ರೇಣುಕಾಚಾರ್ಯ ಜಯಂತಿಗೆ ಸಂಶೋಧಕ ಚಂದ್ರಕಾಂತ ಬಿಜ್ಜರಗಿ ಆಕ್ಷೇಪ

ವಾಸ್ತವದಲ್ಲಿ ರೇಣುಕಾಚಾರ್ಯ ಎಂಬ ವ್ಯಕ್ತಿಯೇ ಇಲ್ಲ, ಹೋರಾಟದ ಎಚ್ಚರಿಕೆ

Team Udayavani, Mar 26, 2022, 1:32 PM IST

1-f-sfsdf

ವಿಜಯಪುರ : ವಾಸ್ತವಿಕವಾಗಿ ರೇಣುಕಾಚಾರ್ಯ ಎಂಬ ವ್ಯಕ್ತಿಯೇ ಇಲ್ಲದಿದ್ದರೂ ರಾಜ್ಯ ಸರ್ಕಾರ ರೇಣುಕಾಚಾರ್ಯ ಜಯಂತಿ ಆಚರಿಸುವ ಕುರಿತು ಆದೇಶ ಹೊರಡಿಸಿರುವುದು ಸರಿಯಾದ ಕ್ರಮವಲ್ಲ, ಇದರಿಂದ ಹಾಲುಮತದ ಐತಿಹಾಸಿಕ ಕುಲಗುರು ರೇವಣಸಿದ್ಧರಿಗೆ ಮಾಡುವ ಅವಮಾನ ಎಂದು ಸಂಶೋಧಕ ಚಂದ್ರಕಾಂತ ಬಿಜ್ಜರಗಿ ಆಕ್ಷೇಪಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸರಕಾರ ರಾಜ್ಯದಾದ್ಯಂತ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಆಚರಿಸುವ ಕುರಿತು ಮಾ.16 ರಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಸದರಿ ಜಯಂತಿಯ ಆಚರಣೆಗೆ ತಗಲುವ ವೆಚ್ಚವನ್ನು 2021-22ನೇ ಸಾಲಿನಲ್ಲಿ ಮಹಾಪುರುಷರ ಜಯಂತಿಗಳ ಆಚರಣೆಯ ಅನುದಾನದಲ್ಲಿ ಬಳಸಿಕೊಳ್ಳುವಂತೆ ಅದಿನ ಕಾರ್ಯದರ್ಶಿ ಕೆ.ಆರ್.ರಮೇಶ ಆದೇಶ ಹೊರಡಿಸಿದ್ದಾರೆ. ವಾಸ್ತವದಲ್ಲಿ ರೇಣುಕಾಚಾರ್ಯ ಎಂಬ ವ್ಯಕ್ತಿಯೇ ಇಲ್ಲ ಎಂದು ಚಂದ್ರಕಾಂತ ಬಿಜ್ಜರಗಿ ವಾದಿಸಿದ್ದಾರೆ.

ಅನೇಕ ಶಾಸನಗಳಲ್ಲಿ ಉಲ್ಲೇಖಿತನಾದ, 12ನೇ ಶತಮಾನದ ಹಾಲುಮತದ ಕುಲಗುರು ಜಗದ್ಗುರು ರೇವಣಸಿದ್ಧೇರ್ಶವರರು ಐತಿಹಾಸಿಕ ವ್ಯಕ್ತಿ. ಜಗದ್ಗುರು ರೇವಣಸಿದ್ಧೇಶ್ವರರನ್ನೇ ಆದಿರೇಣುಕ, ರೇಣುಕ, ರೇಣುಕಾಚಾರ್ಯ, ರೇಣುಕಾರಾಧ್ಯ ಮುಂತಾದ ಕಲ್ಪಿತ-ಪೌರಾಣಿಕ ನಾಮಗಳನ್ನು ಸೃಷ್ಟಿಸಿ, ರೇವಣಸಿದ್ಧನ ನಾಮವನ್ನು ದುರ್ಬಳಕೆ ಮಾಡುತ್ತಿದ್ದಾರೆ. ಆದಿರೇಣುಕ, ರೇಣುಕ, ರೇಣುಕಾಚಾರ್ಯ, ರೇಣುಕಾರಾಧ್ಯ ಮುಂತಾದ ನಾಮಗಳು ಕಲ್ಪಿತ ಪೌರಾಣಿಕ ನಾಮಗಳು ಎಂದು ವಿವರಿಸಿದ್ದಾರೆ.

ಜಗದ್ಗುರು ರೇವಣಸಿದ್ಧರೇ ಐತಿಹಾಸಿಕ ವ್ಯಕ್ತಿ ಎಂದು ವೀರಶೈವ ಸಮುದಾಯದ ಖ್ಯಾತ ಸಂಶೋಧಕರಾದ ಡಾ.ಎಂ.ಚಿದಾನಂದಮೂರ್ತಿ, ಡಾ.ಎಂ.ಎಂ.ಕಲಬುರ್ಗಿ ಸೇರಿದಂತೆ ವೀರಶೈವ ಸಮುದಾಯದ ಹಲವು ವಿದ್ವಾಂಸರು ಈಗಾಗಲೇ ಒಪ್ಪಿಕೊಂಡಿದ್ದಾರೆ. ಹೀಗಾಗಿ ಕಲ್ಪಿತ-ಪೌರಾಣಿಕ ರೇಣುಕಾಚಾರ್ಯನ ಜಯಂತಿ ಆಚರಿಸಲು ಸರಕಾರ ಆದೇಶ ಹೊರಡಿಸುವುದರಿಂದ ನಿಜವಾದ ಐತಿಹಾಸಿಕ ಜಗದ್ಗುರು ಶ್ರೀ ರೇವಣಸಿದ್ಧನಿಗೆ ಸಿಗಬೇಕಾದ ಗೌರವ ತಪ್ಪಿಸಿರುವ ಹಾಲಿ ಸರಕಾರ ಹಾಲುಮತ ಧರ್ಮಕ್ಕೆ ಅನ್ಯಾಯ ಮಾಡುತ್ತಿದೆ ಎಂದು ದೂರಿದ್ದಾರೆ.

ನಮ್ಮ ಧರ್ಮಕ್ಕೆ ಮಾಡುತ್ತಿರುವ ಇಂಥ ಅವಮಾನಗಳನ್ನು ಹಾಲುಮತ ಸಮಾಜ ಖಂಡಿಸುತ್ತಿದ್ದು, ಬರುವ ವರ್ಷದಿಂದ ಸರ್ಕಾರವೇ ಜಗದ್ಗುರು ಶ್ರೀರೇವಣಸಿದ್ಧರ ಜಯಂತಿ ಸರಕಾರವೇ ಆಚರಿಸಲು ಆದೇಶ ಹೊರಡಿಸಬೇಕು. ಇಲ್ಲವಾದಲ್ಲಿ ಹಾಲುಮತ ಧರ್ಮದಿಂದ ರಾಜ್ಯಾದಾಧ್ಯಂತ ಹೋರಾಟ ರೂಪಿಸುವುದಾಗಿ ಎಚ್ಚರಿಸಿದ್ದಾರೆ.

Ad

ಟಾಪ್ ನ್ಯೂಸ್

High-Court

ಜನೌಷಧಿ ಕೇಂದ್ರ ಮುಚ್ಚುವ ಆದೇಶಕ್ಕೆ ಹೈಕೋರ್ಟ್‌ ತಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High-Court

ಜನೌಷಧಿ ಕೇಂದ್ರ ಮುಚ್ಚುವ ಆದೇಶಕ್ಕೆ ಹೈಕೋರ್ಟ್‌ ತಡೆ

Sharan–high-court

ದ್ವೇಷಭರಿತ ಹೇಳಿಕೆ ಪ್ರಕರಣ: ಹಿಂದೂ ಮುಖಂಡ ಶರಣ್‌ ಪಂಪ್‌ವೆಲ್‌ ಬಂಧನಕ್ಕೆ ಹೈಕೋರ್ಟ್‌ ತಡೆ

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

High-Court

ಜನೌಷಧಿ ಕೇಂದ್ರ ಮುಚ್ಚುವ ಆದೇಶಕ್ಕೆ ಹೈಕೋರ್ಟ್‌ ತಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.