ಗಣಿನಾಡು ಬಳ್ಳಾರಿಯಲ್ಲಿ ದುಷ್ಕರ್ಮಿಗಳಿಂದ ರೌಡಿ ಶೀಟರ್ ಬರ್ಬರ ಹತ್ಯೆ
Team Udayavani, Jul 25, 2020, 6:41 PM IST
ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಮತ್ತೆ ಮಚ್ಚು ಲಾಂಗ್ ಗಳ ಸದ್ದು ಕೇಳಲಾರಂಭಿದೆ ದುಷ್ಕರ್ಮಿಗಳ ತಂಡವೊಂದು ರೌಡಿ ಶೀಟರ್ ಸಿಡಿ ರಮೇಶ್ (30) ನನ್ನು ಮಾರಕಾಯುಧಗಳಿಂದ ಕೊಚ್ಚಿ ಕೊಲೆಮಾಡಿದ ಘಟನೆ ಶನಿವಾರ ನಡೆದಿದೆ.
ಬಳ್ಳಾರಿಯ ಕೌಲ್ ಬಜಾರ್ ಪ್ರದೇಶದ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಬಳಿ ಈ ಘಟನೆ ನಡೆದಿದ್ದು. ಹಳೆ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ಗುಂಪೊಂದು ರೌಡಿ ಶೀಟರ್ ರಮೇಶ್ ಮೇಲೆ ದಾಳಿ ನಡೆಸಿ ಹತ್ಯೆ ಗೈದಿದ್ದಾರೆ.
ಸ್ಥಳಕ್ಕೆ ಕೌಲ್ ಬಜಾರ್ ಪೊಲೀಸರು ಭೇಟಿ, ಪರಿಶೀಲನೆ. ಈ ಹಿಂದೆ ಇವರ ಸಹೋದರ ಸಿಡಿ ರವಿಯವರನ್ನೂ ಸಹ ಕೊಲೆ ಮಾಡಲಾಗಿತ್ತು.