ಕಾಮರೂಪಿ ಖ್ಯಾತಿಯ ಹಿರಿಯ ಪತ್ರಕರ್ತ ಎಂ.ಎಸ್. ಪ್ರಭಾಕರ್ ವಿಧಿವಶ
Team Udayavani, Dec 29, 2022, 3:13 PM IST
ಬೆಂಗಳೂರು: ಕನ್ನಡ ಸಾಹಿತ್ಯ ವಲಯದಲ್ಲಿ ‘ಕಾಮರೂಪಿ’ ಎಂಬ ಕಾವ್ಯನಾಮದಿಂದ ಪರಿಚಿತರಾಗಿದ್ದ ಹಿರಿಯ ಪತ್ರಕರ್ತ, ಬರಹಗಾರ ಎಂ.ಎಸ್. ಪ್ರಭಾಕರ್ ಅವರು ಅಲ್ಪಕಾಲದ ಅಸೌಖ್ಯದಿಂದ ಕೋಲಾರದ ಕಠಾರಿಪಾಳ್ಯದ ಪೂರ್ವಜರ ನಿವಾಸದಲ್ಲಿ ಗುರುವಾರ ವಿಧಿವಶ ರಾಗಿದ್ದಾರೆ.
ಮೋಟನಹಳ್ಳಿ ಸೂರಪ್ಪ ಪ್ರಭಾಕರ್ ಅವರು ಕೋಲಾರದಿಂದ 12 ಕಿ.ಮೀ. ದೂರದಲ್ಲಿರುವ ಮೋಟನಹಳ್ಳಿ ಗ್ರಾಮದಲ್ಲಿ 1936 ರಲ್ಲಿ ಜನಿಸಿದರು. ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಇಂಗ್ಲಿಷ್ ಸ್ನಾತಕೋತ್ತರ ಪದವಿಯನ್ನು ಗಳಿಸಿದ ನಂತರ ಅವರು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು.ಅಸ್ಸಾಂನ ಗುವಾಹಟಿ ವಿಶ್ವವಿದ್ಯಾಲಯಕ್ಕೆ ತೆರಳುವ ಮೊದಲು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.
ಗುವಾಹಟಿ ವಿಶ್ವವಿದ್ಯಾನಿಲಯವು ಉಗ್ರರ ಚಟುವಟಿಕೆಗಳ ಕೇಂದ್ರವಾಗಿದ್ದರಿಂದ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಬಂಧನವಾಗುವುದನ್ನು ತಪ್ಪಿಸಲು ಪ್ರಭಾಕರ್ ಗುವಾಹಟಿಯಿಂದ ಮುಂಬೈಗೆ ಪ್ರಯಾಣ ಬೆಳೆಸಿದ್ದರು.ನಂತರ, ಅವರು ಮುಂಬೈನ ಎಕನಾಮಿಕ್ ಮತ್ತು ಪೊಲಿಟಿಕಲ್ ವೀಕ್ಲಿಯನ್ನು ಸೇರಿಕೊಂಡು ಪತ್ರಕರ್ತರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಏಳು ವರ್ಷಗಳ ಕಾಲ ಅಲ್ಲಿ ಕೆಲಸ ಮಾಡಿದ ನಂತರ, ಅವರನ್ನು 1983 ರಲ್ಲಿ ‘ದಿ ಹಿಂದೂ’ ಪತ್ರಿಕೆಯು ಅಸ್ಸಾಂನ ವಿಶೇಷ ವರದಿಗಾರರನ್ನಾಗಿ ನೇಮಿಸಿತ್ತು.
ಸಾಹಿತ್ಯ ಕ್ಷೇತ್ರದಲ್ಲಿ ಅವರ ಸಾಧನೆಗಾಗಿ 2018 ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಸಣ್ಣ ಕಾದಂಬರಿಗಳು ಕುದುರೆ ಮೊಟ್ಟೆ, ಅಂಜಿಕಿನ್ಯಾತಕಯ್ಯ ಅವರ ಪ್ರಮುಖ ಸಾಹಿತ್ಯ ಕೃತಿಗಳಾಗಿವೆ.
ಎಂ.ಎಸ್. ಪ್ರಭಾಕರ್ ಅವರ ಆಸೆಯಂತೆ ದೇಹವನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾನ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ