ನಾನು ಇಷ್ಟು ಎತ್ತರಕ್ಕೆ ಏರಲು ಆರ್ ಎಸ್ ಎಸ್ ಕಾರಣ,ದೇವೇಗೌಡರು ನಮಗೆ ಆದರ್ಶ: ಬಿಎಸ್ ವೈ

15 ನೇ ವಿಧಾನಸಭೆ ಅಧಿವೇಶನಕ್ಕೆ ತೆರೆ; ಗಮನ ಸೆಳೆದ ಮಾಜಿ ಸಿಎಂ ಭಾಷಣ

Team Udayavani, Feb 24, 2023, 4:11 PM IST

1-yy

ಬೆಂಗಳೂರು : 15 ನೇ ವಿಧಾನಸಭೆ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ವಿದಾಯ ಭಾಷಣದ ಮೂಲಕ ಗಮನಸೆಳೆದರು. ನಾನು ಇಷ್ಟು ಎತ್ತರಕ್ಕೆ ಏರಲು ಆರ್ ಎಸ್ ಎಸ್ ಕಾರಣವೆಂದ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ನಮಗೆಲ್ಲ ಆದರ್ಶ ಎಂದರು.

”ಅನೇಕ ಒಳ್ಳೆಯ ಅವಕಾಶಗಳು ಸಿಕ್ಕವು, ಸಾಮಾನ್ಯ ಪುರಸಭೆ ಸದಸ್ಯನಾಗಿ ಮುಖ್ಯಮಂತ್ರಿ ಆಗುವ ಅವಕಾಶ ದೊರಕಿತು. ಆ ಕಾಲದಲ್ಲಿ ರಸ್ತೆಗಳು ಸರಿ ಇಲ್ಲದ ಕಾಲದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಜೊತೆ ಪ್ರವಾಸ ಮಾಡುವ ಸೌಭಾಗ್ಯ ದೊರಕಿತು. ಇಲ್ಲಿ ಇರುವ ಸದಸ್ಯರು ನಂಬುತ್ತೀರೋ ಇಲ್ಲವೋ ಗೊತ್ತಿಲ್ಲ.ನಾನು ಅನೇಕ ಕಡೆ ಭಾಷಣ ಆರಂಭಿಸಿದ ಬಳಿಕ ವಾಜಪೇಯಿ ಅವರು, ಅಡ್ವಾಣಿ, ಮುರಳಿ ಮನೋಹರ್ ಜೋಶಿ ಅವರು ಬರುತ್ತಿದ್ದರು” ಎಂದರು.

”ಯಾರೂ ಇರಲಿಲ್ಲ, ಶಾಸನ ಸಭೆಯಲ್ಲಿ ನಾವು ಇಬ್ಬರೇ ಇದ್ದೆವು. ಅಂದು ಯಾರೂ ಇರಲಿಲ್ಲ ನಮ್ಮ ಜೊತೆ, ವಸಂತ ಬಂಗೇರ ವರು ನಮ್ಮನ್ನು ಕೈಬಿಟ್ಟು ಹೋದರು. ಎಂದೂ ನಾನು ವಾಪಸ್ ತಿರುಗಿ ನೋಡಲಿಲ್ಲ, ನಾಡಿನ ಜನರ ಜ್ವಲಂತ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ” ಎಂದರು.

”ನನಗೆ ಅತ್ಯಂತ ತೃಪ್ತಿ ತಂದದ್ದು, ಬಗರ್ ಹುಕುಂ ಸಾಗುವಳಿ ಮಾಡಿದ ರೈತರಿಗೆ ನ್ಯಾಯ ಸಿಗದಿದ್ದಾಗ ವಿಧಾನಸೌಧದಲ್ಲಿ ಧರಣಿ ಕುಳಿತೆ, ಕೊನೆಗೆ ಅಂದಿನ ಸಿಎಂ ಆಗಿದ್ದ ಎಸ್.ಎಂ .ಕೃಷ್ಣ ಅವರು ಅದಕ್ಕೊಂದು ಪರಿಹಾರ ನೀಡಿದರು” ಎಂದು ನೆನಪಿಸಿಕೊಂಡರು.

”ನಾನು ಇಷ್ಟು ಎತ್ತರಕ್ಕೆ ಏರಬೇಕಾದರೆ, ನಿಲ್ಲಬೇಕಾದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್) ಕಾರಣ. ಅಲ್ಲಿ ಸಿಕ್ಕ ತರಬೇತಿ , ಅವಕಾಶ, ಮಾರ್ಗದರ್ಶನ ನಾನು ಜೀವನದಲ್ಲಿ ಮರೆಯಲು ಸಾಧ್ಯವಿಲ್ಲ”ಎಂದರು.

”ಇವತ್ತು ನಮಗೆಲ್ಲ ಆದರ್ಶ ಮಾನ್ಯ ಹೆಚ್.ಡಿ. ದೇವೇಗೌಡರು, ಸಣ್ಣ ವಿಚಾರವಲ್ಲ. ಇವತ್ತಿಗೂ ದೇಶದ, ರಾಜ್ಯದ ವಿಚಾರಗಳ ಕುರಿತು ಮಾರ್ಗದರ್ಶ ಮಾಡುತ್ತಾರೆ. ಇದಕ್ಕಿಂತ ಆದರ್ಶ ಬೇರೆ ಬೇಕಿಲ್ಲ . ಅವರನ್ನು ನೋಡಿ ಕಲಿಯಬೇಕಾದದ್ದು ಬಹಳಷ್ಟು ಇದೆ” ಎಂದರು.

”ನಾನು ಶಿಕಾರಿಪುರದ ಜನತೆಗೆ ಚಿರಋಣಿ, ಬದುಕಿನ ಕೊನೆಯುಸಿರು ಇರುವ ವರೆಗೆ ಅವರ ಸೇವೆ ಪ್ರಾಮಾಣಿಕವಾಗಿ ಮಾಡುತ್ತೇನೆ. ಬರುವಂತಹ ದಿನಗಳಲ್ಲಿ ರಾಜ್ಯದ ಉದ್ದಗಲಕ್ಕೆ ಓಡಾಡಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇನೆ ಎಂದರು. ಯಾರೂ ವಿಚಲಿತರಾಗುವ ಅಗತ್ಯವಿಲ್ಲ. ಒಂದು ದಿನವೂ ನನ್ನ ಸ್ವಂತಕ್ಕೆ ಬಳಸಿಕೊಳ್ಳುವುದಿಲ್ಲ ” ಎಂದು ವಿಪಕ್ಷಗಳಿಗೆ ಬಿಸಿ ಮುಟ್ಟಿಸಿದರು.

”ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರು ಮಾಡಿದ ಕೆಲಸಗಳು, ಒಬ್ಬ ಅಧ್ಯಕ್ಷರಾಗಿ ನೀವು (ವಿಶ್ವೇಶ್ವರ ಹೆಗಡೆ ಕಾಗೇರಿ) ಮಾಡಿದ ಕೆಲಸ ಅನುಸರಣೀಯ. ವಿಪಕ್ಷ ನಾಯಕನಾಗಿ ಸಿದ್ದರಾಮಯ್ಯ ಅವರ ಕೆಲಸ ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ” ಎಂದರು.

ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಾತನಾಡಿ, ”ವಿಧಾನಸೌಧ ಆಗುವುದರ ಹಿಂದಿರ ಹೋರಾಟ, ಉದ್ದೇಶ ಮತ್ತು ಶ್ರದ್ದೆಯಿಂದ ಕೂಡಿವೆ. ಸ್ವಾತಂತ್ರ್ಯ ಹೋರಾಟ, ಕರ್ನಾಟಕದ ಏಕೀಕರಣ ಮಹತ್ವದ ಘಟ್ಟ ಎಂದರು. ಮಧ್ಯರಾತ್ರಿ ಪಡೆದ ಸ್ವಾತಂತ್ರ್ಯ ವಿಶೇಷವಾಗಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆ ದೊಡ್ಡದಿದೆ. ಸಂವಿಧಾನದ ಅಡಿಯಲ್ಲಿ ರಾಜ್ಯಗಳ ಸ್ಥಾಪನೆ ಚಳವಳಿಗಳು ಹೋರಾಟಗಳು ಮಹತ್ವದ್ದಾಗಿದೆ” ಎಂದರು.

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.