ಈ ಬಾರಿ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸಿಎಸ್‌ಕೆ ಆಡುವುದು ಅನುಮಾನ


Team Udayavani, Aug 30, 2020, 6:41 PM IST

ಈ ಬಾರಿ ಸಿಎಸ್‌ಕೆ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಆಡುವುದು ಅನುಮಾನ

ಹೊಸದಿಲ್ಲಿ: ಬಹು ನಿರೀಕ್ಷೆಯ ಐಪಿಎಲ್‌ ಈಗ ಕೋವಿಡ್ ನಿಂದ ತತ್ತರಿಸಿದೆ. ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವೊಂದರಲ್ಲೇ 13 ಪಾಸಿಟಿವ್‌ ಕೇಸ್‌ ಕಂಡುಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

ಈ ತಂಡದ ಆಟಗಾರರಾದ ದೀಪಕ್‌ ಚಹರ್‌ ಮತ್ತು ಋತುರಾಜ್‌ ಗಾಯಕ್ವಾಡ್‌ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಸುರೇಶ್‌ ರೈನಾ ಕೂಡ ಸುರಕ್ಷತೆಯ ಕಾರಣದಿಂದ ಐಪಿಎಲ್‌ ತೊರೆದು ಭಾರತಕ್ಕೆ ಮರಳಲಿದ್ದಾರೆ. ತಂಡದ ಕ್ವಾರಂಟೈನ್‌ ಅವಧಿಯನ್ನು ಹೆಚ್ಚಿಸಲಾಗಿದೆ. ಈ ಎಲ್ಲ ಕಾರಣಗಳಿಂದ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ತಂಡ ಆಡುವುದು ಅನುಮಾನ ಎನ್ನಲಾಗಿದೆ.

ಸಂಭಾವ್ಯ ವೇಳಾಪಟ್ಟಿ ಪ್ರಕಾರ ಐಪಿಎಲ್‌ನ ಎರಡು ಯಶಸ್ವಿ ತಂಡಗಳಾದ ಮುಂಬೈ ಇಂಡಿಯನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ನಡುವೆ ಸೆ. 19ರಂದು ಆರಂಭಿಕ ಪಂದ್ಯ ನಡೆಯಬೇಕಿದೆ. ಆದರೆ ಬಿಸಿಸಿಐ ಈಗ ಕೋವಿಡ್ ಕಂಟಕಕ್ಕೆ ಸಿಲುಕಿರುವ ಚೆನ್ನೈ ತಂಡದ ಚೇತರಿಕೆಗೆ ಹೆಚ್ಚಿನ ಕಾಲಾವವಕಾಶ ನೀಡಲು ನಿರ್ಧರಿಸಿದೆ. ಇದು ಕೂಟದ ವೇಳಾಪಟ್ಟಿಯನ್ನೇ ಅಸ್ತವ್ಯಸ್ತಗೊಳಿಸಲಿದ್ದು, ಇದರ ಪ್ರಕಟನೆಗೆ ಇನ್ನಷ್ಟು ದಿನಗಳು ಬೇಕಾಗಬಹುದು ಎಂದು ಭಾವಿಸಲಾಗಿದೆ.

“ಯೆಲ್ಲೋ ಆರ್ಮಿ’ ಖ್ಯಾತಿಯ ಧೋನಿ ಪಡೆಯ ಕ್ವಾರಂಟೈನ್‌ ಅವಧಿ ಮುಂದಿನ 6 ದಿನಗಳಿಗೆ ವಿಸ್ತರಿಸಲ್ಪಟ್ಟಿದೆ. ಪಾಸಿಟಿವ್‌ ಫ‌ಲಿತಾಂಶ ದಾಖಲಿಸಿದವರೆಲ್ಲ 14 ದಿನಗಳ ಐಸೊಲೇಶನ್‌ಗೆ ಒಳಗಾಗಲಿದ್ದಾರೆ. ಈ ಅವಧಿಯಲ್ಲಿ ನೆಗೆಟಿವ್‌ ಫ‌ಲಿತಾಂಶ ಬಂದರಷ್ಟೇ ಇವರು ಜೈವಿಕ ಸುರಕ್ಷಾ ವಲಯ ಪ್ರವೇಶಿಸಲಿದ್ದಾರೆ. ಈ ಎಲ್ಲ ಕಾರಣಗಳಿಂದ ಚೆನ್ನೈ ತಂಡದ ಅಭ್ಯಾಸ ವಿಳಂಬಗೊಳ್ಳಲಿದೆ. ಹೀಗಾಗಿ ಧೋನಿ ಪಡೆಗೆ ಆರಂಭಿಕ ಪಂದ್ಯದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದು ಎಂದು ಬಿಸಿಸಿಐ ಅಧಿಕಾರಿಯೊಬ್ಬರು “ಇನ್‌ಸೈಡ್‌ ನ್ಪೋರ್ಟ್‌’ಗೆ ತಿಳಿಸಿದ್ದಾರೆ.

 ಉಳಿದ ತಂಡಗಳ ಪಾಡೇನು?
ಈವರೆಗೆ ಕೇವಲ ಚೆನ್ನೈ ತಂಡವೊಂದರಲ್ಲೇ 13 ಪಾಸಿಟಿವ್‌ ಪ್ರಕರಣಗಳು ಕಂಡುಬಂದಿರುವುದು ಐಪಿಎಲ್‌ಗೆ ದೊಡ್ಡ ಹಿನ್ನಡೆ ಎಂಬುದರಲ್ಲಿ ಅನುಮಾನವಿಲ್ಲ. ಈ ಸಂದರ್ಭದಲ್ಲಿ ಉಳಿದ ತಂಡಗಳ ಪಾಡೇನು ಎಂಬ ಪ್ರಶ್ನೆ ಕಾಡುತ್ತಿದೆ. ಈ ತಂಡಗಳ ಕೋವಿಡ್‌-19 ಟೆಸ್ಟ್‌ ಫ‌ಲಿತಾಂಶದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಅಕಸ್ಮಾತ್‌ ಈ ತಂಡಗಳಲ್ಲಿಯೂ ಪಾಸಿಟಿವ್‌ ಕಂಡುಬಂದರೆ ಆಗ ಐಪಿಎಲ್‌ಗೆ ದೊಡ್ಡ ಗಂಡಾಂತರ ಎದುರಾಗುವುದು ಖಂಡಿತ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.