JDS ಟಿಕೆಟ್ ಮಾನದಂಡದ ಬಗ್ಗೆ ರೇವಣ್ಣ ಆಕ್ಷೇಪ
Team Udayavani, Apr 9, 2023, 8:00 AM IST
ಬೆಂಗಳೂರು: ಕಾಂಗ್ರೆಸ್ನಲ್ಲಿ ಟಿಕೆಟ್ ನೀಡಲು ಅನುಸರಿಸುವ ಮಾನದಂಡದ ಬಗ್ಗೆ ಮಾಜಿ ಸಚಿವ ಎಚ್.ಎಂ.ರೇವಣ್ಣ ಅಸಮಾಧಾನ ಹೊರಹಾಕಿದ್ದಾರೆ.
ಬಿಜೆಪಿಯಿಂದ ನಿನ್ನೆ ಬಂದವರಿಗೆ ಇಂದು ಟಿಕೆಟ್ ನೀಡಲಾಗುತ್ತಿದೆ. ನಾಳೆ ಬರುವವರಿಗೂ ಟಿಕೆಟ್ ನೀಡುವ ಭರವಸೆ ನೀಡಲಾಗುತ್ತಿದೆ. ಆದರೆ, ಪಕ್ಷಕ್ಕೆ ಕೆಲಸ ಮಾಡಿದವರಿಗೆ ಟಿಕೆಟ್ ಖಾತರಿ ಇಲ್ಲದಂತಾಗಿದೆ ಎಂದು ತಿಳಿಸಿದ್ದಾರೆ.
ಕ್ಷೇತ್ರ ಪುನರ್ ವಿಂಗಡಣೆ ನಂತರ ಮಾಗಡಿ ಬಿಟ್ಟು ತಪ್ಪು ಮಾಡಿದೆ. ಹೆಬ್ಟಾಳದಲ್ಲಿ ಸ್ಪರ್ಧಿಸಿ ನಾಲ್ಕು ಸಾವಿರ ಮತಗಳಲ್ಲಿ ಸೋತೆ. ನಂತರ ಚನ್ನಪಟ್ಟಣದಿಂದ ಪಕ್ಷದ ಆದೇಶದ ಮೇರೆಗೆ ಸ್ಪರ್ಧೆ ಮಾಡಿದೆ. ಹೀಗೆ ನನ್ನನ್ನು ಫುಟ್ಬಾಲ್ನಂತೆ ಆಡಿದರು ಎಂದು ಹೇಳಿದ್ದಾರೆ.
ಬೆಂಗಳೂರಿನ ದಾಸರಹಳ್ಳಿ, ದಾವಣಗೆರೆಯ ಹರಿಹರ ಹಾಗೂ ಬೆಳಗಾವಿಯ ಸವದತ್ತಿ ಯಲ್ಲಮ್ಮ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರಿಗೆ ಎರಡು ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡದಿರುವುದು ಬೇಸರ ತರಿಸಿದೆ ಎಂದು ಹೇಳಲಾಗಿದೆ.
ಈ ಮಧ್ಯೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎಚ್.ಎಂ.ರೇವಣ್ಣ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಸಮಾಧಾನ ಮಾಡಿದರು. ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನೂ ರೇವಣ್ಣ ಭೇಟಿ ಮಾಡಿ ಚರ್ಚಿಸಿ ತಮ್ಮ ನೋವು ತೋಡಿಕೊಂಡರು. ಮುಂದಿನ ಲಿಸ್ಟ್ನಲ್ಲಿ ಟಿಕೆಟ್ ಕೊಡುವ ಭರವಸೆ ದೊರೆತಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !