ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ
Team Udayavani, Mar 31, 2023, 5:30 AM IST
ಉಡುಪಿ: ಉದ್ಯಾವರ ಸಂಪಿಗೆನಗರದಲ್ಲಿ ಸುಮಾರು 35 ಅಡಿ ಆಳದ ಬಾವಿಗೆ ಬಿದ್ದಿದ್ದ ಸಂಪಿಗೆನಗರದ ಶಶೀಂದ್ರ(54) ಅವರನ್ನು ಅಗ್ನಿಶಾಮಕ ದಳದ ಸಿಬಂದಿ ರಕ್ಷಿಸಿದ್ದಾರೆ.
ಕಾಲುಜಾರಿ ಬಿದ್ದಿದ್ದ ಅವರು ಮೂಳೆಮುರಿತಕ್ಕೊಳಗಾಗಿ ನರಳಾಡುತ್ತಿದ್ದರು. ಸ್ಥಳೀಯರ ಮಾಹಿತಿಯಂತೆ ಅಗ್ನಿಶಾಮಕ ದಳದ ಠಾಣಾಧಿಕಾರಿ ಸತೀಶ್ ಎನ್. ಅವರ ಮಾರ್ಗದರ್ಶನದಂತೆ ಸಿಬಂದಿ ರವಿನಾಯ್ಕ ಅವರು ಹಗ್ಗದ ಸಹಾಯದಿಂದ ಬಾವಿಗೆ ಇಳಿದು ರಕ್ಷಣೆ ಮಾಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗುಣಮುಖರಾಗಿದ್ದಾರೆ. ರಕ್ಷಣ ಕಾರ್ಯಾಚರಣೆಯಲ್ಲಿ ಸಿಬಂದಿ ರಾಘವೇಂದ್ರ ಆಚಾರಿ, ತೌಸಿಫ್ ಅಹ್ಮದ್, ಗಣೇಶ್ ಎ., ಸಿದ್ದಿಕ್ ಸಹಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್