ಧಾರಾವಾಹಿ ತರಹ ಕಾಯಿಸುವುದು ಬೇಡ: ರಮೇಶ್ ಜಾರಕಿಹೊಳಿಗೆ ಹೆಬ್ಬಾಳ್ಕರ್ ಸವಾಲು
ಸಂತೋಷ್ ಪಾಟೀಲ್ ಆತ್ಮಹತ್ಯೆ : ದಾಖಲೆಗಳಿದ್ದರೆ ಈಗಲೇ ಬಿಡುಗಡೆ ಮಾಡಲಿ
Team Udayavani, Apr 15, 2022, 2:01 PM IST
ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ವಿಚಾರದಲ್ಲಿ ರಮೇಶ್ ಜಾರಕಿಹೊಳಿ ಅವರ ಬಳಿ ದಾಖಲೆಗಳಿದ್ದರೆ ಈ ತಕ್ಷಣ ಬಿಡುಗಡೆ ಮಾಡಲಿ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇರ ಸವಾಲು ಹಾಕಿದ್ದಾರೆ.
ಬೆಳಗಾವಿ ಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹೆಬ್ಬಾಳ್ಕರ್ ಅವರು, ರಮೇಶ್ ಜಾರಕಿಹೊಳಿ ಅವರು ಸೋಮವಾರದವರೆಗೆ ಕಾಯುವುದು ಬೇಡ. ಜನರಿಗೆ ಧಾರಾವಾಹಿ ತರಹ ಅಥವಾ ಬ್ರೇಕಿಂಗ್ ನ್ಯೂಸ್ ತರಹ ಕಾಯಿಸುವುದು ಬೇಡ. ದಾಖಲೆಗಳಿದ್ದರೆ ಈಗಲೇ ಬಿಡುಗಡೆ ಮಾಡಲಿ ಎಂದರು.
ಸಂತೋಷ್ ಪಾಟೀಲ್ ವಿಷಯದಲ್ಲಿ ಬಿಜೆಪಿ ನಾಯಕರಲ್ಲೇ ಗೊಂದಲ ಇದೆ. ಸಚಿವ ಮುರುಗೇಶ ನಿರಾಣಿ ಹಾಗೂ ರಮೇಶ ಜಾರಕಿಹೊಳಿ ಕಾಮಗಾರಿ ಆಗಿದೆ ಎಂದು ಹೇಳುತ್ತಾರೆ. ಬಿಜೆಪಿ ಪದಾಧಿಕಾರಿಗಳು ಸಂತೋಷ್ ನಮ್ಮ ಕಾರ್ಯಕರ್ತ ಅಲ್ಲ ಎನ್ನುತ್ತಾರೆ. ರಮೇಶ್ ಅವರು ನನ್ನ ಕಾರ್ಯಕರ್ತ, ಮೊದಲಿಂದಲೂ ನನ್ನ ಜೊತೆಗಿದ್ದ ಎಂದು ಹೇಳುತ್ತಾರೆ. ಈ ರೀತಿಯ ಗೊಂದಲ ಗಳು ಬಿಜೆಪಿ ಯಲ್ಲಿದೆ. ಕಾಂಗ್ರೆಸ್ ನಲ್ಲಿ ಇಲ್ಲವೇ ಇಲ್ಲ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ