ದೀಪಾವಳಿ ಹಬ್ಬಕ್ಕೆ ಊರಿಗೆ ಬರುತ್ತಿದ್ದ ಕಾರು ಅಪಘಾತ : ಒಂದೇ ಕುಟುಂಬದ ನಾಲ್ವರು ದುರ್ಮರಣ
Team Udayavani, Nov 15, 2020, 8:49 PM IST
ಗೋಕಾಕ: ದೀಪಾವಳಿ ಹಬ್ಬದಂದು ಊರಿಗೆ ಬರುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಸಮೀಪದ ಮದಾಪುರ ಕ್ರಾಸ್ನ ಪೆಟ್ರೋಲ್ ಪಂಪ್ ಹತ್ತಿರ ರವಿವಾರ ಸಂಭವಿಸಿದೆ.
ಸವದತ್ತಿ ತಾಲೂಕಿನ ಮುಗಳಿಹಾಳ ಗ್ರಾಮದ ಹನುಮಂತ ಫಕೀರಪ್ಪ ಪರಕನಟ್ಟಿ(28), ಸಿದ್ದವ್ವ ಫಕೀರಪ್ಪ ಪರಕನಟ್ಟಿ(50), ಮಾಲಾ ಹನುಮಂತ ಪರಕನಟ್ಟಿ(25) ಹಾಗೂ ಕೀರ್ತಿ ಹನುಮಂತ ಪರಕನಟ್ಟಿ(6) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೃತರು ರಾಮದುರ್ಗ ತಾಲೂಕಿನ ಮುರಕಟ್ನಾಳ ಗ್ರಾಮದ ಮೂಲ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.
ಟಾಟಾ ಏಸ್ (ಮಿನಿ ಟ್ರಕ್) ಹಾಗೂ ಅಲ್ಟೋ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ. ರವಿವಾರ ಸಂಜೆ ಅಲ್ಟೋ ಕಾರಿನಲ್ಲಿ ಕೊಲ್ಲಾಪುರದಿಂದ ಸವದತ್ತಿ ತಾಲೂಕಿನ ಮುಗಳಿಹಾಳ ಗ್ರಾಮಕ್ಕೆ ದೀಪಾವಳಿ ಹಬ್ಬದ ನಿಮಿತ್ತ ಬರುವಾಗ ಯರಗಟ್ಟಿಯಿಂದ ಗೋಕಾಕ ಕಡೆಗೆ ಹೋಗುತ್ತಿದ್ದ ಟಾಟಾ ಏಸ್ ಡಿಕ್ಕಿ ಹೊಡೆದಿದೆ. ಟಾಟಾ ಏಸ್ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಅಲ್ಟೋ ಕಾರಿನಲ್ಲಿ ಒಟ್ಟು 7 ಜನ ಪ್ರಯಾಣಿಸುತ್ತಿದ್ದು, ಈ ಪೈಕಿ ನಾಲ್ವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಮುಂದಿನ ವಾರದಿಂದ ಕಾನ್ಪುರದಲ್ಲಿ “ಸ್ಪುಟ್ನಿಕ್-5′ ಲಸಿಕೆ ಪ್ರಯೋಗ ಶುರು
ಉಪಜೀವನಕ್ಕಾಗಿ ಕುಟುಂಬ ಸಮೇತ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಈ ಕುಟುಂಬ ದುಡಿಯಲು ಹೋಗಿತ್ತು. ಈ ಕುರಿತು ಗೋಕಾಕ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ