ಮಲ್ಲೇಶ್ವರಂ ಸರ್ಕಾರಿ ಪ್ರೌಢಶಾಲೆಯಲ್ಲಿ ಪಾಠ ಮಾಡಿದ ರೋಬೊ!

ಬೋಧನೆಯಲ್ಲಿ ಚಾಕಚಕ್ಯತೆ, ಬೆರಗು ಮೂಡಿಸಿದ `ರೋಬೊ!

Team Udayavani, Mar 23, 2022, 7:20 PM IST

1-ddsad

ಬೆಂಗಳೂರು: ಪಾಠ- ಪ್ರವಚನಗಳಲ್ಲಿ ಬೋಧಕರಿಗೂ ವಿದ್ಯಾರ್ಥಿಗಳಿಗೂ ಸಹಕರಿಸಿ, ಕಲಿಕೆಯನ್ನು ಸುಲಭವಾಗಿಸುವಂತಹ `ಈಗಲ್’ ರೋಬೊ ಪರೀಕ್ಷಾರ್ಥ ಪ್ರಾತ್ಯಕ್ಷಿಕೆಯು ಬುಧವಾರದಂದು ಮಲ್ಲೇಶ್ವರಂ 13ನೇ ಅಡ್ಡರಸ್ತೆಯಲ್ಲಿರುವ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.ಶಾಲೆಯ ಬೋಧಕರು ಮತ್ತು ವಿದ್ಯಾರ್ಥಿನಿಯರು ಇದರಲ್ಲಿ ಪಾಲ್ಗೊಂಡು, ರೋಬೋದ ಕಾರ್ಯಕ್ಷಮತೆಗೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ಅವರು `ರೋಬೊಗೆ ಹಲವು ಪ್ರಶ್ನೆಗಳನ್ನು ಕೇಳಿದರು; ಹಾಗೆಯೇ, ಅದು ನೀಡಿದ ಉತ್ತರ ಮತ್ತು ನೆರವನ್ನು ಕಂಡು ಬೆರಗಾದರು.

ನಂತರ ಮಾತನಾಡಿದ ಅಶ್ವತ್ಥನಾರಾಯಣ ಅವರು, `ಇದು ಪ್ರಾಯೋಗಿಕ ಕಾರ್ಯಕ್ರಮವಾಗಿದ್ದು, ರೋಬೋದ ಕಾರ್ಯ ಸಾಮರ್ಥ್ಯವನ್ನು ವೀಕ್ಷಿಸಲಾಗಿದೆ. ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಜಾಗತಿಕ ಗುಣಮಟ್ಟದ ಬೋಧನೆಯ ಸಲುವಾಗಿ, ಇಂತಹ ರೋಬೋ ಗಳು ಇದ್ದರೆ ಒಳ್ಳೆಯದು’ ಎಂದು ಅಭಿಪ್ರಾಯಪಟ್ಟರು.

ರೋಬೊ‌ ಶಿಕ್ಷಕರಿಗೆ ಪರ್ಯಾಯ ಅಲ್ಲ. ಆದರೆ ಶಿಕ್ಷಕರಿಗೆ ಬೋಧನೆಯಲ್ಲಿ ಸಹಕರಿಸುವ ಕೆಲಸ ಮಾಡಲಿದೆ. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಮಟ್ಟ ಕೂಡ ಹೆಚ್ಚಾಗಲಿದೆ ಎಂದು ಹೇಳಿದರು.

21ನೇ ಶತಮಾನವು ತಂತ್ರಜ್ಞಾನದ ಯುಗವಾಗಿದ್ದು, ಬೋಧನೆಯಲ್ಲಿ ಇದರ ಅಳವಡಿಕೆ ಅಗತ್ಯವಾಗಿದೆ. ಇದರಿಂದಾಗಿ, ಸರಕಾರಿ ಶಾಲಾಕಾಲೇಜುಗಳು ಕೂಡ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿಮೆಯಿಲ್ಲದಂತೆ ವಿದ್ಯಾರ್ಥಿಗಳನ್ನು ಆಕರ್ಷಿಸಬಹುದು. ಇದರಿಂದ ಬಡಕುಟುಂಬಗಳ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ನುಡಿದರು.

ಮುಂದಿನ ದಿನಗಳಲ್ಲಿ `ಈಗಲ್’ ರೋಬೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ತೋರಿಸಲಾಗುವುದು. ನಂತರ ಅವರಿಂದಲೇ ಈ ಯೋಜನೆಗೆ ಚಾಲನೆ‌ ಕೊಡಿಸುವ ಉದ್ದೇಶ ಇದೆ. ಮಲ್ಲೇಶ್ವರ ಕ್ಷೇತ್ರದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಇದನ್ನು ಜಾರಿ ಮಾಡುವ ಉದ್ದೇಶ ಇದೆ ಎಂದು ಅವರು ವಿವರಿಸಿದರು.

ಇಂಡಸ್ ಟ್ರಸ್ಟ್ ನ ಸ್ಥಾಪಕ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಲೆ.ಜನರಲ್ ಅರ್ಜುನ್ ರಾಯ್, ಮಲ್ಲೇಶ್ವರ ಬಿಇಒ ಉಮಾದೇವಿ, ಕಾಲೇಜಿನ ಪ್ರಾಂಶುಪಾಲರಾದ ಡಾ.ರವಿ, ಶಾಲೆ ಉಪ ಪ್ರಾಂಶುಪಾಲ ರವಿಕುಮಾರ್ ಈ ಸಂದರ್ಭದಲ್ಲಿ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.