ಪೋಲಿಯೋ ಲಸಿಕೆ ಸಂದರ್ಭದಲ್ಲಿಯೂ ಊಹಾಪೋಹ ಹರಡಿತ್ತು: ಕೋವಿಡ್ ಲಸಿಕೆ ಬಗ್ಗೆ ಕೇಂದ್ರ
ಕೋವಿಡ್ ಲಸಿಕೆಯ ಸುರಕ್ಷತೆ ಕುರಿತು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ
Team Udayavani, Jan 2, 2021, 12:37 PM IST
ನವದೆಹಲಿ: ಕೋವಿಡ್ ಲಸಿಕೆ ಕುರಿತು ಯಾವುದೇ ರೀತಿಯ ತಪ್ಪು ತಿಳಿವಳಿಕೆ ಬೇಡ. ನಿರೀಕ್ಷೆಯಂತೆ ಭಾರತದಲ್ಲಿಯೂ ಕೋವಿಡ್ ಲಸಿಕೆ ನೀಡಲು ಮುಂದಾಗಿದ್ದು, ಈ ಬಗ್ಗೆ ಪ್ರತಿಯೊಂದು ಹಂತದಲ್ಲೂ ವಿಸ್ತೃತವಾಗಿ ಅಧ್ಯಯನ ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಶನಿವಾರ(ಜನವರಿ 02) ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಸೂಚನೆಯಂತೆ ದೇಶದ ಎಲ್ಲಾ ರಾಜ್ಯಗಳು ಲಸಿಕೆ ವಿತರಣೆಯ ಪ್ರಾತ್ಯಕ್ಷಿಕೆ ನಡೆಸಲು ದೇಶಾದ್ಯಂತ ಡ್ರೈರನ್ ಆರಂಭಿಸಲಾಗಿದೆ. ಇದರಿಂದ ಬೃಹತ್ ಸಂಖ್ಯೆಯಲ್ಲಿ ಹೇಗೆ ಲಸಿಕೆ ನೀಡಬಹುದು ಎಂಬ ಬಗ್ಗೆ ಮಾರ್ಗ ಕಂಡುಕೊಳ್ಳಲು ಸಾಧ್ಯವಾಗಲಿದೆ. ಅಲ್ಲದೇ ಲಸಿಕೆ ನೀಡಲು ಬೇಕಾದ ತರಬೇತಿ ನೀಡುವ ಕುರಿತು ಮಾಹಿತಿ ದೊರೆಯಲಿದೆ ಎಂದು ಹೇಳಿದರು.
“ಕೋವಿಡ್ ಲಸಿಕೆಯ ಸುರಕ್ಷತೆ ಕುರಿತು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಕೋವಿಡ್ ಲಸಿಕೆ ಬಗ್ಗೆ ಎಲ್ಲವನ್ನೂ ಪರಿಶೀಲಿಸಿದ್ದೇವೆ. ಆರಂಭದಲ್ಲಿ ಪೋಲಿಯೊ ಲಸಿಕೆ ನೀಡುವ ಸಂದರ್ಭದಲ್ಲಿಯೂ ಇದೇ ರೀತಿ ಊಹಾಪೋಹ ಹರಿದಾಡಿತ್ತು. ಆದರೆ ಒಂದು ಬಾರಿ ಲಸಿಕೆ ಕೊಡಲು ಆರಂಭಿಸಿದ ಮೇಲೆ ಎಲ್ಲ ಜನರಲ್ಲಿಯೂ ಸುರಕ್ಷತೆಯೂ ಬಗ್ಗೆ ವಿಶ್ವಾಸ ಮೂಡಿಸಲಿದೆ ಎಂದು ದೆಹಲಿಯಲ್ಲಿ ಡ್ರೈರನ್ ಪರಿಶೀಲನೆ ಸಂದರ್ಭದಲ್ಲಿ ಹರ್ಷವರ್ಧನ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದರು.
ಇದನ್ನೂ ಓದಿ:ಪ್ರತಿಯೊಬ್ಬ ಹಿಂದೂ ದೇಶಭಕ್ತನೇ, ಅದು ಹಿಂದೂಗಳ ಮೂಲಗುಣ: ಮೋಹನ್ ಭಾಗವತ್
ಇದು ಪ್ರತಿಯೊಬ್ಬರಿಗೂ ಪರಿಣಾಮಕಾರಿ ಎಂದು ಭರವಸೆ ನೀಡಿರುವ ಡಾ. ಹರ್ಷ್ ವರ್ಧನ್ ಅವರು, ದಶಕಗಳ ಹಿಂದೆ ದೇಶಾದ್ಯಂತ ಪೋಲಿಯೊ ಲಸಿಕೆ ಅಭಿಯಾನ ನಡೆಸಿದಂತೆ ಕೋವಿಡ್ ಲಸಿಕೆ ಅಭಿಯಾನ ನಡೆಯಲಿದೆ ಎಂದರು. ಲಸಿಕೆ ನೀಡುವುದೊಂದನ್ನು ಬಿಟ್ಟು ಉಳಿದೆಲ್ಲ ಪ್ರಕ್ರಿಯೆಗಳು ನಡೆಯಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ