ಕೆಂಪು ಟೊಪ್ಪಿ ಸರ್ಕಾರ ರಚಿಸಲು ಬಯಸುತ್ತಿರುವುದು ಯಾಕೆ ಗೊತ್ತಾ?ಸಮಾಜವಾದಿ ಪಕ್ಷಕ್ಕೆ ಪ್ರಧಾನಿ
ರಸಗೊಬ್ಬರ ಕಾರ್ಖಾನೆಯಂತಹ ಮೆಗಾ ಪ್ರಾಜೆಕ್ಟ್ ಮಾಡಲು ಬದ್ದರಾಗಿರುವುದಾಗಿ ಹೇಳಿದರು.
Team Udayavani, Dec 7, 2021, 3:39 PM IST
ಲಕ್ನೋ: ಭಯೋತ್ಪಾದಕರಿಗೆ ಸಹಾನೂಭೂತಿ ತೋರಿಸಿ, ಅವರನ್ನು ಜೈಲಿನಿಂದ ಹೊರ ತರುವ ನಿಟ್ಟಿನಲ್ಲಿ ಕೆಂಪು ಟೊಪ್ಪಿ(ಸಮಾಜವಾದಿ ಪಕ್ಷ) ಉತ್ತರಪ್ರದೇಶದಲ್ಲಿ ಸರ್ಕಾರ ರಚಿಸಲು ಬಯಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ಡಿಸೆಂಬರ್ 07) ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!
ಉತ್ತರಪ್ರದೇಶದ ಗೋರಖ್ ಪುರ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಜನರಿಗೋಸ್ಕರ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಮಾಡಲು ಬದ್ಧರಾಗಿದ್ದೇವೆ. ಆ ನಿಟ್ಟಿನಲ್ಲಿ 9,600 ಕೋಟಿ ರೂಪಾಯಿ ವೆಚ್ಚದಲ್ಲಿ ಏಮ್ಸ್ ಮತ್ತು ಪ್ರಮುಖ ರಸಗೊಬ್ಬರ ಕಾರ್ಖಾನೆಯಂತಹ ಮೆಗಾ ಪ್ರಾಜೆಕ್ಟ್ ಮಾಡಲು ಬದ್ದರಾಗಿರುವುದಾಗಿ ಹೇಳಿದರು.
ಸಮಾಜವಾದಿ ಪಕ್ಷದ ಹೆಸರನ್ನು ಉಲ್ಲೇಖಿಸದೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಕೆಂಪು ಟೊಪ್ಪಿ ಉತ್ತರಪ್ರದೇಶದ ಜನರಿಗೆ ರೆಡ್ ಅಲರ್ಟ್ ಆಗಿದೆ. ಕೆಂಪು ಟೊಪ್ಪಿಗೆ ನಿಮ್ಮ(ಜನರ) ನೋವು ಮತ್ತು ಸಮಸ್ಯೆಗಳಿಗೆ ಏನೂ ಮಾಡಿಲ್ಲ. ಕಾನೂನು ಬಾಹಿರ ಭೂಕಬಳಿಕೆ, ಹಗರಣ, ತಮ್ಮ ಖಜಾನೆ ತುಂಬಿಸಿಕೊಳ್ಳಲು ಮತ್ತು ಮಾಫಿಯಾಗಳಿಗೆ ಮುಕ್ತ ಸ್ವಾತಂತ್ರ್ಯ ಒದಗಿಸಿಕೊಡುವ ನಿಟ್ಟಿನಲ್ಲಿ ಕೆಂಪು ಟೊಪ್ಪಿ ಉತ್ತರಪ್ರದೇಶದಲ್ಲಿ ಸರ್ಕಾರ ರಚಿಸಲು ಬಯಸುತ್ತಿದೆ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ