ಜನರ ರಕ್ಷಣೆ ಮಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ: ಡಿ.ಕೆ ಶಿವಕುಮಾರ್ ಆಗ್ರಹ
Team Udayavani, Jul 16, 2020, 4:34 PM IST
ಬೆಂಗಳೂರು: ಕೋವಿಡ್-19 ಪಿಡುಗಿನಿಂದ ಜನರನ್ನು ಕಾಪಾಡಲು ನಿಮ್ಮಿಂದ ಸಾಧ್ಯವಾಗದಿದ್ದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯ ಸರ್ಕಾರಕ್ಕೆ ಅಗ್ರಹಿಸಿದ್ದಾರೆ.
ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಬುಧವಾರ ಕೋವಿಡ್ ವಿಚಾರದಲ್ಲಿ ಜನರನ್ನು ದೇವರೇ ಕಾಪಾಡಬೇಕು ಎಂದು ನೀಡಿದ ಹೇಳಿಕೆ ನೀಡಿದ್ದರು. ಈ ಕುರಿತು ಪ್ರತಿಕ್ರಯಿಸಿದ ಶಿವಕುಮಾರ್ , ಶ್ರೀರಾಮುಲು ಅವರ ಹೇಳಿಕೆಯಿಂದ ಇಡೀ ರಾಜ್ಯ ತಲ್ಲಣಗೊಂಡಿದೆ. ಅಧಿಕಾರಕ್ಕಾಗಿ ಬಹಳ ಶ್ರಮ ವಹಿಸಿ ಸರ್ಕಾರ ರಚನೆ ಮಾಡಿದರು. ಈಗ ಕೋವಿಡ್ ವಿಚಾರದಲ್ಲಿ ನಾವು ಏನು ಮಾಡಲಿಕ್ಕೆ ಆಗುವುದಿಲ್ಲ ದೇವರೇ ಕಾಪಾಡಬೇಕು ಅಂತಾ ಮುಖ್ಯಮಂತ್ರಿಗಳ ತಂಡ ಹೇಳುತ್ತಿದೆ. ಇದು ಕೇವಲ ಶ್ರೀರಾಮುಲು ಅವರ ಹೇಳಿಕೆಯಲ್ಲ. ಅವರು ಸರ್ಕಾರದ ಧ್ವನಿಯಾಗಿ ಈ ಮಾತನ್ನು ಹೇಳಿದ್ದಾರೆ. ಈ ಹೇಳಿಕೆ ನೀಡಿದ ಮರುಕ್ಷಣದಿಂದಲೇ ಬಿಜೆಪಿ ಅಧಿಕಾರದಲ್ಲಿರಲು ಸಾಧ್ಯವಿಲ್ಲ. ಕೋವಿಡ್ ವಿಚಾರದಲ್ಲಿ ಜನರನ್ನು ದೇವರು ಕಾಪಾಡಬೇಕಾದರೆ, ನೀವು ಯಾಕೆ ಅಧಿಕಾರದಲ್ಲಿ ಇರಬೇಕು. ಜನರನ್ನು ನಿಮ್ಮಿಂದ ರಕ್ಷಣೆ ಮಾಡಲು ಆಗದಿದ್ದರೆ ರಾಜೀನಾಮೆ ನೀಡಿ ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರ ರಾಜೀನಾಮೆ ನೀಡಿ ರಾಷ್ಟ್ರಪತಿಗಳ ಆಳ್ವಿಕೆ ಜಾರಿಗೊಳಿಸಿ. ಅಧಿಕಾರಿಗಳ ಮೂಲಕ ರಾಜ್ಯಪಾಲರೇ ಆಡಳಿತ ನಡೆಸಲಿ ಎಂದು ಆಗ್ರಹಿಸಿದ್ದಾರೆ.
ನೀವು ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲೂ ವಿಫಲರಾಗಿದ್ದೀರಿ. ಜನರು, ಪ್ರತಿಪಕ್ಷಗಳು ಎಲ್ಲ ರೀತಿಯ ಸಹಕಾರ ಕೊಟ್ಟ ನಂತರವೂ ನಿಮ್ಮ ಕೈಯಲ್ಲಿ ಆಗುವುದಿಲ್ಲ, ಎಲ್ಲ ದೇವರ ಕಥೆ ಎನ್ನುವುದಾದರೆ ಕೂಡಲೇ ಇಡೀ ಸರ್ಕಾರ ಅಧಿಕಾರದಿಂದ ಕೆಳಗಿಳಿಯುವುದು ಉತ್ತಮ ಎಂದು ಕಿಡಿಕಾರಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ