿಸಲು ಮುಂದಾಗಿದೆ.

ಈ ಬಾರಿ ಕಾನೂನು, ಔಷಧ, ರಾಸಾಯನಿಕ, ವಾಣಿಜ್ಯ ಮತ್ತು ಕೈಗಾರಿ ಕೆಯಂತಹ ಮಹತ್ವದ ಇಲಾಖೆಗಳಲ್ಲೂ ಖಾಸಗಿ ಕ್ಷೇತ್ರದ ತಜ್ಞರನ್ನು ಇಂತಹ ಉನ್ನತ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿರುವುದರಿಂದ ಈ ಇಲಾಖೆಗಳಲ್ಲಿನ ಕೆಲವೊಂದು ರಹಸ್ಯ ಮಾಹಿತಿಗಳು ಸೋರಿಕೆಯಾಗದಂತೆ ಈ ಅಧಿಕಾರಿಗಳ ಮೇಲೆ ನಿಗಾ ಇಡುವುದು ಅವಶ್ಯವಾಗಿದೆ. ಅಷ್ಟು ಮಾತ್ರವಲ್ಲದೆ ಗುತ್ತಿಗೆ ಆಧಾರದಲ್ಲಿ ಈ ನೇಮಕಾತಿ ನಡೆಯುವುದರಿಂದ ಇವರ ಅಧಿಕಾರಾವಧಿ ಮುಗಿದ ಬಳಿಕ ಖಾಸಗಿ ವಲಯ ಇವರ ಸೇವೆಯನ್ನು ಬಳಸಿಕೊಳ್ಳಲು ಮುಂದಾದಲ್ಲಿ ಅದು ಕೂಡ ಆಡಳಿತದ ಮೇಲೆ ಪರೋಕ್ಷ ಪರಿಣಾಮ ಬೀರುವ ಸಾಧ್ಯತೆ ಇದೆ. ಇವೆಲ್ಲದರ ಮೇಲೆ ಸರಕಾರ ಕಟ್ಟುನಿಟ್ಟಿನ ನಿಗಾ ಇರಿಸಬೇಕು.

 

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.