
ಕೆಲವು ಪಂದ್ಯಗಳಿಗೆ ರೋಹಿತ್ ರೆಸ್ಟ್ : ಸೂರ್ಯಕುಮಾರ್ ಯಾದವ್ ಉಸ್ತುವಾರಿ ನಾಯಕ
Team Udayavani, Mar 30, 2023, 8:17 AM IST

ಮುಂಬಯಿ: ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮ ಪ್ರಸಕ್ತ ಐಪಿಎಲ್ ಟೂರ್ನಿಯ ಕೆಲವು ಪಂದ್ಯಗಳಿಂದ ಹೊರಗುಳಿದು ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ. ಆಗ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಫ್ರಾಂಚೈಸಿ ಪ್ರಕಟಿಸಿದೆ.
ಐಪಿಎಲ್ ಮುಗಿದ ಬೆನ್ನಲ್ಲೇ ಭಾರತ ತಂಡ 2021-23ನೇ ಆವೃತ್ತಿಯ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಆಡಲಿದೆ. ಲಂಡನ್ನ ಓವಲ್ ಅಂಗಳದಲ್ಲಿ ಜೂ. 7ರಂದು ಆಸ್ಟ್ರೇಲಿಯ ವಿರುದ್ಧದ ಪ್ರಶಸ್ತಿ ಸಮರ ಮೊದಲ್ಗೊಳ್ಳಲಿದೆ. ಅನಂತರ ಬಹಳಷ್ಟು ಅಂತಾರಾಷ್ಟ್ರೀಯ ಸರಣಿಗಳು ಎದುರಾಗಲಿವೆ. ಹೀಗಾಗಿ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವುದು ರೋಹಿತ್ ಉದ್ದೇಶ.
ಯಾವ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂಬುದನ್ನು ಸ್ವತಃ ರೋಹಿತ್ ಶರ್ಮ ಅವರೇ ನಿರ್ಧರಿಸಲಿದ್ದಾರೆ. ಅವರಿಗೆ ವಿಶ್ರಾಂತಿ ನೀಡುವುದರಿಂದ ಯಾವುದೇ ಸಮಸ್ಯೆಯಾಗದು ಎಂಬುದಾಗಿ ಕೋಚ್ ಮಾರ್ಕ್ ಬೌಷರ್ ಹೇಳಿದರು.
ವಿಶ್ರಾಂತಿ ತೆಗೆದುಕೊಳ್ಳುವ ಕುರಿತು ರೋಹಿತ್ ಶರ್ಮ ಅಧಿಕೃತವಾಗೇನೂ ತಿಳಿಸಿಲ್ಲ. ಮಾಧ್ಯಮದವರ ಪ್ರಶ್ನೆ ಎದುರಾದಾಗ “ಇದು ಕೋಚ್ ಮಾರ್ಕ್ ಬೌಷರ್ಗೆ ಬಿಟ್ಟ ವಿಷಯ’ ಎಂದರು. ಮಾರ್ಕ್ ಬೌಷರ್ ಪ್ರತಿಕ್ರಿಯಿಸುತ್ತ, “ರೋಹಿತ್ ಬಯಸಿದರೆ ವಿಶ್ರಾಂತಿ ನೀಡಲು ನಮ್ಮದೇನೂ ಅಡ್ಡಿ ಇಲ್ಲ” ಎಂದರು.
ಫಿಟ್ನೆಸ್ ಅತ್ಯಗತ್ಯ
“ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳುವುದು ಆಟಗಾರರಿಗೆ ಬಿಟ್ಟ ಸಂಗತಿ. ಎಲ್ಲವನ್ನೂ ತಿಳಿದಿರುವ ಅವರು ತಮ್ಮ ದೇಹದ ಮೇಲೆ ಗಮನ ಹರಿಸಬೇಕು. ಸತತ ಕ್ರಿಕೆಟ್ ಪಂದ್ಯಗಳನ್ನು ಆಡುವುದರಿಂದ ಹೊರೆ ಜಾಸ್ತಿ ಆಗುತ್ತಿದೆ ಎಂದೆನಿಸಿದರೆ ಒಂದೆರಡು ಪಂದ್ಯಗಳಿಂದ ವಿಶ್ರಾಂತಿ ತೆಗೆದುಕೊಳ್ಳಬೇಕು’ ಎಂದೂ ಹೇಳಿದ್ದರು. ಇದೀಗ ಸ್ವತಃ ತಾವೇ ಅನುಸರಿಸುವ ಹಾದಿಯಲ್ಲಿದ್ದಾರೆ ರೋಹಿತ್ ಶರ್ಮ.
ಆಸ್ಟ್ರೇಲಿಯ ಎದುರಿನ ಏಕದಿನ ಸರಣಿಯ ಬಳಿಕ ಹೇಳಿಕೆಯೊಂದನ್ನು ನೀಡಿದ್ದ ರೋಹಿತ್ ಶರ್ಮ, “ಭಾರತದ ರಾಷ್ಟ್ರೀಯ ತಂಡದ ಆಟಗಾರರನ್ನು ಮುಂಬರುವ ಅಂತಾರಾಷ್ಟ್ರೀಯ ಸರಣಿಗೆ ಫಿಟ್ ಆಗಿರಿಸುವುದು ಐಪಿಎಲ್ ಫ್ರಾಂಚೈಸಿಗಳಿಗೆ ಬಿಟ್ಟ ವಿಚಾರ” ಎಂದಿದ್ದರು.
5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಕಳೆದ ಋತುವಿನಲ್ಲಿ ತೀರಾ ನೀರಸ ಪ್ರದರ್ಶನ ನೀಡಿತ್ತು. ಪ್ಲೇ ಆಫ್ ಕೂಡ ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ವರ್ಷ ಶ್ರೇಷ್ಠ ಮಟ್ಟದ ಆಟವನ್ನು ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

French Open 2023: ಜೆಬ್ಯುರ್-ಹದಾದ್ ಮಯಾ ಮುಖಾಮುಖಿ

WTC Final;ಹೇಗಿದ್ದೀತು ಓವಲ್ ಟ್ರ್ಯಾಕ್? ಟೆಸ್ಟ್ ಫೈನಲ್ ಗೂ ಮುನ್ನ ಒಂದು ಕುತೂಹಲ

Singapore Open Super 750; ಸಿಂಗಾಪುರದಲ್ಲಿ ಮಿಂಚಬೇಕಿದೆ ಸಿಂಧು

Bangladesh ಟೆಸ್ಟ್ ತಂಡದ ನೂತನ ನಾಯಕರಾಗಿ ಲಿಟನ್ ದಾಸ್ ನೇಮಕ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು