ರೋಹಿತ್‌ ಆಗಮನ: ಸರಣಿ ಗೆಲುವಿನತ್ತ ಗಮನ- ಗೆದ್ದರೆ ಭಾರತಕ್ಕೆ ಏಕದಿನ ಸರಣಿ


Team Udayavani, Mar 19, 2023, 8:00 AM IST

rohit sha

ವಿಶಾಖಪಟ್ಟಣ: ವಾಂಖೇಡೆಯ ಬೌಲಿಂಗ್‌ ಟ್ರ್ಯಾಕ್‌ ಮೇಲೆ ಗೆಲುವಿನ ಹೆಜ್ಜೆ ಹಾಕಿದ ಭಾರತವೀಗ ವಿಶಾಖಪಟ್ಟಣದಲ್ಲಿ ಏಕದಿನ ಸರಣಿ ಗೆಲುವಿನತ್ತ ನೋಟ ಹರಿಸಿದೆ. ಭಾನು ವಾರ ನಿರ್ಣಾಯಕ ಪಂದ್ಯ ಏರ್ಪಡಲಿದ್ದು, ಆಸ್ಟ್ರೇಲಿಯದ ಮೇಲೆ ಸಹಜವಾಗಿಯೇ ಸರಣಿ ಸಮಬಲದ ಒತ್ತಡವಿದೆ.
ನಾಯಕ ರೋಹಿತ್‌ ಶರ್ಮ ಮರಳಿರುವುದು ಭಾರತಕ್ಕೆ ಹೆಚ್ಚಿನ ಬಲ ಮೂಡಿಸಿದೆ. ಇವರಿಗಾಗಿ ಇಶಾನ್‌ ಕಿಶನ್‌ ಜಾಗ ಬಿಡಬೇಕಾಗುತ್ತದೆ. ರೋಹಿತ್‌-ಗಿಲ್‌ ಇನ್ನಿಂಗ್ಸ್‌ ಆರಂಭಿಸಲಿದ್ದಾರೆ.

ಮುಂಬಯಿ ಮೇಲಾಟದಲ್ಲಿ ಬೌಲರ್‌ಗಳೇ ಮೇಲುಗೈ ಸಾಧಿಸಿದ್ದರು. ಅದರಲ್ಲೂ ಮುಖ್ಯವಾಗಿ ವೇಗಿಗಳ ಕೈ ಮೇಲಾಗಿತ್ತು. ಆಸ್ಟ್ರೇಲಿಯ 188ಕ್ಕೆ ಕುಸಿದ ಬಳಿಕ ಭಾರತದ 4 ವಿಕೆಟ್‌ 39 ರನ್ನಿಗೆ ಉದುರಿ ಹೋಗಿತ್ತು. ಅಗ್ರ ಕ್ರಮಾಂಕದ ವೈಫ‌ಲ್ಯ ಎದ್ದು ಕಂಡಿತ್ತು. ಇಶಾನ್‌ ಕಿಶನ್‌ (3), ವಿರಾಟ್‌ ಕೊಹ್ಲಿ (4), ಸೂರ್ಯಕುಮಾರ್‌ ಯಾದವ್‌ (0) ಹೀಗೆ ಬಂದು ಹಾಗೆ ಹೋದರು. ಶುಭಮನ್‌ ಗಿಲ್‌ (20) ಒಂದಿಷ್ಟು ಹೋರಾಟ ನಡೆಸಿದರೂ ಅವರಿಂದ ಕ್ರೀಸ್‌ ಆಕ್ರಮಿಸಿಕೊಳ್ಳಲಾಗಲಿಲ್ಲ. ಗಿಲ್‌ ಮತ್ತು ಕೊಹ್ಲಿ ಅಂತಿಮ ಟೆಸ್ಟ್‌ನಲ್ಲಿ ಶತಕ ಬಾರಿಸಿ ಬಂದವರೆಂಬುದನ್ನು ಮರೆಯುವಂತಿಲ್ಲ.

5ಕ್ಕೆ 83 ಎಂಬ ಸಂಕಟದ ಸ್ಥಿತಿಯಿಂದ ತಂಡವನ್ನು ಮೇಲೆತ್ತಿ ನಿಲ್ಲಿಸಿದ ಶ್ರೇಯಸ್ಸು ಕೆ.ಎಲ್‌. ರಾಹುಲ್‌ ಮತ್ತು ರವೀಂದ್ರ ಜಡೇಜ ಅವರಿಗೆ ಸಲ್ಲುತ್ತದೆ. ಈ ಜೋಡಿಯನ್ನು ಬೇರ್ಪಡಿಸಲಾಗದ ಕಾಂಗರೂ ಪಡೆ ನಿಧಾನವಾಗಿ ಸೋಲಿನ ಸುಳಿಗೆ ಜಾರತೊಡಗಿತು. ಇವರಲ್ಲಿ ರಾಹುಲ್‌ ಟೆಸ್ಟ್‌ ವೈಫ‌ಲ್ಯದಿಂದಾಗಿ ಕೊನೆಯ 2 ಪಂದ್ಯಗಳಿಂದ ಹೊರಗುಳಿದಿದ್ದರು. ರವೀಂದ್ರ ಜಡೇಜ ಏಕದಿನ ಪಂದ್ಯವೊಂದನ್ನು ಆಡಿದ್ದು 8 ತಿಂಗಳ ಬಳಿಕ ಇದೇ ಮೊದಲು. ಇವರ 108 ರನ್‌ ಜತೆಯಾಟ ಭಾರತವನ್ನು ಸೋಲಿನ ದವಡೆಯಿಂದ ಪಾರುಮಾಡಿತು.

ರಾಹುಲ್‌ ಫಾರ್ಮ್ ಕಂಡುಕೊಂಡದ್ದು ಟೀಮ್‌ ಇಂಡಿಯಾ ಪಾಲಿಗೊಂದು ಸಂತಸದ ಸಂಗತಿ. ಆದರೆ ಅಗ್ರ ಕ್ರಮಾಂಕದ ಶೀಘ್ರ ಪತನಕ್ಕೊಂದು ಪರಿಹಾರ ಅಗತ್ಯವಿದೆ. ರೋಹಿತ್‌, ಕೊಹ್ಲಿ ಕ್ರೀಸ್‌ ಆಕ್ರಮಿಸಿಕೊಂಡರೆ ಇದು ಸಾಧ್ಯ. ಹಾಗೆಯೇ ಸೂರ್ಯಕುಮಾರ್‌ ಕೂಡ. ಟಿ20ಯಲ್ಲಿ ಸಿಡಿದು ನಿಲ್ಲುವ ಸೂರ್ಯ ಏಕದಿನದಲ್ಲಿನ್ನೂ ಪ್ರಜ್ವಲಿಸಿಲ್ಲ, ತಂಡದ ಸ್ಟಾರ್‌ ಆಟಗಾರನ ಮಟ್ಟಕ್ಕೆ ಏರಿಲ್ಲ. ಕಳೆದ 15 ಏಕದಿನಗಳಲ್ಲಿ 50ರ ಗಡಿ ಮುಟ್ಟಿಲ್ಲ. ಶ್ರೇಯಸ್‌ ಅಯ್ಯರ್‌ ಪುನರಾಗಮನ ವಿಳಂಬವಾದ್ದರಿಂದ ಸೂರ್ಯಕುಮಾರ್‌ ಅವರೇ 4ನೇ ಕ್ರಮಾಂಕಕ್ಕೆ ಆಸರೆಯಾಗಬೇಕಿದೆ. ಮುಖ್ಯವಾಗಿ ಇವರೆಲ್ಲ ಆಸ್ಟ್ರೇಲಿಯದ ಎಡಗೈ ವೇಗಿಗಳ ದಾಳಿಯನ್ನು ತಡೆದು ನಿಲ್ಲುವುದು ಅಗತ್ಯ.

ಮಧ್ಯಮ ಹಾಗೂ ಕೆಳ ಕ್ರಮಾಂಕದಲ್ಲಿ ಆಲ್‌ರೌಂಡರ್‌ಗಳಾದ ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜ ಮೇಲೆ ನಂಬಿಕೆ ಇಡಬಹುದು. ಇವರಲ್ಲಿ ಪಾಂಡ್ಯ ತೃತೀಯ ಸೀಮರ್‌ ಆಗಿಯೂ ಬಳಸಲ್ಪಡುವುದರಿಂದ ತಂಡದ ಬೌಲಿಂಗ್‌ ವಿಭಾಗದಲ್ಲಿ ಬದಲಾವಣೆ ಸಾಧ್ಯತೆ ಕಡಿಮೆ.

ಸಂಭಾವ್ಯ ತಂಡಗಳು
ಭಾರತ
ರೋಹಿತ್‌ ಶರ್ಮ (ನಾಯಕ), ಶುಬಮಾನ್‌ ಗಿಲ್‌, ವಿರಾಟ್‌ ಕೊಹ್ಲಿ, ಸೂರ್ಯ ಕುಮಾರ್‌ ಯಾದವ್‌ / ಇಶಾನ್‌ ಕಿಶನ್‌, ಕೆ.ಎಲ್‌. ರಾಹುಲ್‌ ( ವಿಕೆಟ್‌ ಕೀಪರ್‌), ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜ, ಶಾರ್ದೂಲ್‌ ಠಾಕೂರ್‌/ ವಾಷಿಂಗ್ಟನ್‌ ಸುಂದರ್‌, ಕುಲ್ದೀಪ್‌ ಯಾದವ್‌, ಮೊಹಮ್ಮದ್‌ ಶಮಿ, ಮೊಹಮ್ಮದ್‌ ಸಿರಾಜ್‌.

ಆಸ್ಟ್ರೇಲಿಯ
ಮಿಚೆಲ್‌ ಮಾರ್ಷ್‌, ಟ್ರೇವಿಸ್‌ ಹೆಡ್‌, ಸ್ಟೀವನ್‌ ಸ್ಮಿತ್‌ ( ನಾಯಕ), ಮಾರ್ನಸ್‌, ಅಲೆಕ್ಸ್‌ ಕ್ಯಾರಿ (ವಿಕೆಟ್‌ ಕೀಪರ್‌), ಕ್ಯಾಮ ರೋನ್‌ ಗ್ರೀನ್‌, ಗ್ಲೆನ್‌ ಮ್ಯಾಕ್ಸ್‌ ವೆಲ್‌, ಸ್ಟೋನಿಸ್‌, ಅಬ್ಬೆಟ್‌, ಮಿಚೆಲ್‌ ಸ್ಟಾರ್ಕ್‌, ಆ್ಯಡಂ ಜಂಪ.

ಟಾಪ್ ನ್ಯೂಸ್

TDY-22

ಸ್ಟಾರ್ಟ್‌ಅಪ್‌ ಕನಸು ಹೊತ್ತವರ ಚಿತ್ರ: ಮೇಡ್ ಇನ್ ಬೆಂಗಳೂರು

TDY-1

ಆನ್ಲೈನ್‌ ನಲ್ಲಿ ವಿದ್ಯುತ್‌ ಬಿಲ್‌ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

Vijay Mallya bought personal assets worth crores abroad before fleeing India: CBI

ಬ್ಯಾಂಕ್ ಸಾಲ ತೀರಿಸಲು ಮಲ್ಯ ಬಳಿ ಸಾಕಷ್ಟು ಹಣವಿತ್ತು,ಆದರೂ.; ಚಾರ್ಜ್’ಶೀಟ್ ಸಲ್ಲಿಸಿದ ಸಿಬಿಐ

TDY-21

ಜಗತ್ತನ್ನು ಆಳುತ್ತಿದೆ ರಾಕ್ಷಸ ಚಕ್ರವರ್ತಿ

indi-1

ಮದ್ಯದ ಅಮಲಿನಲ್ಲಿ ವಿಮಾನದಲ್ಲಿ ರಂಪಾಟ; ಇಬ್ಬರನ್ನು ಬಂಧಿಸಿದ ಮುಂಬೈ ಪೊಲೀಸರು

1-sdsadsd

‘ಮೋದಿ’ ಉಪನಾಮ ಮಾನನಷ್ಟ ಮೊಕದ್ದಮೆ ; ರಾಹುಲ್ ಗಾಂಧಿ ದೋಷಿ ಎಂದು ತೀರ್ಪು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-awsasa

ಇದು ಸಾಮೂಹಿಕ ವೈಫಲ್ಯ: ಸರಣಿ ಸೋಲಿನ ಬಳಿಕ ರೋಹಿತ್ ಶರ್ಮಾ

1-qewqewwqe

ವೈಫಲ್ಯದ ಮೇಲೆ ವೈಫಲ್ಯ ; ಮತ್ತೆ ಗೋಲ್ಡನ್ ಡಕ್ ದಾಖಲಿಸಿದ ಸೂರ್ಯಕುಮಾರ್ !

1-dsdsad

ಸೋಲಿಗೆ ಶರಣಾದ ಟೀಮ್ ಇಂಡಿಯಾ: ಏಕದಿನ ಸರಣಿ ಗೆದ್ದ ಆಸೀಸ್

1-sadsasad

ಸರಣಿ ನಿರ್ಣಾಯಕ ಪಂದ್ಯ: ಆಸೀಸ್ 269ಕ್ಕೆ ಆಲೌಟ್ ಮಾಡಿದ ಟೀಮ್ ಇಂಡಿಯಾ

1-sadsad-asd

ಏಕದಿನ ವಿಶ್ವಕಪ್ ಅಕ್ಟೋಬರ್ 5 ರಂದು ಪ್ರಾರಂಭವಾಗುವ ಸಾಧ್ಯತೆ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

TDY-22

ಸ್ಟಾರ್ಟ್‌ಅಪ್‌ ಕನಸು ಹೊತ್ತವರ ಚಿತ್ರ: ಮೇಡ್ ಇನ್ ಬೆಂಗಳೂರು

TDY-1

ಆನ್ಲೈನ್‌ ನಲ್ಲಿ ವಿದ್ಯುತ್‌ ಬಿಲ್‌ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

Vijay Mallya bought personal assets worth crores abroad before fleeing India: CBI

ಬ್ಯಾಂಕ್ ಸಾಲ ತೀರಿಸಲು ಮಲ್ಯ ಬಳಿ ಸಾಕಷ್ಟು ಹಣವಿತ್ತು,ಆದರೂ.; ಚಾರ್ಜ್’ಶೀಟ್ ಸಲ್ಲಿಸಿದ ಸಿಬಿಐ

TDY-21

ಜಗತ್ತನ್ನು ಆಳುತ್ತಿದೆ ರಾಕ್ಷಸ ಚಕ್ರವರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.