“ಗಬ್ಬರ್ ಸಿಂಗ್” ಖ್ಯಾತಿಯ ನಿವೃತ್ತ ಐಪಿಎಸ್ ಅಧಿಕಾರಿ ಕೆಎಸ್ ಎನ್ ಕೋವಿಡ್ ನಿಂದ ಸಾವು
ಶೋಲೆಯ ಗಬ್ಬರ್ ಸಿಂಗ್ ಹೆಸರಿನಲ್ಲಿ ಮೂರ್ತಿ ಕೂಡಾ ಜನಪ್ರಿಯರಾಗಿದ್ದರು ಎಂದು ವರದಿ ವಿವರಿಸಿದೆ.
Team Udayavani, May 17, 2021, 4:29 PM IST
ಹೈದರಾಬಾದ್:ಗಬ್ಬರ್ ಸಿಂಗ್ ಎಂದೇ ಜನಪ್ರಿಯರಾಗಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಕೆಎಸ್ ಎನ್ ಮೂರ್ತಿ(78ವರ್ಷ) ಸೋಮವಾರ ಕೋವಿಡ್ 19 ಸೋಂಕಿನಿಂದ ವಿಧಿವಶರಾಗಿದ್ದಾರೆ. ಇವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೈದರಾಬಾದ್ ನ ಬಂಜಾರ್ ಹಿಲ್ಸ್ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ(ಮೇ 16) ನಿವೃತ್ತ ಐಪಿಎಸ್ ಅಧಿಕಾರಿ ಮೂರ್ತಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 2000ನೇ ಇಸವಿಯಲ್ಲಿ ಸೇವೆಯಿಂದ ನಿವೃತ್ತರಾದ ನಂತರ ಬಂಜಾರಾ ಹಿಲ್ಸ್ ನಲ್ಲಿ ವಾಸವಾಗಿದ್ದರು.
ಆಂಧ್ರಪ್ರದೇಶದಾದ್ಯಂತ ಮೂರ್ತಿಯವರು ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. 1980ರಲ್ಲಿ ಹಳೇ ಹೈದರಾಬಾದ್ ನಗರದಲ್ಲಿ ಮೊದಲು ಅಧಿಕಾರಿಯಾಗಿ ನೇಮಕಗೊಂಡಿದ್ದರು. ಚಾರ್ ಮಿನಾರ್ ಪೊಲೀಸ್ ಠಾಣೆಯಲ್ಲಿ ಅಸಿಸ್ಟೆಂಟ್ ಕಮಿಷನರ್ ಆಗಿ ನೇಮಕವಾಗಿದ್ದರು. ಈ ಸಂದರ್ಭದಲ್ಲಿ ಸಮಾಜಘಾತುಕ ಶಕ್ತಿಗಳ ಹೆಡೆಮುರಿ ಕಟ್ಟಿದ್ದರು ಎಂದು ವರದಿ ತಿಳಿಸಿದೆ.
ಪೊಲೀಸ್ ವಲಯದಲ್ಲಿ ಶಿಸ್ತಿನ ಅಧಿಕಾರಿ ಎಂದೇ ಹೆಸರಾಗಿದ್ದರು. ಅಲ್ಲದೇ ಬಾಲಿವುಡ್ ನ ಅಮ್ಜದ್ ಖಾನ್ ನಟನೆಯ ಶೋಲೆಯ ಗಬ್ಬರ್ ಸಿಂಗ್ ಹೆಸರಿನಲ್ಲಿ ಮೂರ್ತಿ ಕೂಡಾ ಜನಪ್ರಿಯರಾಗಿದ್ದರು ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ