ಕಾಳಸಂತೆಯಲ್ಲಿ ರೆಮ್ ಡೆಸಿವಿಯರ್ ಮಾರಾಟ-ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಬಂಧನ
Team Udayavani, May 15, 2021, 9:30 PM IST
ಬೆಂಗಳೂರು: ರೆಮ್ ಡೆಸಿವಿಯರ್ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಸರ್ಕಾರಿ ಆಸ್ಪತ್ರೆಯ ಶುಶ್ರೂಷಕ(ನರ್ಸ್) ಅನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ಪೊಲೀಸರು ಬಂಧಿಸಿದ್ದಾರೆ.
ಜಯನಗರ ನಿವಾಸಿ ಮಾರುತಿ(23) ಬಂಧಿತ. ಆರೋಪಿಯಿಂದ ಆರು ರೆಮ್ ಡೆಸಿವಿಯರ್ ಅನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಆಸ್ಪತ್ರೆಯ ವೈದ್ಯರಿಗೆ ಆರೋಪಿಯ ಕೃತ್ಯದ ಬಗ್ಗೆ ಮಾಹಿತಿ ನೀಡಿ, ಮತ್ತೂಮ್ಮೆ ಈ ರೀತಿ ನಡೆದರೆ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ಕೂಡ ನೀಡಲಾಗಿದೆ ಎಂದು ಪೊಲೀಸರು ಹೇಳಿದರು.
ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಔಷಧ ನಿಯಂತ್ರಣಗಳಿಂದ ಐದಾರು ರೆಮ್ ಡೆಸಿವಿಯರ್ ಔಷಧಿಗಳ ಪೈಕಿ ಕೇವಲ ನಾಲ್ಕು ಅಥವಾ ಐದು(ರೋಗಿಯ ದೇಹದ ಸಾಮಾರ್ಥ್ಯಕ್ಕೆ ಅನುಗುಣವಾಗಿ) ಔಷಧಿ ಕೊಟ್ಟು, ಪೂರ್ಣ ಪ್ರಮಾಣದಲ್ಲಿ ಕೊಟ್ಟಿರುವುದಾಗಿ ಆಸ್ಪತ್ರೆಯ ದಾಖಲೆಯಲ್ಲಿ ನೊಂದಾಯಿಸುತ್ತಿದ್ದ. ಆರು ರೆಮ್ ಡೆಸಿವಿಯರ್ ಅನ್ನು ಜಯನಗರದ ಖಾಸಗಿ ಆಸ್ಪತ್ರೆ ಮುಂಭಾಗ ತಂದು ಅಕ್ರಮವಾಗಿ 15-30 ಸಾವಿರ ರೂ.ವರೆಗೆ ಮಾರಾಟಕ್ಕೆ ಮುಂದಾಗಿದ್ದ. ಈ ಮಾಹಿತಿ ಮೇರೆಗೆ ಆರೋಪಿಯನ್ನು ಮಾಲು ಸಮೇತ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ :ಸಸಿಹಿತ್ಲು ಬೀಚ್ನ ದುಸ್ಥಿತಿಗೆ ರಾಜ್ಯ ಸರ್ಕಾರವೇ ಹೊಣೆ: ಅಭಯಚಂದ್ರ
15 ದಿನಗಳ ಹಿಂದಷ್ಟೇ ಕೆಲಸಕ್ಕೆ ಸೇರಿದ್ದ
ಆರೋಪಿ ಮಾರುತಿ 15 ದಿನಗಳ ಹಿಂದಷ್ಟೇ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಿದ್ದ. ಆಸ್ಪತ್ರೆ ಮತ್ತು ಹೊರಗಡೆ ತನ್ನ ಪರಿಚಯಸ್ಥರ ಮೂಲಕ ಅಕ್ರಮವಾಗಿ ರೆಮ್ ಡೆಸಿವಿಯರ್ ಮಾರಾಟದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದ. ಬಳಿಕ ಒಂದು ವಾರ ಅಕ್ರಮವಾಗಿ ರೆಮ್ ಡೆಸಿವಿಯರ್ ಸಂಗ್ರಹದ ಬಗ್ಗೆ ಮಾಹಿತಿ ತಿಳಿದುಕೊಂಡಿದ್ದಾನೆ. ಅನಂತರ ಅವುಗಳನ್ನು ರೋಗಿಗಳು ಹಾಗೂ ಆಸ್ಪತ್ರೆಯ ವೈದ್ಯರ ಕಣ್ಣು ತಪ್ಪಿಸಿ ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಹೆಚ್ಚಿನ ಲಾಭ ಪಡೆಯಲು ಈ ರೀತಿಯ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು. ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ