ಸುಶಾಂತ್ ಕೇಸ್: ರಿಯಾ ಚಕ್ರವರ್ತಿ & ಆದಿತ್ಯ ಠಾಕ್ರೆ ಬಗ್ಗೆ ರಿಯಾ ವಕೀಲರು ಹೇಳಿದ್ದೇನು?

ಪ್ರಕರಣದಲ್ಲಿ ಸತ್ಯಕ್ಕಿಂತ ಹೆಚ್ಚಾಗಿ ರಾಜಕೀಯ ವಿಚಾರವೇ ಮೇಲುಗೈ ಸಾಧಿಸಿದೆ ಎಂದು ವಾದಿಸಿದ್ದರು.

Team Udayavani, Aug 18, 2020, 4:06 PM IST

ಸುಶಾಂತ್ ಕೇಸ್: ರಿಯಾ ಚಕ್ರವರ್ತಿ & ಆದಿತ್ಯ ಠಾಕ್ರೆ ಬಗ್ಗೆ ರಿಯಾ ವಕೀಲರು ಹೇಳಿದ್ದೇನು?

ಮುಂಬೈ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ತನಿಖೆ ನಡೆಸಲು ಬಿಹಾರ ಪೊಲೀಸರಿಗೆ ಯಾವುದೇ ಅಧಿಕಾರ ವ್ಯಾಪ್ತಿ ಇಲ್ಲ. ಅಲ್ಲದೇ ನನ್ನ ಕಕ್ಷಿದಾರಳು ಕಾನೂನು ಬಾಹಿರ ತನಿಖೆಗೆ ಒಪ್ಪುವುದಿಲ್ಲ ಎಂದು ನಟಿ ರಿಯಾ ಚಕ್ರವರ್ತಿ ಪರ ವಕೀಲ ಸತೀಶ್ ಮಾನೆಶಿಂಧೆ ಮಂಗಳವಾರ (ಆಗಸ್ಟ್ 18, 2020) ತಿಳಿಸಿದ್ದಾರೆ.

ಕಾನೂನಿನ ಪ್ರಕಾರ, ಬಿಹಾರ ಪೊಲೀಸರು ಶೂನ್ಯ ಎಫ್ ಐಆರ್ ಅನ್ನು ದಾಖಲಿಸಿಕೊಂಡು ತನಿಖೆಯನ್ನು ಮುಂಬೈ ಪೊಲೀಸರಿಗೆ ವರ್ಗಾಯಿಸಬೇಕಿತ್ತು. ಈ ಪ್ರಕರಣದಲ್ಲಿ ಬಿಹಾರ ಪೊಲೀಸರಿಗೆ ಯಾವುದೇ ಕಾನೂನು ವ್ಯಾಪ್ತಿ ಇಲ್ಲ. ಈ ನಿಟ್ಟಿನಲ್ಲಿ ರಿಯಾ ಕಾನೂನು ಬಾಹಿರ ತನಿಖೆಗೆ ರಿಯಾ ಹಾಜರಾಗುತ್ತಿಲ್ಲ ಎಂದು ಹೇಳಿದರು.

ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಘಟನೆ ನಡೆದು 40 ದಿನಗಳ ಬಳಿಕ ದೂರು ಬಂದ ದಿನವೇ ಬಿಹಾರ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದರು. ಅಲ್ಲದೇ ತನಿಖೆಗೆ ಸಹಕರಿಸುವಂತೆ ನನ್ನ ಕಕ್ಷಿದಾರಳಿಗೆ ಬಿಹಾರ ಪೊಲೀಸರು ಯಾವುದೇ ನೋಟಿಸ್ ಕೂಡಾ ನೀಡಿಲ್ಲ. ಹಲವಾರು ಪತ್ರಿಕೆಗಳು ವಕೀಲರ ಹೇಳಿಕೆಯನ್ನು ಆಧರಿಸಿ ಬಿಹಾರ ಪೊಲೀಸರು ಎಫ್ ಐಆರ್ ದಾಖಲಿಸಲು ಹಿಂಜರಿಯುತ್ತಿದ್ದಾರೆ ಎಂದು ವರದಿ ಮಾಡಿದ್ದವು. ಆದರೆ ಬಿಹಾರದ ರಾಜಕೀಯದ ಒತ್ತಡದ ಮೂಲಕ ಎಫ್ ಐಆರ್ ದಾಖಲಿಸಿರುವುದಾಗಿ ದೂರಿದ್ದಾರೆ.

ರಿಯಾ ಚಕ್ರವರ್ತಿ (ಕಕ್ಷಿದಾರಳು) ಈವರೆಗೆ ಯಾವುದೇ ರೀತಿಯ ತನಿಖೆಯಿಂದ ನುಣುಚಿಕೊಂಡಿಲ್ಲ. ಆದರೆ ಏಜೆನ್ಸಿ ನಡೆಸುವ ನ್ಯಾಯ ಹಾಗೂ ನಿಷ್ಪಕ್ಷಪಾತ ತನಿಖೆಗೆ ಸಹಕಾರ ನೀಡಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಆಗಸ್ಟ್ 11ರಂದು ಕೊನೆಯ ವಿಚಾರಣೆ ಸಂದರ್ಭದಲ್ಲಿ ವಕೀಲ ಮಾನೆಶಿಂಧೆ ಅವರು, ಸುಶಾಂತ್ ಪ್ರಕರಣದಲ್ಲಿ ಸತ್ಯಕ್ಕಿಂತ ಹೆಚ್ಚಾಗಿ ರಾಜಕೀಯ ವಿಚಾರವೇ ಮೇಲುಗೈ ಸಾಧಿಸಿದೆ ಎಂದು ವಾದಿಸಿದ್ದರು. ಬಿಹಾರದಲ್ಲಿ ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಹಲವಾರು ರಾಜಕಾರಣಿಗಳು ಈ ಪ್ರಕರಣದ ಮೂಲಕ ಲಾಭ ಪಡೆದುಕೊಂಡಿರುವುದಾಗಿ ಪ್ರತಿಪಾದಿಸಿದ್ದರು.

ಆದಿತ್ಯ ಠಾಕ್ರೆ ವಿಚಾರದ ಬಗ್ಗೆ ಹೇಳಿದ್ದಿಷ್ಟು:

ಪ್ರಕರಣದಲ್ಲಿ ಶಿವಸೇನಾ ಯುವ ಮುಖಂಡ, ಸಚಿವ ಆದಿತ್ಯ ಠಾಕ್ರೆ ಕುರಿತ ಆರೋಪದ ಬಗ್ಗೆ ಮಾತನಾಡಿದ ಅವರು, ರಿಯಾಗೆ ಆದಿತ್ಯ ಬಗ್ಗೆ ಗೊತ್ತಿಲ್ಲ. ಈವರೆಗೆ ಭೇಟಿಯೂ ಆಗಿಲ್ಲ. ದೂರವಾಣಿಯಲ್ಲಿಯೂ ಕೂಡಾ ರಿಯಾ ಆದಿತ್ಯ ಜತೆ ಮಾತನಾಡಿಲ್ಲ. ಆದರೆ ಆದಿತ್ಯ ಶಿವಸೇನಾ ಮುಖಂಡ ಎಂಬುದನ್ನು ಕೇಳಿದ್ದರು ಎಂದು ವಕೀಲ ಮಾನೆಶಿಂಧೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.