ರೆಮಿಡಿಸಿವಿಯರ್‌ ಮಾಫಿಯಾ : ಪೊಲೀಸರಿಂದ 8ಕ್ಕೂ ಅಧಿಕ ಮಂದಿ ಸೆರೆ


Team Udayavani, Apr 19, 2021, 10:40 PM IST

ರೆಮಿಡಿಸಿವಿಯರ್‌ ಮಾಫಿಯಾ : ಪೊಲೀಸರಿಂದ 8ಕ್ಕೂ ಅಧಿಕ ಮಂದಿ ಸೆರೆ

ಬೆಂಗಳೂರು : ಕೊರೊನಾಗೆ ಪರಿಣಾಮಕಾರಿ ಔಷಧವಾಗಿರುವ “ರೆಮಿಡಿಸಿವಿಯರ್‌’ ಚುಚ್ಚಮದ್ದನ್ನು ಅಕ್ರಮವಾಗಿ ದಾಸ್ತಾನು ಮಾಡಿಕೊಂಡು ಅಧಿಕ ಬೆಲೆಗೆ ಮಾರಾಟ ಮಾಡುತ್ತಿರುವ ಬೃಹತ್‌ ಮಾಫಿಯಾ ಕರ್ನಾಟಕದಲ್ಲಿ ತಲೆ ಎತ್ತಿದೆ.

ಈ ಸಂಬಂಧ ಈಗಾಗಲೇ ಕಾರ್ಯಾಚರಣೆ ಆರಂಭಿಸಿರುವ ಪೊಲೀಸರು, ಬೆಂಗಳೂರು ಮತ್ತು ಮೈಸೂರಿನಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು 8ಕ್ಕೂ ಅಧಿಕ ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನುಳಿದಂತೆ ಬೇರೆ ಜಿಲ್ಲೆಗಳಲ್ಲಿ ಕೊರೊನಾ ರೋಗಿಗಳು ದಾಖಲಾಗಿರುವ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಮಾಹಿತಿ ಪಡೆದು, ಆಸ್ಪತ್ರೆಗಳು, ಅವುಗಳ ಮೆಡಿಕಲ್‌ ಸ್ಟೋರ್‌ಗಳು, ಸಮೀಪದ ಮೆಡಿಕಲ್‌ ಸ್ಟೋರ್‌ಗಳ ಮೇಲೆ ನಿಗಾ ವಹಿಸಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಗಳ ಸಹಯೋಗದೊಂದಿಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

3,750 – 4,000ರೂ. ನಿಗದಿ
ರಾಜ್ಯ ಸರಕಾರ “ರೆಮಿಡಿಸಿವಿಯರ್‌’ ಔಷಧ ಉತ್ಪಾದಿಸುವ ವಿವಿಧ ಕಂಪೆನಿಗಳ ಜತೆ ಒಡಂಬಡಿಕೆ ಮಾಡಿಕೊಂಡಿದ್ದು, 3,750-4,000 ರೂ. ಬೆಲೆಗೆ ವಿತರಿಸುವಂತೆ ಸೂಚಿಸಿದೆ. ಅದಕ್ಕಿಂತ ಹೆಚ್ಚಿನ ದರ ನಿಗದಿ ಪಡಿಸುವಂತಿಲ್ಲ. ಒಂದು ವೇಳೆ ಹೆಚ್ಚುವರಿ ದರ ವಿಧಿಸಿದರೆ ಅಂತಹ ಕಂಪೆನಿಗಳ ವಿರುದ್ಧ ಕಾನೂನು ಕ್ರಮದ ಜತೆಗೆ ಒಡಂಬಡಿಕೆ ರದ್ದು ಪಡಿಸುವ ಎಚ್ಚರಿಕೆ ನೀಡಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ ; ಡಿ.ಕೆ. ಶಿವಕುಮಾರ್

ಬೃಹತ್‌ ಮಾಫಿಯಾ
ಸರ್ಕಾರ ಜತೆಗಿನ ಒಡಂಬಡಿಕೆ ಪ್ರಕಾರ ಕೊರೊನಾ ಸೋಂಕಿತರನ್ನು ದಾಖಲಿಸಿಕೊಂಡು ಆಸ್ಪತ್ರೆಗಳು ರೋಗಿಗಳ ಸ್ಥಿತಿಗೆ ಅನುಗುಣವಾಗಿ ಅಗತ್ಯವಿರುವ ರೆಮ್‌ಡೆಸಿವಿಯರ್‌’ ಪೂರೈಸುವಂತೆ ಸಗಟು ವ್ಯಾಪಾರಿಗಳ ಬಳಿ ಬೇಡಿಕೆ ಇಡಬೇಕು. ಈ ವೇಳೆ ಆಸ್ಪತ್ರೆಯೂ ತನ್ನ ವಿಳಾಸದ ಜತೆಗೆ ಕೊರೊನಾ ರೋಗಿಯ ನಂಬರ್‌, ವಾರ್ಡ್‌ ಅನ್ನು ನಮೊದಿಸಿ ಆನ್‌ಲೈನ್‌ ಮೂಲಕ ಬೇಡಿಕೆ ಇಡಬೇಕು. ಅನಂತರ ಸಗಟು ವ್ಯಾಪಾರಿಗಳು ಔಷಧಿ ಸರಬರಾಜು ಮಾಡಬೇಕು. ಅದು ಹೊರತು ಪಡಿಸಿ ಹೆಚ್ಚುವರಿಯಾಗಿ ಪೂರೈಕೆ ಮಾಡುವಂತಿಲ್ಲ. ಬೇರೆಯವರಿಗೂ ಮಾರಾಟ ಮಾಡುವಂತಿಲ್ಲ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆಯೂ ಕೆಲ ಕಂಪನಿಗಳು ಅಕ್ರಮವಾಗಿ ಸಗಟು ವ್ಯಾಪಾರಿಗಳ ಮೂಲಕ ಆಸ್ಪತ್ರೆ ಆಡಳಿತ ಮಂಡಳಿ, ಮೆಡಿಕಲ್‌ ಸ್ಟೋರ್‌ಗಳಿಗೆ ಅಕ್ರಮವಾಗಿ ಔಷಧಿ ಪೂರೈಕೆ ಮಾಡಿ ಅಧಿಕ ಮೊತ್ತಕ್ಕೆ ಮಾರಾಟಕ್ಕೆ ಉತ್ತೇಜನ ನೀಡುತ್ತಿವೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮತ್ತೂಂದೆಡೆ ಕೆಲ ಖಾಸಗಿ ಆಸ್ಪತ್ರೆಗಳು ಹೆಚ್ಚವರಿಯಾಗಿ ರೆಮ್‌ಡೆಸಿವಿಯರ್‌ ಅನ್ನು ಖರೀದಿಸಿ ಸಮೀಪದ ಮೆಡಿಕಲ್‌ ಸ್ಟೋರ್‌ಗೆ ಪೂರೈಕೆ ಮಾಡಿ ಹೆಚ್ಚಿನ ದರಕ್ಕೆ ಮಾರಾಟ ಮಾಡಿಸುವ ಮೂಲಕ ಲಾಭ ಪಡೆದುಕೊಳ್ಳುತ್ತಿರುವ ವಿಚಾರವೂ ಪತ್ತೆಯಾಗಿದೆ. ಹೀಗಾಗಿ ರಾಜ್ಯದಲ್ಲಿ ಇದೊಂದು ಬೃಹತ್‌ ಮಾಫಿಯಾ ಆಗಿ ವಿಸ್ತರಿಸಿಕೊಂಡಿದ್ದು, ಈ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ :ಕೋವಿಡ್ ಎಫೆಕ್ಟ್ : ಯುಪಿಎಸ್‌ಸಿ ನೇಮಕಾತಿ ಸಂದರ್ಶನ ಮುಂದೂಡಿಕೆ

ಮೆಡಿಕಲ್‌ ಸ್ಟೋರ್‌ಗೆ ಅನುಮತಿ ಇಲ್ಲ
ಕೊರೊನಾ ಸೋಂಕಿತರು ದಾಖಲಾದ ಆಸ್ಪತ್ರೆಗಳು ಹೊರತು ಪಡಿಸಿ ಬೇರೆ ಮೆಡಿಕಲ್‌ ಸ್ಟೋರ್‌ಗಳಲ್ಲಿ ರೆಮ್‌ಡೆಸಿವಿಯರ್‌’ ಮಾರಾಟಕ್ಕೆ ಅನುಮತಿ ನೀಡಿಲ್ಲ. ಒಂದು ವೇಳೆ ಮಾರಾಟ ಮಾಡಿದರೆ ಅದು ಅಕ್ರಮ. ಆದರೂ ಕೆಲ ಔಷಧಿ ಮಳಿಗೆಯಲ್ಲಿ ಮಾರಾಟ ಮಾಡುತ್ತಿರುವ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಪೊಲೀಸರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ರೆಮ್‌ಡೆಸಿವಿಯರ್‌’ ಅಕ್ರಮ ಮಾರಾಟ ಸಂಬಂಧ ಈಗಾಗಲೇ ಬೆಂಗಳೂರು ಮತ್ತು ಮೈಸೂರಿನಲ್ಲಿ ಪ್ರಕರಣಗಳು ದಾಖಲಾಗಿದ್ದು, ಕೆಲ ಆರೋಪಿಗಳನ್ನು ಬಂಧಿಸಲಾಗಿದೆ. ಬೇರೆ ಜಿಲ್ಲೆಗಳಲ್ಲೂ ನಿರಂತರವಾಗಿ ಕಾರ್ಯಾಚರಣೆ ಮುಂದುವರಿದಿದೆ.
– ಪ್ರತಾಪ್‌ ರೆಡ್ಡಿ, ರಾಜ್ಯ ಕಾನೂನು ಸುವ್ಯವಸ್ಥೆ, ಎಡಿಜಿಪಿ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.