ನಾಲ್ಕಕ್ಕೆ ನಾಗಾಲೋಟ ಬೆಳೆಸೀತೇ ರಾಯಲ್‌ ಚಾಲೆಂಜರ್ ?


Team Udayavani, Apr 22, 2021, 7:00 AM IST

ನಾಲ್ಕಕ್ಕೆ ನಾಗಾಲೋಟ ಬೆಳೆಸೀತೇ ರಾಯಲ್‌ ಚಾಲೆಂಜರ್ ?

ಮುಂಬಯಿ : ಗೆಲುವಿನ ನಾಗಾಲೋಟ ಮುಂದುವರಿಸುತ್ತಿರುವ ಆರ್‌ಸಿಬಿ ತನ್ನ ಅಭಿಯಾನವನ್ನು ನಾಲ್ಕಕ್ಕೆ ವಿಸ್ತರಿಸುವ ಯೋಜನೆಯಲ್ಲಿದೆ. ಗುರುವಾರದ ಮುಖಾ ಮುಖೀಯಲ್ಲಿ ಕೊಹ್ಲಿ ಪಡೆಯನ್ನು ಎದುರಿಸುವ ತಂಡ ರಾಜಸ್ಥಾನ್‌ ರಾಯಲ್ಸ್‌. ಆರ್‌ಸಿಬಿಗೆ ಇದು ಮುಂಬಯಿಯಲ್ಲಿ ಮೊದಲ ಪಂದ್ಯವಾಗಿದೆ.

“ವಾಂಖೇಡೆ ಟ್ರ್ಯಾಕ್‌’ ಬ್ಯಾಟಿಂಗಿಗೆ ಹೆಚ್ಚಿನ ನೆರವು ನೀಡಲಿರುವ ಕಾರಣ ಇಲ್ಲಿ ಚೇಸಿಂಗ್‌ ನಡೆಸುವ ತಂಡಕ್ಕೆ ಮೇಲುಗೈ ಅವಕಾಶ ಜಾಸ್ತಿ. ಹೀಗಾಗಿ ಟಾಸ್‌ ಗೆಲುವು ನಿರ್ಣಾಯಕವಾಗಲಿದೆ.

ಆರ್‌ಸಿಬಿ ಬ್ಯಾಟಿಂಗ್‌ ಬಲಿಷ್ಠ
ಚೆನ್ನೈಯ ಬೌಲಿಂಗ್‌ ಟ್ರ್ಯಾಕ್‌ನಲ್ಲೂ ಚೇತೋಹಾರಿ ಬ್ಯಾಟಿಂಗ್‌ ನಡೆಸಿದ ಆರ್‌ಸಿಬಿ ವಾಂಖೇಡೆಯಲ್ಲಿ ರನ್‌ ಮಳೆ ಸುರಿಸುವ ಸಾಧ್ಯತೆ ಇದೆ. ಅಮೋಘ ಫಾರ್ಮ್ನಲ್ಲಿರುವ ಮ್ಯಾಕ್ಸ್‌ವೆಲ್‌, ಎಬಿಡಿ ಹೊಡಿಬಡಿ ಆಟಕ್ಕಿಳಿದರೆ, ನಾಯಕ ಕೊಹ್ಲಿ ಕೂಡ ಸಿಡಿದು ನಿಂತರೆ ತಂಡ ಇನ್ನೂರರ ಗಡಿ ದಾಟುವುದನ್ನು ತಡೆಯುವುದು ಕಷ್ಟವಾದೀತು.

ರಾಜಸ್ಥಾನ್‌ ಬೌಲಿಂಗ್‌ ದುರ್ಬಲ
ರಾಜಸ್ಥಾನ್‌ ಕೂಡ ಬ್ಯಾಟಿಂಗ್‌ ಬಲವನ್ನೇ ನೆಚ್ಚಿಕೊಂಡಿರುವ ತಂಡ. ದೊಡ್ಡ ಮೊತ್ತವನ್ನು ಚೇಸ್‌ ಮಾಡುವುದರಲ್ಲಿ ಸದಾ ಒಂದು ಕೈ ಮೇಲು. ಐಪಿಎಲ್‌ ನಾಯಕತ್ವದ ಮೊದಲ ಪಂದ್ಯದಲ್ಲೇ ಸೆಂಚುರಿ ಬಾರಿಸಿದ ಮೊದಲಿಗನೆಂಬ ಹಿರಿಮೆಯ ಸಂಜು ಸ್ಯಾಮ್ಸನ್‌ ಮೇಲೆ ತಂಡ ಹೆಚ್ಚಿನ ನಿರೀಕ್ಷೆ ಇರಿಸಿಕೊಂಡಿದೆ. ಬಟ್ಲರ್‌, ಮಿಲ್ಲರ್‌, ವೋಹ್ರಾ, ಪರಾಗ್‌, ತೇವಟಿಯಾ, ಮಾರಿಸ್‌ ಕೂಡ ಮುನ್ನುಗ್ಗಿ ಬಾರಿಸುವವರೇ ಆಗಿದ್ದಾರೆ.

ಬೌಲಿಂಗ್‌ನಲ್ಲಿ ಚೇತನ್‌ ಸಕಾರಿಯಾ ಹೊರತುಪಡಿಸಿ ಉಳಿದವರೆಲ್ಲ ದುಬಾರಿಯಾ ಗುತ್ತಿದ್ದಾರೆ. ಜತೆಗೆ ಅನುಭವಿ ಸ್ಪಿನ್ನರ್‌ ಕೊರತೆಯೂ ತಂಡಕ್ಕೆ ಹಿನ್ನೆಡೆಯಾಗಿದೆ. ಈ ಸಮಸ್ಯೆಯನ್ನು ಹೋಗಲಾಡಿಸಿಕೊಂಡರೆ ರಾಜಸ್ಥಾನ್‌ಗೆ ಮೇಲುಗೈ ಅವಕಾಶ ಇದೆ.

ಬೌಲಿಂಗ್‌ ಪ್ರಯೋಗ ಸಲ್ಲದು
ಆರ್‌ಸಿಬಿಯ ಬೌಲಿಂಗ್‌ ವಿಭಾಗ ಕೂಡ ಈ ಬಾರಿ ಹೆಚ್ಚು ಘಾತಕ ಹಾಗೂ ವೈವಿಧ್ಯಮಯವಾಗಿದೆ. ಆದರೆ ಕೊನೆಯ ಹಂತದಲ್ಲಿ ಅನುಭವಿ ಬೌಲರ್‌ಗಳ ಓವರ್‌ ಬಾಕಿ ಇದ್ದರೂ ಸ್ಪಿನ್ನರ್‌ಗಳಿಗೋ ಅಥವಾ ಪಾರ್ಟ್‌ಟೈಮ್‌ ಬೌಲರ್‌ಗಳ ಕೈಗೆ ಚೆಂಡನ್ನಿತ್ತು ಪ್ರಯೋಗಕ್ಕಿಳಿಯುವ “ಹವ್ಯಾಸ’ವೊಂದು ಕ್ಯಾಪ್ಟನ್‌ ಕೊಹ್ಲಿಗೆ ಇದೆ. ಕೆಕೆಆರ್‌ ಎದುರಿನ ಪಂದ್ಯದಲ್ಲಿ ರಸೆಲ್‌ ಸಿಡಿಯುತ್ತಿದ್ದಾಗ ಸ್ಪಿನ್ನರ್‌ ಚಹಲ್‌ಗೆ ಓವರ್‌ ನೀಡಿದ್ದು ಇದಕ್ಕೊಂದು ಉತ್ತಮ ನಿದರ್ಶನ. ಸ್ವತಃ ಕೊಹ್ಲಿಯೇ ಒಂದು ಪಂದ್ಯದಲ್ಲಿ ಬೌಲಿಂಗ್‌ ಮಾಡಿ 28 ರನ್‌ ನೀಡುವ ಮೂಲಕ ಪಂದ್ಯದ ಸೋಲಿಗೆ ಕಾರಣವಾದುದನ್ನು ಮರೆಯುವಂತಿಲ್ಲ. ಹೀಗಾಗಿ ಅತಿಯಾದ ಆತ್ಮವಿಶ್ವಾಸ ಸಲ್ಲದು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.