ದಶಕದ ಬೇಡಿಕೆಗೆ ಮರುಜೀವ


Team Udayavani, Feb 24, 2021, 6:10 AM IST

ದಶಕದ ಬೇಡಿಕೆಗೆ ಮರುಜೀವ

ಏಳು ಜಿಲ್ಲೆಗಳ ಪರಿಸ್ಥಿತಿ ಹೇಗಿದೆ?
ರಾಜ್ಯದ 31 ಜಿಲ್ಲೆಗಳ ಪೈಕಿ ಮುಂಬಯಿ ಕರ್ನಾಟಕ ಪ್ರಾಂತ್ಯದಲ್ಲಿ ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಸೇರಿ ಏಳು ಜಿಲ್ಲೆಗಳು ಬರುತ್ತವೆ. ಡಾ|ಡಿ.ಎಂ. ನಂಜುಂಡಪ್ಪ 2000ನೇ ಇಸವಿಯಲ್ಲಿ ನೀಡಿದ ವರದಿ ಪ್ರಕಾರ ಅತ್ಯಂತ ಹಿಂದುಳಿದ 5, ಅತೀ ಹಿಂದುಳಿದ 11, ಹಿಂದುಳಿದ 14 ಹಾಗೂ ಅಭಿವೃದ್ಧಿ ಹೊಂದಿದ 18 ತಾಲೂಕುಗಳು ಈ ಪ್ರಾಂತ್ಯದಲ್ಲಿವೆ. ಅತ್ಯಂತ ಹಿಂದುಳಿದ ತಾಲೂಕುಗಳ ಪಟ್ಟಿಯಲ್ಲಿದ್ದ ಬಾಗಲಕೋಟೆ ಜಿಲ್ಲೆ ಬೀಳಗಿ ಹೊರತುಪಡಿಸಿದರೆ ವಿಜಯಪುರ ಜಿಲ್ಲೆಯ ಇಂಡಿ, ಸಿಂದಗಿ, ಮುದ್ದೇಬಿಹಾಳ ಹಾಗೂ ಬಸವನಬಾಗೇವಾಡಿ ಈಗಲೂ ಅತ್ಯಂತ ಹಿಂದುಳಿದ ತಾಲೂಕುಗಳ ಪಟ್ಟಿಯಲ್ಲಿಯೇ ಇವೆ. ಅತೀ ಹಿಂದುಳಿದ ಪಟ್ಟಿಯಲ್ಲಿರುವ ಅಥಣಿ, ಗೋಕಾಕ, ಬಾದಾಮಿ, ಸವದತ್ತಿ, ಕಲಘಟಗಿ, ಶಿಗ್ಗಾಂವಿ, ಸವಣೂರು, ಹಾನಗಲ್‌ ಹಾಗೂ ಜೋಯಿಡಾ ತಾಲೂಕುಗಳು ಹಾಗೆಯೇ ಉಳಿದುಕೊಂಡಿವೆ. ಹುನಗುಂದ ಮತ್ತು ಮುಂಡರಗಿ ತಾಲೂಕುಗಳು ಸ್ವಲ್ಪ ಮಟ್ಟಿನ ಅಭಿವೃದ್ಧಿ ಕಂಡಿದ್ದು ಹಿಂದುಳಿದ ಪಟ್ಟಿಗೆ ಸೇರ್ಪಡೆಯಾಗಿವೆ. ಇನ್ನು ಹಿಂದುಳಿದ ತಾಲೂಕುಗಳ ಪಟ್ಟಿಯಲ್ಲಿನ ಅಂಕೋಲಾ, ಸಿದ್ದಾಪುರ, ಬ್ಯಾಡಗಿ, ಹಾವೇರಿ, ನರಗುಂದ, ನವಲಗುಂದ, ಬೀಳಗಿ ಹಾಗೂ ವಿಜಯಪುರ ಜಿಲ್ಲೆಗಳು ಅಭಿವೃದ್ಧಿಯತ್ತ ಮುಖ ಮಾಡಿದ್ದು, ಅಭಿವೃದ್ಧಿ ಸೂಚ್ಯಂಕ ಹೆಚ್ಚಳವಾಗಿದೆ.

ಮುಂಬಯಿ ದಾಸ್ಯದ ಸಂಕೇತ; ಕಿತ್ತೂರಾಗಲಿ ಮುಂಬಯಿ
ಬೆಳಗಾವಿ: ಸ್ವಾತಂತ್ರ್ಯ ಬಂದು 74 ವರ್ಷಗಳಾದರೂ ರಾಜ್ಯದ ಉತ್ತರ ಭಾಗದ ಏಳು ಜಿಲ್ಲೆಗಳ ಪ್ರಾಂತ್ಯವನ್ನು ಮುಂಬಯಿ ಕರ್ನಾಟಕ ಎಂದೇ ಕರೆಯುತ್ತಿದ್ದೇವೆ. ಇದೊಂದು ದಾಸ್ಯದ ಸಂಕೇತ ಎಂದು ಸಾಕಷ್ಟು ಬಾರಿ ಖ್ಯಾತ ಸಂಶೋಧಕ ಡಾ|ಚಿದಾನಂದ ಮೂರ್ತಿ ಮತ್ತು ನಾಡೋಜ ಪಾಟೀಲ ಪುಟ್ಟಪ್ಪ ಹೇಳುತ್ತಲೇ ಇದ್ದರು.

ನಾವು ಮುಂಬಯಿ ಕರ್ನಾಟಕ ಎಂದು ಕರೆಯುತ್ತಲೇ ಹೋದರೆ ಅದು ಮಹಾರಾಷ್ಟ್ರಕ್ಕೆ ಅನುಕೂಲ ಮಾಡಿಕೊಟ್ಟಂತೆ. ಹಿಂದೆ ಬ್ರಿಟಿಷರ ದಾಸ್ಯದಲ್ಲಿದ್ದೆವು. ಅನಂತರ ಅದರಿಂದ ಮುಕ್ತಿ ಸಿಕ್ಕಿತು. ಈಗ ಮತ್ತೆ ಅಂತಹ ಪರಿಸ್ಥಿತಿ ನಾವು ತಂದುಕೊಳ್ಳುವುದು ಬೇಡ. ಇದರ ಬದಲಾಗಿ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಿ ಎಂದು ಹೇಳುತ್ತಲೇ ಇದ್ದರು. ಆದರೆ ಸರಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ಮುಂಬಯಿ ಕರ್ನಾಟಕದ ಇತಿಹಾಸವನ್ನು ಸಂಕ್ಷಿಪ್ತವಾಗಿ ಹೇಳುವದಾದರೆ ಮುಂಬಯಿ ಕರ್ನಾಟಕ ಎಂದು ಹೆಸರು ಬಂದಿದ್ದು ಬ್ರಿಟಿಷರ ಕಾಲದಲ್ಲಿ. ಆಗ ರಾಜ್ಯಗಳ ಪರಿಕಲ್ಪನೆಯೇ ಇರಲಿಲ್ಲ. ಬ್ರಿಟಿಷರು ತಮ್ಮ ಆಡಳಿತದ ಅನುಕೂಲಕ್ಕಾಗಿ ಪ್ರಾಂತ್ಯಗಳನ್ನು ರಚನೆ ಮಾಡಿಕೊಂಡಿದ್ದರು. ಅದರಂತೆ ಮುಂಬಯಿ, ಹೈದರಾಬಾದ್‌, ಮದ್ರಾಸ್‌ ಪ್ರಾಂತ್ಯ ಎಂದು ಅಸ್ತಿತ್ವಕ್ಕೆ ಬಂದಿದ್ದವು. ಆಗ ಮುಂಬಯಿ ಪ್ರಾಂತ್ಯದಲ್ಲಿ ಬೆಳಗಾವಿ, ಅವಿಭಜಿತ ಧಾರವಾಡ, ವಿಜಯಪುರ ಹಾಗೂ ಕಾರವಾರ ಜಿಲ್ಲೆಗಳಿದ್ದವು. ಹೈದರಾಬಾದ್‌ ಪ್ರಾಂತ್ಯದಲ್ಲಿ ಬೀದರ, ಬಳ್ಳಾರಿ, ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಿದ್ದವು.
1920ರಲ್ಲಿ ಕರ್ನಾಟಕ ಏಕೀಕರಣದ ಪರಿಕಲ್ಪನೆ ಜೀವ ತಳೆಯಿತು. ಹರಿದು ಹಂಚಿಹೋಗಿದ್ದ ಕರ್ನಾಟಕದ ಪ್ರದೇಶಗಳನ್ನು ಒಂದುಗೂಡಿಸುವ ಚಿಂತನೆ ಈ ಅವಧಿಯಲ್ಲಿ ಗಟ್ಟಿಯಾಗಿ ಮೇಲೆದ್ದಿತು. 1956ರಲ್ಲಿ ಕರ್ನಾಟಕ ಏಕೀಕರಣವಾದ ಅನಂತರ ಕರ್ನಾಟಕಕ್ಕೆ ಮುಂಬಯಿ ಪ್ರಾಂತ್ಯದಿಂದ ಬಿಡುಗಡೆ ಸಿಕ್ಕಿತು. ಆದರೆ ಆ ಹೆಸರಿನಿಂದ ಇನ್ನೂ ಸಿಕ್ಕಿಲ್ಲ. ಖ್ಯಾತ ಸಂಶೋಧಕ ಡಾ|ಎಂ.ಚಿದಾನಂದ ಮೂರ್ತಿ ಅವರು ಹೈದರಾಬಾದ್‌ ಕರ್ನಾಟಕ ಮತ್ತು ಮುಂಬಯಿ ಕರ್ನಾಟಕದ ಬದಲು ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕದ ಪರಿಕಲ್ಪನೆ ಕೊಟ್ಟರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.